Bengaluru Airport: ಕೆಂಪೇಗೌಡ ಏರ್ಪೋರ್ಟ್ ಟರ್ಮಿನಲ್ 2ನಿಂದ ವಿದೇಶಿ ವಿಮಾನಗಳ ಹಾರಟ ಮುಂದೂಡಿಕೆ, ಕಾರಣ ತಿಳಿಯಿರಿ
ಬೆಂಗಳೂರು, ಆಗಸ್ಟ್, 31: ನಾಳೆಯಿಂದ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನ ಟರ್ಮಿನಲ್ 2ರಿಂದ ವಿದೇಶಿ ವಿಮಾನಗಳ ಹಾರಟವನ್ನು ಪ್ರಾರಂಭ ಮಾಡಬೇಕಿತ್ತು. ಆದರೆ ಇದೀಗ ದಿಢೀರ್ ಈ ಟರ್ಮಿಲ್ 2ನಿಂದ ಕೆಲ ದಿನಗಳವರೆಗೂ ವಿಮಾನ ಮುಂಡೂಡಿಕೆ ಮಾಡಲಾಗಿದೆ. ಹಾಗಾದರೆ ಇದಕ್ಕೆ ಪ್ರಮುಖ ಕಾರಣ ಏನು ಎನ್ನುವ ವಿವರವನ್ನು ಇಲ್ಲಿ ತಿಳಿಯರಿ.
ತಾಂತ್ರಿಕ ದೋಷ ಹಿನ್ನೆಲೆ ಕೆಂಪೇಗೌಡ ಏರ್ಪೋರ್ಟ್ನ ಟರ್ಮಿನಲ್ 2ರಿಂದ ವಿದೇಶಿ ವಿಮಾನಗಳ ಹಾರಾಟ ಮುಂದೂಡಿಕೆ ಮಾಡಲಾಗಿದೆ. ಕೆಲ ದಿನಗಳ ಕಾಲ ಟರ್ಮಿನಲ್ 1ರಿಂದಲೇ ವಿದೇಶಿ ವಿಮಾನಗಳು ಹಾರಾಟ ನಡೆಸಲಿವೆ. ಎಲ್ಲಾ ಅಂದುಕೊಂಡಂತೆಯೇ ಆಗಿದ್ದರೆ ನಾಳೆಯಿಂದಲೇ ಟರ್ಮಿನಲ್ 1ರಿಂದ ದೇಶಿಯ ಮತ್ತು ಟರ್ಮಿನಲ್ 2ರಿಂದ ವಿದೇಶಿ ವಿಮಾನಗಳ ಹಾರಾಟ ನಡೆಸಬೇಕಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆ ವಿಮಾಣ ಹಾರಾಟವನ್ನು ಮುಂದೂಡಲಾಗಿದೆ.

ಕೆಂಪೇಗೌಡ ಏರ್ಪೋರ್ಟ್ನ ಟರ್ಮಿನಲ್ ಎರಡು 5 ಸಾವಿರ ಕೋಟಿ ರೂಪಾಯಿ ವೆಚ್ಚದ ವಿನೂತನ ಗಾರ್ಡನ್ ಅನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಸೂಕ್ತ ಮತ್ತು ಯೋಗ್ಯ ಪ್ರಯಾಣಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಂತಿಮ ಪರಿಶೀಲನೆಯ ಸಲುವಾಗಿ ಕೊನೆಯ ಕ್ಷಣದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಂದಿನ ಆದೇಶದವರೆಗೂ ಅಂತಾರಾಷ್ಟ್ರೀಯ ಕಾರ್ಯಾಚರಣೆಗಳು ಟರ್ಮಿನಲ್ 1ರಿಂದ ನಡೆಯುತ್ತವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕೊನೇ ಕ್ಷಣದಲ್ಲಿ ತೆಗೆದುಕೊಂಡ ಈ ನಿರ್ಧಾರದಿಂದ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ನಮ್ಮ ಪ್ರಯಾಣಿಕರಿಗೆ ಸಾಧ್ಯವಾದಷ್ಟು ಉತ್ತಮ ಪ್ರಯಾಣದ ಅನುಭವವನ್ನು ನೀಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದು, ನಿಮ್ಮ ತಾಳ್ಮೆ ಮತ್ತು ತಿಳುವಳಿಕೆಯನ್ನು ಪ್ರಶಂಸಿಸುತ್ತೇವೆ.
ಅಂತಾರಾಷ್ಟ್ರೀಯ ಪ್ರಯಾಣದ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಬಿಐಎಎಲ್ ವಕ್ತಾರರು ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ ಅಂತಾ ಎಎನ್ಐ ವರದಿ ಮಾಡಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications