Auto Fare Hike: ಆಗಸ್ಟ್ 1ರಿಂದ ಆಟೋ ಪ್ರಯಾಣ ದರ ಹೆಚ್ಚಿಸಿ ಆದೇಶ, ಹೊಸ ದರ ಎಷ್ಟಿದೆ?
ಬೆಂಗಳೂರು ನಗರದಲ್ಲಿ ಆಟೋ ಪ್ರಯಾಣ ಇನ್ನು ಮುಂದೆ ದುಬಾರಿಯಾಗಲಿದೆ. ಈಗಾಗಲೇ ಮೆಟ್ರೋ ದರ, ರೈಲ್ವೆ ಟಿಕೆಟ್ ದರ, ಬಸ್ ಟಿಕೆಟ್ ದರ ಕೂಡ ದುಬಾರಿಯಾಗಿದೆ. ಇದರ ಬೆನ್ನಲ್ಲೇ ಆಟೋ ಪ್ರಯಾಣ ದರ ಕೂಡ ಹೆಚ್ಚಳವಾಗಿದೆ. ಆಟೋ ಪ್ರಯಾಣ ದರ ನಿಗದಿ ಮಾಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್ 1ರಿಂದ ಈ ಪರಿಷ್ಕೃತ ದರ ಪಟ್ಟಿ ಜಾರಿಗೆ ಬರಲಿದ್ದು, ಪ್ರಯಾಣಿಕರು ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ಇನ್ನು ಮುಂದೆ ಬೆಂಗಳೂರಿನಲ್ಲಿ ಆಟೋ ಪ್ರಯಾಣ ಕೂಡ ಸಾರ್ವಜನಿಕರ ಜೇಬು ಸುಡಲಿದೆ.
ಆಟೋ ಚಾಲಕರ ಸಂಘಟನೆಗಳ ಬೇಡಿಕೆ, ಇಂಧನ ದರ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಳವೇ ಈ ದರ ಪರಿಷ್ಕರಣೆಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ದರ ಪಟ್ಟಿ ಜಾರಿಗೆ ಬರುವ ಹಿನ್ನೆಲೆಯಲ್ಲಿ ಆಟೋ ಚಾಲಕರು ಸರ್ಕಾರ ನಿಗದಿ ಮಾಡಿದ ದರವನ್ನೇ ವಿಧಿಸಬೇಕು. ಹೆಚ್ಚುವರಿ ದರ ವಸೂಲಿ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರ್ಟಿಒ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಪರಿಷ್ಕೃತ ದರ ಎಷ್ಟು?
ಬೆಂಗಳೂರಿನಲ್ಲಿ ಈಗ ಎರಡು ಕಿ.ಮೀ ಪ್ರಯಾಣಕ್ಕೆ ಆಟೋ ಮೀಟರ್ ದರ ಕನಿಷ್ಠ 30 ರೂಪಾಯಿ ಇದೆ. ಇನ್ನು ಮುಂದೆ ಎರಡು ಕಿ.ಮೀಗೆ 36 ರೂಪಾಯಿ ಪಾವತಿಸಬೇಕು. ಕನಿಷ್ಠ ಎರಡು ಕಿಲೋಮೀಟರ್ ಪ್ರಯಾಣಕ್ಕೆ ದರ ಈಗಿನ ₹30ರಿಂದ ₹36ಕ್ಕೆ ಏರಿಕೆ ಮಾಡಲಾಗಿದೆ. ಈ ಮೂಲಕ 6 ರೂಪಾಯಿ ಹೆಚ್ಚಳವಾಗಿದೆ. ಪ್ರತಿ ಹೆಚ್ಚುವರಿ ಕಿಲೋಮೀಟರ್ಗೆ ₹15 ಬದಲು ₹18 ಪಾವತಿಸಬೇಕು.
ಕಾಯುವಿಕೆ ದರ (ವೇಟಿಂಗ್) ಮೊದಲ ಐದು ನಿಮಿಷ ಉಚಿತವಾಗಿದೆ. ಮೊದಲ ಐದು ನಿಮಿಷದ ನಂತರ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ 10 ರೂಪಾಯಿ ನಿಗದಿ ಮಾಡಲಾಗಿದೆ. ಪ್ರಯಾಣಿಕರ ಲಗೇಜು ದರ 20 ಕೆ.ಜಿ.ವರೆಗೆ ಉಚಿತ. 20 ಕೆ.ಜಿಗಿಂತ ಹೆಚ್ಚು ಲಗೇಜ್ ಇದ್ದರೆ ಹೆಚ್ಚುವರಿಯಾಗಿ 10 ರೂಪಾಯಿ ನಿಗದಿ ಮಾಡಲಾಗಿದೆ. ಗರಿಷ್ಠ ಪ್ರಯಾಣಿಕರ ಲಗೇಜ್ 50 ಕೆ.ಜಿ.ಗೆ ಮಿತಿಗೊಳಿಸಲಾಗಿದೆ. ರಾತ್ರಿ ವೇಳೆ ಸಾಮಾನ್ಯ ದರದ ಜೊತೆಗೆ ಆ ದರದ ಅರ್ಧಪಟ್ಟು ಹೆಚ್ಚು ಪಡೆಯಬಹುದು. ಇದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಮಾತ್ರ ಅನ್ವಯ ಎಂದು ಹೇಳಿದೆ.

ಆಟೋ ದರ ಏರಿಕೆ ಮಾಡುವಂತೆ ಹಲವು ದಿನಗಳಿಂದ ಆಟೋ ಸಂಘಟನೆಗಳು, ಚಾಲಕರು ಬೇಡಿಕೆ ಇಟ್ಟಿದ್ದರು. ಆಟೋ ದರ ಏರಿಕೆ ಸಂಬಂಧ ಮಾರ್ಚ್ನಲ್ಲೇ ಸಭೆ ನಡೆದಿತ್ತು.ಆಟೋ ದರ ಪರಿಷ್ಕರಣೆ ಸಮಿತಿಯು ಆಟೋ ಚಾಲಕರ ಬೇಡಿಕೆಗಳನ್ನು ಕೇಳಿತ್ತು. ಕೊನೆಗೂ ಎಲ್ಲವನ್ನೂ ಪರಿಶೀಲಿಸಿ ದರ ಏರಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರಿಂದ ಆಟೋ ಚಾಲಕರ ಬೇಡಿಕೆ ಈಡೇರಿದ್ದರೂ ಪ್ರತಿನಿತ್ಯ ಆಟೋದಲ್ಲಿ ಪ್ರಯಾಣಿಸುವವರಿಗೆ ಜೇಬಿಗೆ ಕತ್ತರಿ ಬೀಳುವುದು ಗ್ಯಾರಂಟಿ. ಇದಕ್ಕೆ ಪ್ರಯಾಣಿಕರು ಹೇಗೆ ಸ್ಪಂದಿಸುತ್ತಾರೆ ಎಂಬುದು ಆಗಸ್ಟ್ನಿಂದ ತಿಳಿಯಲಿದೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications