1.46 ಕೋಟಿ ರೂ. ಮೌಲ್ಯದ ಸಿಗರೇಟ್ ನಾಶ ಮಾಡಿದ ಬೆಂಗಳೂರು ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು
ಪಶ್ಚಿಮ ಏಷ್ಯಾ ಮತ್ತು ಥಾಯ್ಲೆಂಡ್ನಿಂದ ಪ್ರಯಾಣಿಕರು ಬೆಂಗಳೂರಿಗೆ ಕಳ್ಳಸಾಗಣೆ ಮಾಡುತ್ತಿದ್ದ1.46 ಕೋಟಿ ರೂಪಾಯಿ ಮೌಲ್ಯದ ಒಟ್ಟು 7.3 ಲಕ್ಷ ಸಿಗರೇಟ್ಗಳನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಶಪಡಿಸಿದ್ದಾರೆ.
ಸಿಗರೇಟ್ಗಳ ಒಟ್ಟು ಮೌಲ್ಯ ಸುಮಾರು 1.46 ಕೋಟಿ ರೂಪಾಯಿ ಎಂದು ಹೇಳಲಾಗಿದೆ, ನೆಲಮಂಗಲದ ಬೆಂಗಳೂರು ಇಕೋ ಪಾರ್ಕ್ ಪ್ರೈವೇಟ್ ಲಿಮಿಟೆಡ್ನಲ್ಲಿರುವ ಇನ್ಸಿನರೇಟರ್ನಲ್ಲಿ ಇಡೀ ದಿನ ನಾಶ ಮಾಡುವ ಪ್ರಕ್ರಿಯೆ ನಡೆಯಿತು. ಈ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣೀಕರಿಸಲ್ಪಟ್ಟಿದೆ.

"ಸಿಗರೇಟ್ಗಳನ್ನು ತಮ್ಮ ಸಾಮಾನು ಸರಂಜಾಮುಗಳಲ್ಲಿ ಮರೆಮಾಚುವ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲು ಪ್ರಯತ್ನಿಸಿದ ನೂರಾರು ಅಂತರಾಷ್ಟ್ರೀಯ ಪ್ರಯಾಣಿಕರಿಂದ ಹಲವು ತಿಂಗಳ ಅವಧಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ನಾವು ಪ್ರತಿ ಪ್ರಯಾಣಿಕರಿಗೆ ಗರಿಷ್ಠ 100 ಸಿಗರೇಟ್ಗಳನ್ನು ತರಲು ಅನುಮತಿ ನೀಡುತ್ತೇವೆ, ಅನುಮತಿಸಲಾದ ಸಂಖ್ಯೆಗಿಂತ ಹೆಚ್ಚಿನ ಸಿಗರೇಟ್ ಸಿಕ್ಕಾಗ ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಬುಕ್ ಮಾಡಲಾಗುತ್ತದೆ ಮತ್ತು ವಶಪಡಿಸಿಕೊಳ್ಳಲಾಗುತ್ತದೆ." ಎಂದು ಹಿರಿಯ ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ವಯಸ್ಸಾದ ಮಹಿಳೆಯಿಂದ 49,600 ಸಿಗರೇಟ್ ವಶ
ಪ್ರತಿಷ್ಠಿತ ಬ್ರಾಂಡೆಡ್ ಕಂಪನಿಗಳ ಹೊರತಾಗಿ, ಸಾಕಷ್ಟು ಸಂಖ್ಯೆಯ ಸಿಗರೇಟ್ಗಳು ನಕಲಿಗಳಾಗಿವೆ ಎಂದು ಹೇಳಿದ್ದಾರೆ. "ಈ ನಕಲಿ ಉತ್ಪನ್ನಗಳನ್ನು ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ತಯಾರಿಸಲಾಗುತ್ತದೆ ಮತ್ತು ನಂತರ ಭಾರತದಲ್ಲಿ ಮಾರಾಟ ಮಾಡಲಾಗುತ್ತದೆ. ಅವು ಒಂದೇ ರೀತಿ ಕಾಣುವುದರಿಂದ, ಸಾರ್ವಜನಿಕರಿಗೆ ಅವುಗಳಲ್ಲಿ ಹೆಚ್ಚಿನ ವ್ಯತ್ಯಾಸ ಕಾಣುವುದಿಲ್ಲ ಮತ್ತು ಖರೀದಿಸಲು ಸಾಧ್ಯವಾಗುವುದಿಲ್ಲ," ಎಂದು ಅವರು ಹೇಳಿದರು.
ನಾಶಪಡಿಸಿದ ಉತ್ಪನ್ನಗಳ ಪೈಕಿ ಇತ್ತೀಚೆಗೆ ಬುರ್ಖಾ ಧರಿಸಿದ ವಯಸ್ಸಾದ ಮಹಿಳೆಯೊಬ್ಬರು ಕಳ್ಳಸಾಗಣೆ ಮಾಡಿದ 49,600 ಸಿಗರೇಟ್ ಕಡ್ಡಿಗಳನ್ನು ತಮ್ಮ ಎರಡು ಬ್ಯಾಗ್ಗಳಲ್ಲಿ ಚೆಕ್-ಇನ್ ಮಾಡಲು ಹಸ್ತಾಂತರಿಸಿದರು. "ತನ್ನ ವಯಸ್ಸಿನ ಕಾರಣ, ಯಾರು ಅನುಮಾನ ಪಡುವುದಿಲ್ಲ ಎಂದು ಅವರು ಭಾವಿಸಿದ್ದರು. ಸ್ಕ್ಯಾನಿಂಗ್ ಸಮಯದಲ್ಲಿ ನಾವು ಅದನ್ನು ಪತ್ತೆಹಚ್ಚಿದ್ದೇವೆ" ಎಂದು ಅಧಿಕಾರಿ ಹೇಳಿದರು.
ಸಿಗರೇಟ್ ತರುವವರಿಗೆ ಹೆಚ್ಚಿನ ದಂಡ ವಿಧಿಸಲಾಗುತ್ತದೆ, ತರುವ ಪ್ರಮಾಣಕ್ಕೆ ಅನುಗುಣವಾಗಿ "ಅಕ್ರಮವಾಗಿ ಸಾಗಿಸುವ ವಸ್ತುಗಳ ಮೌಲ್ಯವು 50 ಲಕ್ಷ ರೂ. ಇವುಗಳನ್ನು ನೂರಾರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದರು. ಆದ್ದರಿಂದ ಯಾರನ್ನೂ ಬಂಧಿಸಲಾಗಿಲ್ಲ," ಎಂದು ಅವರು ಹೇಳಿದರು.
ಅಕ್ಟೋಬರ್ 2 ರಿಂದ 31 ರವರೆಗೆ ಕಸ್ಟಮ್ಸ್ ಇಲಾಖೆಯು ನಡೆಸುತ್ತಿರುವ ಸ್ವಚ್ಛತಾ ಅಭಿಯಾನದ ಅಂಗವಾಗಿ ವಿಲೇವಾರಿ ಮಾಡಲಾಯಿತು. ದಹನ ಪ್ರಕ್ರಿಯೆಯಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಏರ್ ಕಾರ್ಗೋ ಕಮಿಷನರೇಟ್ನ ಜಾಗೃತ ಘಟಕವು ಉಪಸ್ಥಿತರಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications