Auto Price: ಬೆಂಗಳೂರಿನಲ್ಲಿ ಸದ್ಯದಲ್ಲೇ ಆಟೋ ಪ್ರಯಾಣ ದರ ಏರಿಕೆ?
ಬೆಂಗಳೂರು, ಜೂನ್ 26: ರಾಜ್ಯದಲ್ಲಿ ಒಂದಾದ ಮೇಲೊಂದು ಬೆಲೆ ಏರಿಕೆ ಆಗುತ್ತಿದ್ದು, ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಮೊದಲು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಬಳಿಕ ತರಕಾರಿ ಬೆಲೆ ಗಗನಕ್ಕೇರಿತ್ತು. ಹೂ-ಹಣ್ಣುಗಳ ಬೆಲೆ ಕೂಡ ಹೆಚ್ಚಾಗಿದ್ದು, ಇಂದಿನಿಂದ ಹಾಲಿನ ದರ ಕೂಡ ಹೆಚ್ಚಾಗಿದೆ.
ಈ ಎಲ್ಲಾ ದರ ಏರಿಕೆಯ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಆಟೋ ದರ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಆಟೋಮೀಟರ್ ದರ ಹೆಚ್ಚಿಸುವಂತೆ ಬೆಂಗಳೂರು ಆಟೋ ಚಾಲಕರ ಸಂಘ ಒತ್ತಾಯ ಮಾಡಿದೆ ಎಂದು ತಿಳಿದು ಬಂದಿದೆ. ಮೂರು ವರ್ಷಗಳಿಂದ ಪ್ರಯಾಣ ದರ ಏರಿಕೆಯಾಗದ ಕಾರಣ ಚಾಲಕರಿಗೆ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಹೀಗಾಗಿ ಕನಿಷ್ಠ ಆಟೋ ದರವನ್ನು ಕೂಡ ಹೆಚ್ಚಿಸುವಂತೆ ಸಂಘ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಆಟೋ ರಿಕ್ಷಾ ದರವನ್ನು ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಪರಿಷ್ಕರಿಸಲು ಕೋರಿದೆ. ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವ ಅಧಿಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಮಿಟಿಗೆ ಮಾತ್ರ ಅವಕಾಶ ಇರುವುದರಿಂದ ಆಟೋ ಚಾಲಕರ ಸಂಘ ಇತ್ತೀಚಿಗೆ ಬೆಂಗಳೂರು ನಗರ ಜಿಲ್ಲಾ ಉಪ ಆಯುಕ್ತರಿಗೆ ಪತ್ರ ಬರೆದು ಮೀಟರ್ ದರ ಏರಿಕೆಗೆ ಮನವಿ ಮಾಡಿದೆ.
ಪ್ರತಿ ವರ್ಷ ದರಗಳನ್ನು ಪರಿಷ್ಕರಿಸಿದರೆ, ಆಟೋ ಚಾಲಕರು ಪ್ರಯಾಣಿಕರಿಗೆ ಸೇವೆ ನಿರಾಕರಿಸುವುದನ್ನು ತಪ್ಪಿಸಬಹುದು. ಅಲ್ಲದೇ, ಚಾಲಕರು ಪ್ರಯಾಣಿಕರಿಗೆ ಮೀಟರ್ ಮೀರಿ ಅಧಿಕ ಶುಲ್ಕ ವಿಧಿಸುವ ದೂರುಗಳನ್ನು ಕಡಿಮೆ ಮಾಡಬಹುದು ಎಂದು ಆಟೋ ಚಾಲಕರ ಸಂಘ ಜಿಲ್ಲಾಧಿಕಾರಿಗಳಿಗೆ ಮಾಡಿದ ಮನವಿಯಲ್ಲಿ ತಿಳಿಸಿದೆ.

ಸದ್ಯ ಬೆಂಗಳೂರು ನಗರದಲ್ಲಿ ಕನಿಷ್ಠ 30 ರುಪಾಯಿ ಇದ್ದು, ಅದನ್ನು 40 ರುಪಾಯಿ ಮಾಡಬೇಕೆಂದು ಮನವಿ ಮಾಡಲಾಗಿದೆ. 3 ವರ್ಷಗಳ ಹಿಂದೆ ಈ ದರ ಪರಿಷ್ಕರಿಸಲಾಗಿತ್ತು ಇದೀಗ ಮತ್ತೆ ದರ ಏರಿಸಲು ಮನವಿ ಮಾಡಲಾಗಿದೆ.
ಆಟೋ ದರ ಪರಿಷ್ಕರಿಸಬೇಕಾದ ಅನಿವಾರ್ಯತೆಯೇನು..?
* ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್ಜಿ ದರ ಹೆಚ್ಚಳವಾಗಿದ್ದು ಆಟೋ ಚಾಲಕರಿಗೆ ಆದಾಯದಷ್ಟೇ ಖರ್ಚು ಕೂಡ ಬರುತ್ತಿದೆ.
* ಶಕ್ತಿ ಯೋಜನೆಯಿಂದ ಮಹಿಳೆಯರು ಬಹುತೇಕವಾಗಿ ಬಿಎಂಟಿಸಿ ಬಸ್ಗಳನ್ನು ಬಳಸುತ್ತಿದ್ದು, ಆಟೋ ಬಳಸುವವರ ಸಂಖ್ಯೆ ತೀರಾ ಕಡಿಮೆ ಆಗಿದೆ.
* ಆನ್ಲೈನ್ ಆಟೋ ಬುಕ್ಕಿಂಗ್ ಆ್ಯಪ್ಗಳು ಹೆಚ್ಚು ಬಳಕೆಯಾಗುತ್ತಿದ್ದು, ನೇರವಾಗಿ ಆಟೋ ಬಳಸುವವರ ಸಂಖ್ಯೆ ಕಡಿಮೆಯಾಗಿದೆ.
* ಆಟೋಗೆ ಬಳಸುವ ಮೆಕಾನಿಕಲ್ ವಸ್ತುಗಳ ದರ ಕೂಡ ಹೆಚ್ಚಾಗಿದೆ.
* ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ದರ ಗಗನ ಮುಟ್ಟಿದ್ದು, ಆಟೋ ಚಾಲಕರರು ಜೀವನ ಸರಿದೂಗಿಸಲು ದರ ಏರಿಕೆ ಅನಿವಾರ್ಯವಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications