ಮಲ್ಲೇಶ್ವರಂ ಕೇಂದ್ರೀಯ ವಿದ್ಯಾಲಯದಲ್ಲಿ ಸುವರ್ಣಮಹೋತ್ಸವದ ಸಂಭ್ರಮ
ಬೆಂಗಳೂರು, ಆಗಸ್ಟ್ 7: ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಆಗಸ್ಟ್ 5 ರಂದು ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಇದೇ ಶಾಲೆಯಲ್ಲಿ ಓದಿ ಜೀವನದ ಬೇರೆ ಬೇರೆ ಘಟ್ಟದಲ್ಲಿರುವ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ, ಹಲವಾರು ಸಾಧನೆ ಮಾಡಿದ ನೂರಾರು ಜನರು ತಮ್ಮ ಹಳೇ ಶಾಲೆಯನ್ನು ನೋಡಿ ಕಣ್ತುಂಬಿಸಿಕೊಂಡರು!
ಇಲ್ಲಿನ ಕೇಂದ್ರೀಯ ವಿದ್ಯಾಲಯಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಆಚರಿಸಲಾಯಿತು. ಇಲ್ಲೇ ವಿದ್ಯಾಭ್ಯಾಸ ಮಾಡಿದ್ದ ಹಳೇ ವಿದ್ಯಾರ್ಥಿಗಳೆಲ್ಲ ಈ ಸಂದರ್ಭದಲ್ಲಿ ಸೇರಿ ತಮ್ಮ ಬಾಲ್ಯದ ಅವಿಸ್ಮರಣೀಯ ಕ್ಷಣಗಳನ್ನು ನೆನಪಿಸಿಕೊಂಡು ಖುಷಿಪಟ್ಟರು. ತಮ್ಮ ಶಾಲೆಯ ಸುವರ್ಣ ಮಹೋತ್ಸವ, ಬಾಲ್ಯದ ಸುವರ್ಣ ಯುಗವನ್ನು ಕಣ್ಮುಂದೆ ತರುವುದಕ್ಕೆ ಸಹಕಾರಿಯಾಯಿತು.

ಒಂದಾನೊಂದು ಕಾಲದಲ್ಲಿ ಈ ಶಾಲೆಯ ಮೈದಾನದ ಮೂಲೆ ಮೂಲೆಯನ್ನೂ ಬಿಡದೆ ಆಡುತ್ತ, ಓಡುತ್ತ ಇದ್ದವರೆಲ್ಲ ಇಂದು ವೈದ್ಯರು, ಐಎಎಸ್ ಆಫೀಸರ್ ಗಳು, ಸೈನಿಕರು, ಉದ್ಯಮಿಗಳಾಗಿ ಶಾಲೆಗೆ ಪದಾರ್ಪಣೆ ಮಾಡಿದ್ದರು! ಎಷ್ಟೋ ಸಮಯದ ನಂತಗರ ಸಿಕ್ಕ ಹಳೇ ಗೆಳೆಯರೊಂದಿಗೆ ತಮ್ಮ ತಮ್ಮ ಬದುಕಿನ ಪುಟಗಳನ್ನು ತೆರೆದುಕೊಂಡು ಸಂತೃಪ್ತರಾದರು.
ತಾವು ಕಲಿತ ಶಾಲೆಗೆ ತಮ್ಮಿಂದಾದಷ್ಟು ಸಹಾಯ ಮಾಡುವ, ಮೂಲಸೌಕರ್ಯಗಳಿಗೆ ನೆರವು ನೀಡುವ ಸಲುವಾಗಿ ಹಳೆ ವಿದ್ಯಾರ್ಥಿಗಳನ್ನೆಲ್ಲ ಒಂದುಗೂಡಿಸಿ, ಫೇಡರೇಶನ್ ಆಫ್ ಅಲುಮ್ನಿ ಅಸೋಸಿಯೇಶನ್ ಆಫ್ ಕೇಂದ್ರೀಯ ವಿದ್ಯಾಲಯ(ಕೇಂದ್ರೀಯ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಂಘ) ಎಂಬ ಸಂಸ್ಥೆಯನ್ನು ಕಟ್ಟಿಕೊಂಡಿದ್ದಾರೆ. ಸಂಸ್ಥೆಯ ಮೂಲಕ ಈಗಾಗಲೇ ಶಾಲೆಗೆ ಉಪಯೋಗವಾಗುವಂಥ ಹಲವು ಕೆಲಸಗಳನ್ನು ಮಾಡಿದ್ದಾರೆ.
#GiveBacktoKV ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಮತ್ತು ತಮ್ಮ ಶಾಲೆಗೆ ಕೊಡುಗೆ ನೀಡುವ ಕಾರ್ಯ ಈಗಲೂ ಸಾಮಾಜಿಕ ಮಾಧ್ಯಮಗಳ ಮೂಲಕ ನಡೆಯುತ್ತಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ










Click it and Unblock the Notifications