Vande Bharat Express: ವಂದೇ ಭಾರತ್ ಎಕ್ಸ್ಪ್ರೆಸ್: ಬೆಂಗಳೂರು & ಕರ್ನಾಟಕಕ್ಕೆ ಮತ್ತೊಂದು ಗುಡ್ನ್ಯೂಸ್!
Vande Bharat Express: ಭಾರತ ಸರ್ಕಾರವು ವಂದೇ ಭಾರತ್ ಎಕ್ಸಪ್ರೆಸ್ ರೈಲಿನ ವಿಚಾರದಲ್ಲಿ ಬೆಂಗಳೂರು ಹಾಗೂ ಬೆಳಗಾವಿ ಜನರಿಗೆ ಭರ್ಜರಿ ಗುಡ್ನ್ಯೂಸ್ ನೀಡಿದೆ. ಈ ಭಾಗದಲ್ಲಿ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚರಿಸಲಿದ್ದು ಈ ಬಗ್ಗೆ ಭರ್ಜರಿ ಗುಡ್ನ್ಯೂಸ್ ನೀಡಲಾಗಿದೆ. ಬೆಂಗಳೂರು ಹಾಗೂ ಬೆಳಗಾವಿ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚರಿಸುವ ಬಗ್ಗೆ ಈಚೆಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಅಪ್ಡೇಟ್ ಕೊಟ್ಟಿದ್ದರು. ಇದೀಗ ವೇಳಾ ಪಟ್ಟಿ ಹಾಗೂ ದರ ಸೇರಿದಂತೆ ಹೊಸ ಅಪ್ಡೇಟ್ಸ್ಗಳು ಬಂದಿವೆ.
ಬೆಂಗಳೂರು ಹಾಗೂ ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರದಿಂದ ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಅಲ್ಲದೇ ಈ ಭಾಗದಲ್ಲಿ ರೈಲಿನಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಿ ಪ್ರಯಾಣಿಕರು ಸುಗಮವಾಗಿ ಪ್ರಯಾಣ ಮಾಡಲು ಅನುಕೂಲವಾಗಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕರ್ನಾಟಕದಲ್ಲಿ ರೈಲು ಸಂಪರ್ಕವನ್ನು ಹೆಚ್ಚಿಸಲಿದೆ. ಇದನ್ನು ನೈಋತ್ಯ ರೈಲ್ವೆ ನಿರ್ವಹಣೆ ಮಾಡಲಿದೆ.

ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿತ್ತು. ಈ ವಿಚಾರವಾಗಿ ಈಚೆಗೆ ಮಾತನಾಡಿದ್ದ ವಿ ಸೋಮಣ್ಣ ಅವರು, ಬೆಂಗಳೂರು - ಬೆಳಗಾವಿ ನಡುವೆ ಹೊಸ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರವು ಅನುಮತಿ ನೀಡಿದೆ ಎಂದು ತಿಳಿಸಿದ್ದರು. ಇನ್ನು ಈಗ ಕೆಎಸ್ಆರ್ ಬೆಂಗಳೂರು-ಧಾರವಾಡದ ನಡುವೆ ಈಗಾಗಲೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಇದೆ. ಇದನ್ನು ಇದೀಗ ಬೆಳಗಾವಿಯ ವರೆಗೆ ವಿಸ್ತರಿಸಲಾಗುತ್ತಿದೆ. ಬೆಂಗಳೂರು- ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು 8 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಬರೋಬ್ಬರಿ 611 ಕಿ.ಮೀ ದೂರವನ್ನು ತಲುಪಲಿದೆ. ಈ ಮೂಲಕ ಪ್ರಯಾಣಿಕರಿಗೆ ಸಮಯವೂ ಉಳಿತಾಯವಾಗಲಿದ್ದು, ಸುಖಕರ ಪ್ರಯಾಣ ಸಿಗಲಿದೆ.
ಇನ್ನು ಬೆಂಗಳೂರು- ಬೆಳಗಾವಿ: ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಖ್ಯೆ 20661/20662 ಆಗಿರಲಿದೆ. ಈ ರೈಲು ಬೆಂಗಳೂರು ಹಾಗೂ ಬೆಳಗಾವಿಯ ನಡುವೆ ಆರು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ / ಸ್ಟಾಪ್ ನೀಡಲಿದೆ. ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಎಲ್ಲೆಲ್ಲಿ ನಿಲುಗಡೆ ನೀಡಲಿದೆ ಎನ್ನುವ ವಿವರ ನೋಡೋಣ..
ಈ ನೂತನ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿಂದ ಪ್ರಾರಂಭವಾಗಿ ಬೆಳಗಾವಿ ತಲುಪಲಿದೆ. ಈ ನಡುವೆ ಯಶವಂತಪುರ ಜಂಕ್ಷನ್, ತುಮಕೂರು, ದಾವಣಗೆರೆ, ಮೈಲಾರ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ ಜಂಕ್ಷನ್ ಹಾಗೂ ಧಾರವಾಡದಲ್ಲಿ ನಿಲುಗಡೆ ಇರಲಿದೆ. ಕೆಎಸ್ಆರ್ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮಂಗಳವಾರ ಹೊರತುಪಡಿಸಿ, ಇನ್ನುಳಿದ ಎಲ್ಲಾ ದಿನ ಅಂದರೆ, ವಾರದಲ್ಲಿ ಆರು ದಿನ ಸೇವೆ ನೀಡಲಿದೆ.
ಬೆಂಗಳೂರು - ಬೆಳಗಾವಿ ಎಕ್ಸ್ಪ್ರೆಸ್ ರೈಲು ಟಿಕೆಟ್ ದರ ಹೇಗಿದೆ ?
ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಒಟ್ಟು 8 ಬೋಗಿಗಳನ್ನು ಹೊಂದಿದೆ. ಅದರಲ್ಲಿ 1 ಎಕ್ಸಿಕ್ಯುಟಿವ್ ಎಸಿ, 7 ಎಸಿ ಚೇರ್ ಕಾರ್ ವಸತಿ ಸೌಲಭ್ಯವೂ ಇರಲಿದೆ. ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸಲು ಎಸಿ ಚೇರ್ ಕಾರ್ಗೆ 1400 ರೂಪಾಯಿ ಹಾಗೂ ಎಕ್ಸಿಕ್ಯುಟಿವ್ ಎಸಿಗೆ 2500 ರೂಪಾಯಿ ಆಗಲಿದೆ ಎಂದು ಅಂದಾಜಿಸಲಾಗಿದೆ.
ವಂದೇ ಭಾರತ್ ರೈಲು ಸಂಚಾರ ವೇಳಾಪಟ್ಟಿ: ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರಿನಿಂದ 05:45 ಗಂಟೆಗೆ ಹೊರಡಲಿದ್ದು 13:30 ಗಂಟೆ ವೇಳೆಗೆ ಬೆಳಗಾವಿ ತಲುಪಲಿದೆ. ಹಿಂದಿರುಗುವ ಮಾರ್ಗದಲ್ಲಿ ಬೆಳಗಾವಿಯಿಂದ ಸುಮಾರು 14:30 ಗಂಟೆಗೆ ಪ್ರಯಾಣ ಪ್ರಾರಂಭಿಸಿ, 21:00 ಗಂಟೆಗೆ ಬೆಂಗಳೂರು ತಲುಪುತ್ತದೆ ಎಂದು ಹೇಳಲಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications