ಅಪಾರ್ಟ್ ಮೆಂಟ್ ನಿವಾಸಿಗಳ ಸಮಸ್ಯೆ ಕುರಿತು ಸಂವಾದ
ಬೆಂಗಳೂರು, ಏಪ್ರಿಲ್ 20: ಅಪಾರ್ಟ್ ಮೆಂಟ್ ನಿವಾಸಿಗಳ ಬೇಡಿಕೆಗಳನ್ನು ರಾಜಕೀಯ ಪಕ್ಷಗಳ ಮುಂದಿಡಲು ಬೆಂಗಳೂರು ಅಪಾರ್ಟ್ ಮೆಂಟ್ಸ್ ಫೆಡರೇಷನ್ ಏ.22ರಂದು ಬೆಳಗ್ಗೆ 10.30ಕ್ಕೆ ಚೌಡಯ್ಯ ಸ್ಮಾರಕ ಭವನದಲ್ಲಿ ಸಂವಾದ ಏರ್ಪಡಿಸಿದೆ.
ಬಿಎಎಎಫ್ ನಿಂದ ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕುಪತ್ರವನ್ನು ರಚಿಸುತ್ತಿದ್ದು, ನಗರದ ಅಪಾರ್ಟ್ ಮೆಂಟ್ ನಿವಾಸಿಗಳ ಬೇಡಿಕೆಯನ್ನು ಇದು ಒಳಗೊಂಡಿದೆ. ಸರ್ಕಾರಿ ಸಂಸ್ಥೆಗಳು ನಿವಾಸಿಗಳಿಗೆ ಕಿರುಕುಳ ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಇದು ಒಳಗೊಂಡಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ತ್ಯಾಜ್ಯ ನೀರು ಶುದ್ಧೀಕರಣ ಘಟಕವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳುವ ನಿಯಮ, ಕುಡಿಯುವ ನೀರಿಗೆ ಅಧಿಕ ದರ ವಿಧಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಬಗೆಹರಿಸಲು ರಾಜಕೀಯ ಪಕ್ಷಗಳ ಮೇಲೆ ಒತ್ತಡ ಹೇರಲು ಸಂವಾದ ನಡೆಸಲಾಗುತ್ತಿದೆ.

ಎಲ್ಲ ಪಕ್ಷಗಳ ಮುಖಂಡರನ್ನು ಸಂವಾದಕ್ಕೆ ಆಹ್ವಾನಿಸಲಾಗಿದ್ದು, ನಿವಾಸಿಗಳ ಬೇಡಿಕೆಯನ್ನು ತಮ್ಮ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರ್ಪಡೆಗೊಳಿಸಲು ಆಗ್ರಹಿಸಲಾಗುತ್ತದೆ.
ಈ ಕುರಿತು ಮಾಹಿತಿ ನೀಡಿದ ಬಿಎಎಫ್ ಅಧ್ಯಕ್ಷ ಆರ್. ಸುಬ್ರಮಣಿಯನ್, ಪ್ರಸ್ತುತ 357 ಅಪಾರ್ಟ್ ಮೆಂಟ್ ಗಳು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ 40 ಸಾವಿರಕ್ಕೂ ಅಧಿಕ ಫ್ಲ್ಯಾಟ್ ಗಳಿವೆ. ಅಂದರೆ ಒಂದು ಲಕ್ಷಕ್ಕೂ ಅಧಿಕ ಮತದಾರರನ್ನು ಒಕ್ಕೂಟವು ಪ್ರತಿನಿಧಿಸುತ್ತಿದೆ. ಇದರ ಜತೆಗೆ ಒಕ್ಕೂಟವು 500ಕ್ಕೂ ಅಧಿಕ ಅಪಾರ್ಟ್ ಮೆಂಟ್ ಸಂಘಗಳೊಂದಿಗೆ ಸಂಪರ್ಕ ಹೊಂದಿದೆ. ಈ ಸಂಘಗಳು ಸುಮಾರು 1.5 ಲಕ್ಷ ಮತದಾರರನ್ನು ಪ್ರತಿನಿಧಿಸುತ್ತಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications