Water Crisis: ಪಂಚಸೂತ್ರ ಜಾರಿ, ಗ್ರೀನ್ಸ್ಟಾರ್ ಚಾಲೆಂಜ್ ಸ್ವೀಕರಿಸಿದ ಅಪಾರ್ಟ್ಮೆಂಟ್ ಫೆಡರೇಷನ್: BWSSB
ಬೆಂಗಳೂರು, ಮಾರ್ಚ್ 24: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಇದರ ನರ್ವಹಣೆಗೆ ಜಲಮಂಡಳಿ ಅಧಿಕಾರಿಗಳು ಪೇಚಾಡುತ್ತಿದ್ದಾರೆ. ಜನರಿಗೆ ನೀರಿನ ಉಳಿತಾಯ, ಮಿತವ್ಯಯ ಬಗ್ಗೆ ಅರಿವು ಮೂಡಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳ ಸಂಘ ಗ್ರೀನ್ ಸ್ಟಾರ್ ಚಾಲೆಂಜ್ ಗೆ ಸ್ವೀಕರಿಸಿದೆ. ಏನಿದು? ನೀರಿನ ಉಳಿತಾಯದ ಪಂಚಸೂತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ.
ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಷನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ನೀರು ಉಳಿತಾಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ಅವರು, ನೀರು ಉಳಿತಾಯ ಮತ್ತು ನೀರಿನ ಸಮರ್ಪಕ ಬಳಕೆಯ ಬಗ್ಗೆ ಪದಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಷನ್ನಲ್ಲಿ 30 ಕ್ಲಸ್ಟರ್ ಗಳಿದ್ದು ಸುಮಾರು 15 ಲಕ್ಷಕ್ಕೂ ಹೆಚ್ಚು ಜನ ಸದಸ್ಯರಿದ್ದಾರೆ. ಈ ಅಪಾರ್ಟ್ಮೆಂಟ್ ಗಳು ಕಾವೇರಿ ನೀರು, ಕೊಳವೆಬಾವಿಗಳು ಹಾಗೂ ಟ್ಯಾಂಕರ್ ಗಳ ಮೇಲೆ ಅವಲಂಬಿತವಾಗಿವೆ.
ಅಪಾರ್ಟ್ಮೆಂಟ್ಗಳಲ್ಲಿ ಪಂಚಸೂತ್ರ ಅಳವಡಿಕೆ
ಈ ಅಪಾರ್ಟ್ಮೆಂಟ್ಗಳಲ್ಲಿ ನೀರಿನ ಸಮರ್ಪಕ ನಿರ್ವಹಣೆ ಹಾಗೂ ಮಿತವಾದ ನೀರಿನ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಲಮಂಡಳಿ ಗ್ರೀನ್ ಸ್ಟಾರ್ ರೇಟಿಂಗ್ ಚಾಲೆಂಜ್ ಪ್ರಾರಂಭಿಸಿದೆ. ಜೊತೆಗೆ ಪಂಚ ಸೂತ್ರಗಳನ್ನು ಅಪಾರ್ಟ್ಮೆಂಟ್ಗಳಲ್ಲಿ ಅಳವಡಿಸಿಕೊಳ್ಳಲು ಮುಂದಾಗಿದೆ ಎಂದರು.
ಪಂಚಸೂತ್ರಗಳು ಯಾವುವು?
ಪಂಚಸೂತ್ರಗಳು ಎಂದರೆ, ನೀರಿನ ಉಳಿತಾಯ, ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸಿಕೊಳ್ಳುವುದು, ಕೊಳವೆ ಬಾವಿಯ ಬಳಕೆಯಲ್ಲಿ ತಂತ್ರಜ್ಞಾನ ಅಳವಡಿಕೆ ಮಾಡಿಕೊಳ್ಳುವುದು, ಮಳೆ ನೀರು ಇಂಗು ಗುಂಡಿಗಳನ್ನ ಅಳವಡಿಸಿಕೊಳ್ಳುವುದು ಹಾಗೂ ತಮ್ಮ ಸದಸ್ಯರ ಜೊತೆ ಈ ಎಲ್ಲಾ ಕ್ರಮಗಳ ಬಗ್ಗೆ ಮಾಹಿತಿಗಳನ್ನು ಹಂಚಿಕೊಳ್ಳುದು.

ಈ ಪಂಚಸೂತ್ರಗಳು ಅಳವಡಿಕೆಯಿಂದ ಶೇಕಡಾ 30ರಷ್ಟು ನೀರಿನ ಬಳಕೆ ಕಡಿಮೆ ಬಹುದಾಗಿದೆ. ಅನಗತ್ಯವಾಗಿ ಪೋಲಾಗುತ್ತಿರುವ ನೀರನ್ನು ತಪ್ಪಿಸಬಹುದು. ಜನರು ನೀರಿನ ಬಳಕೆಯನ್ನು ಕಡಿಮೆ ಮಾಡುವ ಜೊತೆಯಲ್ಲೇ, ಅನಗತ್ಯವಾಗಿ ಪೋಲಾಗುತ್ತಿದ್ದ ನೀರನ್ನು ತಪ್ಪಿಸಬೇಕಿರುವುದು ಇಂದಿನ ಸನ್ನಿವೇಶಗಳಲ್ಲಿ ಅತ್ಯಗತ್ಯವಾಗಿದೆ.
ಶೇ.30 ನೀರು ಉಳಿತಾಯ ಸಾಧ್ಯ
ಒಬ್ಬ ಮನುಷ್ಯನ ದಿನನಿತ್ಯದ ಬಳಕೆಗೆ ಸುಮಾರು 120 ರಿಂದ 150 ಲೀಟರ್ ಗಳಷ್ಟು ನೀರು ಸಾಕಾಗುತ್ತದೆ. ಇದರಲ್ಲಿ ಶೇಕಡಾ 20 ರಷ್ಟು ಸಂಸ್ಕರಿಸಿದ ನೀರು ಬಳಕೆ ಮಾಡುವುದರಿಂದ ಶೇಕಡಾ 30 ರಷ್ಟು ನೀರು ಉಳಿತಾಯ ಮಾಡಬಹುದಾಗಿದೆ. ಆದರೆ ಕೆಲವೆಡೆ ನೀರಿನ ಲಭ್ಯತೆ ಇರುವುದನ್ನು ಕಂಡು ಜನರು ಅನಗತ್ಯವಾಗಿ ದಿನನಿತ್ಯದ ಕೆಲಸಗಳಿಗೆ ಹೆಚ್ಚಿನ ನೀರನ್ನ ಬಳಸಿಕೊಳ್ಳುತ್ತಿದ್ದಾರೆ.
ಇಂತಹ ಅಪವ್ಯಯದ ಸ್ವಭಾವವನ್ನ ಬದಲಿಸುವುದು ಹಾಗೂ ಉತ್ತಮ ನೀರಿನ ಮಿತ ಬಳಕೆ ಉತ್ತಮ ಹವ್ಯಾಸವನ್ನು ಪ್ರೋತ್ಸಾಹಿಸುವುದು ನಮ್ಮ ಉದ್ದೇಶವಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ತಿಳಿಸಿದರು.
ಇಂದಿನ ಜಲಕ್ಷಾಮದ ವಿರುದ್ಧ ಹೋರಾಡಲು ಜಲಮಂಡಳಿಯೊಂದಿಗೆ ಬೆಂಗಳೂರು ಅಪಾರ್ಟ್ಮೆಂಟ್ ಫೆಡರೇಷನ್ ಕೈಜೋಡಿಸಿದೆ. ಅಂತರ್ಜಲ ಕುಸಿತ ಆಗಿರುವುದರಿಂದ ನೀರಿನ ಲಭ್ಯತೆ ಕಡಿಮೆಯಾಗಿದೆ. ಇದರಿಂದಾಗಿ ನಗರದ ಕೆಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಇದನ್ನ ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಈಗಾಗಲೇ ಜಲ ಮಂಡಳಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications