SWR: ತುರ್ತು ಕಾಮಗಾರಿ, ಬೆಂಗಳೂರು-ಮೈಸೂರು ಕೆಲವು ರೈಲುಗಳ ಸಂಚಾರ ರದ್ದು
ಬೆಂಗಳೂರು: ಮೈಸೂರು ಮತ್ತು ಬೆಂಗಳೂರು ರೈಲು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವ ಪ್ರಯುಕ್ತ ಕೆಲವು ರೈಲುಗಳ ಸಂಚಾರ ತಾತ್ಕಲಿಕವಾಗಿ ರದ್ದುಗೊಳಿಸಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಂಗಳವಾರ ಮಾಹಿತಿ ನೀಡಿದ್ದಾರೆ.
ನೈಋತ್ಯ ರೈಲ್ವೆ ವತಿಯಿಂದ ಕೆಂಗೇರಿ ಮತ್ತು ಹೆಜ್ಜಾಲ ರೈಲು ನಿಲ್ದಾಣಗಳ ಮಧ್ಯ ಲೆವೆಲ್ ಕ್ರಾಸಿಂಗ್ ಸಂಖ್ಯೆ 16ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ಸೂಚನೆ ಸಂಬಂಧಿತ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಅಗತ್ಯವಾಗಿರುವುದರಿಂದ ಡಿಸೆಂಬರ್ 25, 25 ಮತ್ತು 2026 ಜನವರಿ 8 ಮತ್ತು 9 ರಂದು ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ರದ್ದಾಗಿವೆ. ಒಂದಷ್ಟು ರೈಲುಗಳ ಕಾರ್ಯಾಚರಣೆಯಲ್ಲಿ ಬದಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರದ್ದಾದ ರೈಲುಗಳು ವಿವರ
* ಡಿಸೆಂಬರ್ 25 ಮತ್ತು 2026 ಜನವರಿ 8 ರಂದು ಅರಸೀಕೆರೆ-ಮೈಸೂರು ದೈನಂದಿನ ಪ್ಯಾಸೆಂಜರ್ ರೈಲು (56265), ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ ಸ್ಪೆಷಲ್ (06269) ಹಾಗೂ ಎಸ್ಎಂವಿಟಿ ಬೆಂಗಳೂರು-ಮೈಸೂರು ಪ್ಯಾಸೆಂಜರ್ ಸ್ಪೆಷಲ್ (06270) ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
* ಡಿಸೆಂಬರ್ 26 ಮತ್ತು ಜನವರಿ 9, 2026 ರಂದು ಮೈಸೂರು-ಅರಸೀಕೆರೆ ಪ್ಯಾಸೆಂಜರ್ ರೈಲು (56266) ಹಾಗೂ ಕೆಎಸ್ಆರ್ ಬೆಂಗಳೂರು-ಚನ್ನಪಟ್ಟಣ ಮೆಮು ರೈಲು (66535) ಸೇವೆಗಳನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.
ಸಂಚಾರ ಬದಲಾದ ರೈಲುಗಳ ವಿವರ
* ಡಿಸೆಂಬರ್ 25 ಮತ್ತು ಜನವರಿ 8 ರಂದು ಹೊರಡುವ ಅಶೋಕಪುರಂ-ಕೆಎಸ್ಆರ್ ಬೆಂಗಳೂರು ಮೆಮು ರೈಲು (06526) ಚನ್ನಪಟ್ಟಣ ಮತ್ತು ಕೆಎಸ್ಆರ್ ಬೆಂಗಳೂರು ನಡುವಿನ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ರೈಲು ಚನ್ನಪಟ್ಟಣದಲ್ಲೇ ತನ್ನ ಪ್ರಯಾಣವನ್ನು ಮುಗಿಸುತ್ತದೆ. ಅಲ್ಲಿಂದ ಮುಂದೆ ಎಂದಿನಂತೆ ಸಂಚಾರ ಮಾಡುವುದಿಲ್ಲ.
* ಅಶೋಕಪುರಂ-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್ಪ್ರೆಸ್ ರೈಲು (16022 ) ಅಶೋಕಪುರಂ ಮತ್ತು ಬೆಂಗಳೂರು ನಡುವಿನ ಸಂಚಾರ ರದ್ದಾಗಿದೆ. ಈ ರೈಲು ನಿಗದಿತ ಸಮಯಕ್ಕೆ ಅಶೋಕಪುರಂ ಬದಲಾಗಿ ಕೆಎಸ್ಆರ್ ಬೆಂಗಳೂರಿನಿಂದಲೇ ತನ್ನ ಪ್ರಯಾಣ ಆರಂಭಿಸುತ್ತದೆ.
* ಅಶೋಕಪುರಂ-ಕೆಎಸ್ಆರ್ ಬೆಂಗಳೂರು ಮೆಮು ರೈಲು (ಸಂಖ್ಯೆ 66580) ರಾಮನಗರ ಮತ್ತು ಕೆಎಸ್ಆರ್ ಬೆಂಗಳೂರು ನಡುವಿನ ಸಂಚಾರವನ್ನು ರದ್ದುಗೊಳಿಸಲಾಗಿದೆ. ರಾಮನಗರದಲ್ಲೇ ತನ್ನ ಸಂಚಾರವನ್ನು ಅಂತ್ಯಗೊಳಿಸುತ್ತದೆ.
* ಡಿಸೆಂಬರ್ 26 ಮತ್ತು 2026 ಜನವರಿ 9ರಂದು (66579) ಕೆಎಸ್ಆರ್ ಬೆಂಗಳೂರು-ಅಶೋಕಪುರಂ ಮೆಮು ರೈಲು ಕೆಎಸ್ಆರ್ ಬೆಂಗಳೂರು ಮತ್ತು ರಾಮನಗರ ನಡುವಿನ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ರೈಲು ಬದಲಾಗಿ ರಾಮನಗರದಿಂದ ನಿಗದಿತ ಸಮಯದಲ್ಲಿ ತನ್ನ ಪ್ರಯಾಣವನ್ನು ಮುಂದುವರಿಸಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
-
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications