ಬೆಂಗಳೂರಿನ ಐದು ಕಡೆ ಸ್ಟೇಡಿಯಂ ನಿರ್ಮಾಣ: ಎಲ್ಲೆಲ್ಲಿ?
ಬೆಂಗಳೂರು, ಜು.18: ಬೆಂಗಳೂರಿನ ಒಟ್ಟು ಐದು ಕಡೆ ನೂತನ ಕ್ರೀಡಾಂಗಣಗಳು ತಲೆ ಎತ್ತಲಿವೆ. ಈ ಹೊಸ ಸ್ಟೇಡಿಯಂಗಳು ಗುಂಜೂರು, ದೇವನಹಳ್ಳಿ, ಎಚ್ಎಸ್ಆರ್ ಲೇಔಟ್, ತಾವರೆಕೆರೆ ಮತ್ತು ಅಂಜನಾಪುರದಲ್ಲಿ ನಿರ್ಮಾಣವಾಗಲಿದೆ.
ಇದರ ನಿರ್ಮಾಣದ ಬಳಿಕ ಬೆಂಗಳೂರಲ್ಲಿ ಒಟ್ಟು ಕ್ರೀಡಾಂಗಣಗಳ ಸಂಖ್ಯೆ 13ಕ್ಕೇರಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಸಾಕಷ್ಟು ಪಂದ್ಯಗಳು ನಡೆಯುವುದರಿಂದ ಸಾಕಷ್ಟು ತೊಂದರೆಯಾಗುತ್ತಿದೆ, ಇನ್ನೂ ಹೆಚ್ಚಿನ ಚುಟುವಟಿಕೆ ನಡೆಯಬೇಕಾಗಿರುವುದರಿಂದ ಬೆಂಗಳೂರಿನಾದ್ಯಂತ ನಾಲ್ಕು ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಅಥ್ಲೆಟಿಕ್ ಟ್ರಾಕ್ಸ್, ಜಾವೆಲಿನ್, ಡಿಸ್ಕಸ್, ವಾಲಿಬಾಲ್ ಮತ್ತು ಬಾಸ್ಕೆಟ್ ಬಾಲ್ ಆಡಲು ವ್ಯವಸ್ಥೆಗಳು ಈ ಸ್ಟೇಡಿಯಂಗಳಲ್ಲಿರುತ್ತವೆ. ಹಾಗಾದರೆ ಕ್ರೀಡಾಂಗಣ ಹೇಗಿರುತ್ತದೆ: ಪ್ರತಿ ಕ್ರೀಡಾಂಗಣಗಳ ನಿರ್ಮಾಣಕ್ಕೆ 10 ಎಕರೆ ಜಮೀನು ಬೇಕು.

ಇತ್ತೀಚಿನ ರಾಜ್ಯ ಬಜೆಟ್ ನಲ್ಲಿ ನಮಗೆ ಹಣ ಸಿಕ್ಕಿದ್ದು, ಸದ್ಯದಲ್ಲಿಯೇ ವಿಸ್ತೃತ ಯೋಜನಾ ವರದಿ ತಯಾರಿಸಿ ಟೆಂಡರ್ ಕರೆಯಲಿದ್ದೇವೆ. ಟೆಂಡರ್ ಅಂತಿಮವಾದ ಕೂಡಲೇ 6 ತಿಂಗಳಿನಿಂದ ಒಂದು ವರ್ಷದಲ್ಲಿ ಕ್ರೀಡಾಂಗಣ ನಿರ್ಮಾಣ ಪೂರ್ಣಗೊಳಿಸಲಿದ್ದೇವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎನ್ ಶಿವಶಂಕರ್ ತಿಳಿಸಿದ್ದಾರೆ.
ಕಿತ್ತೂರು ರಾಣಿ ಕ್ರೀಡಾಂಗಣದ ಮಾಲಿಕತ್ವ ಬಿಬಿಎಂಪಿ ಹೊಂದಿದೆ. ಬೆಂಗಳೂರಿನಲ್ಲಿ ಪ್ರಸ್ತುತ ಚಿನ್ನಸ್ವಾಮಿ ಸ್ಟೇಡಿಯಂ ಮತ್ತು ಆಲೂರು ಸ್ಟೇಡಿಯಂಗಳಿವೆ. ಇದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ಒಳಪಟ್ಟಿದೆ. ಕಂಠೀರವ ಸ್ಟೇಡಿಯಂ ಹಲವು ಉದ್ದೇಶಗಳಿಗೆ ಬಳಕೆಯಾಗುತ್ತಿವೆ. ಹಾಕಿ ಸ್ಟೇಡಿಯಂ, ಬೆಂಗಳೂರು ಫುಟ್ ಬಾಲ್ ಸ್ಟೇಡಿಯಂ ಮತ್ತು ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರ ವಿದ್ಯಾನಗರವನ್ನು ರಾಜ್ಯ ಕ್ರೀಡಾ ಇಲಾಖೆ ನಿರ್ವಹಣೆ ಮಾಡುತ್ತಿದೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications