ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶೀಘ್ರವೇ 2ನೇ ರನ್ ವೇ ಆರಂಭ
ಬೆಂಗಳೂರು, ಜನವರಿ 11 : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ 2ನೇ ರನ್ ವೇ ಆರಂಭವಾಗಲಿದೆ. ದಕ್ಷಿಣ ಭಾರತದಲ್ಲಿಯೇ ಎರಡು ರನ್ ವೇ ಹೊಂದಿರುವ ವಿಮಾನ ನಿಲ್ದಾಣ ಎಂಬ ಕೀರ್ತಿ ಬೆಂಗಳೂರಿನ ಮುಡಿಗೇರಲಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2ನೇ ರನ್ ವೇ ನಿರ್ಮಾಣ ಕಾರ್ಯ ಸೆಪ್ಟೆಂಬರ್ 2019ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಅಕ್ಟೋಬರ್ 1ರಿಂದ ನೂತನ ರನ್ ವೇನಲ್ಲಿ ವಿಮಾನಗಳ ಹಾರಾಟ ಆರಂಭವಾಗುವ ನಿರೀಕ್ಷೆ ಇದೆ.
ಹೊಸ ರನ್ ವೇ ನಿರ್ಮಾಣಗೊಂಡ ಬಳಿಕ ಮಂಜಿನ ಕಾರಣದಿಂದಾಗಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಸ್ಥಗಿತಗೊಳ್ಳುವುದಿಲ್ಲ. ಅಂತಹ ಅತ್ಯಾಧುನಿಕ ವ್ಯವಸ್ಥೆಯನ್ನು ರನ್ ವೇನಲ್ಲಿ ಮಾಡಲಾಗಿದೆ.

ಎರಡು ಹಂತದಲ್ಲಿ 2ನೇ ರನ್ ವೇಯನ್ನು ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 25 ಮಿಲಿಯನ್ ಪ್ಯಾಸೇಂಜರ್ ಕೆಪಾಸಿಟಿ ಹೊಂದಿರುತ್ತದೆ, 2ನೇ ಹಂತದ ಮಾರ್ಗ 4 ಕಿ.ಮೀ. ರನ್ ವೇ ನಿರ್ಮಾಣ ಮಾಡಲಾಗುತ್ತದೆ.
ನೂತನ ರನ್ ವೇ ಪರಿಸರ ಸ್ನೇಹಿಯಾಗಿದೆ. 'ಸಿಟಿ ಆಫ್ ಗಾರ್ಡನ್' ಎಂಬ ಪರಿಕಲ್ಪನೆಯಲ್ಲಿ ರನ್ ವೇಯನ್ನು ನಿರ್ಮಾಣ ಮಾಡಲಾಗಿದೆ. ಟರ್ಮಿನಲ್ ಕಟ್ಟಡ ಹಸಿರು ಹೊದಿಕೆಯನ್ನು ಒಳಗೊಂಡಿದೆ.
ನೂತನ ರನ್ ವೇಯನ್ನು 13,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಶೀಘ್ರದಲ್ಲಿಯೇ ವಿಮಾನ ನಿಲ್ದಾಣಕ್ಕೆ ನಮ್ಮ ಮೆಟ್ರೋ ಸಂಪರ್ಕವನ್ನು ಕಲ್ಪಿಸಲಾಗುತ್ತದೆ.
ವೇಗವಾಗಿ ಅಭಿವೃದ್ಧಿಯಾಗುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣ 2ನೇ ಸ್ಥಾನದಲ್ಲಿದೆ. 2020ರ ವೇಳೆಗೆ ದೇಶದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗುವ ನಿರೀಕ್ಷೆ ಇದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ












Click it and Unblock the Notifications