Auto Fare Hike: ಆಗಸ್ಟ್ 1ರಿಂದ ಆಟೋ ಪ್ರಯಾಣ ದರ ಹೆಚ್ಚಿಸಿ ಆದೇಶ, ಹೊಸ ದರ ಎಷ್ಟಿದೆ?
ಬೆಂಗಳೂರು ನಗರದಲ್ಲಿ ಆಟೋ ಪ್ರಯಾಣ ಇನ್ನು ಮುಂದೆ ದುಬಾರಿಯಾಗಲಿದೆ. ಈಗಾಗಲೇ ಮೆಟ್ರೋ ದರ, ರೈಲ್ವೆ ಟಿಕೆಟ್ ದರ, ಬಸ್ ಟಿಕೆಟ್ ದರ ಕೂಡ ದುಬಾರಿಯಾಗಿದೆ. ಇದರ ಬೆನ್ನಲ್ಲೇ ಆಟೋ ಪ್ರಯಾಣ ದರ ಕೂಡ ಹೆಚ್ಚಳವಾಗಿದೆ. ಆಟೋ ಪ್ರಯಾಣ ದರ ನಿಗದಿ ಮಾಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್ 1ರಿಂದ ಈ ಪರಿಷ್ಕೃತ ದರ ಪಟ್ಟಿ ಜಾರಿಗೆ ಬರಲಿದ್ದು, ಪ್ರಯಾಣಿಕರು ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ಇನ್ನು ಮುಂದೆ ಬೆಂಗಳೂರಿನಲ್ಲಿ ಆಟೋ ಪ್ರಯಾಣ ಕೂಡ ಸಾರ್ವಜನಿಕರ ಜೇಬು ಸುಡಲಿದೆ.
ಆಟೋ ಚಾಲಕರ ಸಂಘಟನೆಗಳ ಬೇಡಿಕೆ, ಇಂಧನ ದರ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಳವೇ ಈ ದರ ಪರಿಷ್ಕರಣೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ದರ ಪಟ್ಟಿ ಜಾರಿಗೆ ಬರುವ ಹಿನ್ನೆಲೆಯಲ್ಲಿ ಆಟೋ ಚಾಲಕರು ಸರ್ಕಾರ ನಿಗದಿ ಮಾಡಿದ ದರವನ್ನೇ ವಿಧಿಸಬೇಕು. ಹೆಚ್ಚುವರಿ ದರ ವಸೂಲಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರ್ಟಿಒ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಪರಿಷ್ಕೃತ ದರ ಎಷ್ಟು?
ಬೆಂಗಳೂರಿನಲ್ಲಿ ಈಗ ಎರಡು ಕಿ.ಮೀ ಪ್ರಯಾಣಕ್ಕೆ ಆಟೋ ಮೀಟರ್ ದರ ಕನಿಷ್ಠ 30 ರೂಪಾಯಿ ಇದೆ. ಇನ್ನು ಮುಂದೆ ಎರಡು ಕಿ.ಮೀಗೆ 36 ರೂಪಾಯಿ ಪಾವತಿಸಬೇಕು. ಕನಿಷ್ಠ ಎರಡು ಕಿಲೋಮೀಟರ್ ಪ್ರಯಾಣಕ್ಕೆ ದರ ಈಗಿನ ₹30ರಿಂದ ₹36ಕ್ಕೆ ಏರಿಕೆ ಮಾಡಲಾಗಿದೆ. ಈ ಮೂಲಕ 6 ರೂಪಾಯಿ ಹೆಚ್ಚಳವಾಗಿದೆ. ಪ್ರತಿ ಹೆಚ್ಚುವರಿ ಕಿಲೋಮೀಟರ್ಗೆ ₹15 ಬದಲು ₹18 ಪಾವತಿಸಬೇಕು.
ಕಾಯುವಿಕೆ ದರ (ವೇಟಿಂಗ್) ಮೊದಲ ಐದು ನಿಮಿಷ ಉಚಿತವಾಗಿದೆ. ಮೊದಲ ಐದು ನಿಮಿಷದ ನಂತರ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ 10 ರೂಪಾಯಿ ನಿಗದಿ ಮಾಡಲಾಗಿದೆ. ಪ್ರಯಾಣಿಕರ ಲಗೇಜು ದರ 20 ಕೆ.ಜಿ.ವರೆಗೆ ಉಚಿತ. 20 ಕೆ.ಜಿಗಿಂತ ಹೆಚ್ಚು ಲಗೇಜ್ ಇದ್ದರೆ ಹೆಚ್ಚುವರಿಯಾಗಿ 10 ರೂಪಾಯಿ ನಿಗದಿ ಮಾಡಲಾಗಿದೆ. ಗರಿಷ್ಠ ಪ್ರಯಾಣಿಕರ ಲಗೇಜ್ 50 ಕೆ.ಜಿ.ಗೆ ಮಿತಿಗೊಳಿಸಲಾಗಿದೆ. ರಾತ್ರಿ ವೇಳೆ ಸಾಮಾನ್ಯ ದರದ ಜೊತೆಗೆ ಆ ದರದ ಅರ್ಧಪಟ್ಟು ಹೆಚ್ಚು ಪಡೆಯಬಹುದು. ಇದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಮಾತ್ರ ಅನ್ವಯ ಎಂದು ಹೇಳಿದೆ.

ಆಟೋ ದರ ಏರಿಕೆ ಮಾಡುವಂತೆ ಹಲವು ದಿನಗಳಿಂದ ಆಟೋ ಸಂಘಟನೆಗಳು, ಚಾಲಕರು ಬೇಡಿಕೆ ಇಟ್ಟಿದ್ದರು. ಆಟೋ ದರ ಏರಿಕೆ ಸಂಬಂಧ ಮಾರ್ಚ್ನಲ್ಲೇ ಸಭೆ ನಡೆದಿತ್ತು.ಆಟೋ ದರ ಪರಿಷ್ಕರಣೆ ಸಮಿತಿಯು ಆಟೋ ಚಾಲಕರ ಬೇಡಿಕೆಗಳನ್ನು ಕೇಳಿತ್ತು. ಕೊನೆಗೂ ಎಲ್ಲವನ್ನೂ ಪರಿಶೀಲಿಸಿ ದರ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರಿಂದ ಆಟೋ ಚಾಲಕರ ಬೇಡಿಕೆ ಈಡೇರಿದ್ದರೂ ಪ್ರತಿನಿತ್ಯ ಆಟೋದಲ್ಲಿ ಪ್ರಯಾಣಿಸುವವರಿಗೆ ಜೇಬಿಗೆ ಕತ್ತರಿ ಬೀಳುವುದು ಗ್ಯಾರಂಟಿ. ಇದಕ್ಕೆ ಪ್ರಯಾಣಿಕರು ಹೇಗೆ ಸ್ಪಂದಿಸುತ್ತಾರೆ ಎಂಬುದು ಆಗಸ್ಟ್ನಿಂದ ತಿಳಿಯಲಿದೆ.
-
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ












Click it and Unblock the Notifications