Get Updates
Get notified of breaking news, exclusive insights, and must-see stories!

Bengaluru-Ayodhya flight ticket: ವಿಮಾನ ಟಿಕೆಟ್‌ ದರದಲ್ಲಿ ಹೆಚ್ಚಳ.!, ಎಷ್ಟು ಗೊತ್ತಾ?-ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ, 12: ಅಯೋಧ್ಯೆಯ ರಾಮ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ಉದ್ಘಾಟನೆ ಮಾಡಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾಯುತ್ತಿದೆ. ಇನ್ನು ಬೆಂಗಳೂರಿನಿಂದ ಆಯೋಧ್ಯೆಗೆ ವಿಶೇಷ ವಿಮಾನಗಳ ವ್ಯವಸ್ಥೆಯಿದ್ದು, ಟಿಕೆಟ್‌ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹಾಗಾದರೆ ದರಗಳ ವಿವರವನ್ನು ಇಲ್ಲಿ ತಿಳಿಯಿರಿ.

ಜನವರಿ 22ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತರದಿಂದ ಕಾಯುತ್ತಿದೆ. ಇದೀಗ ಅಯೋಧ್ಯೆಗೆ ಬೆಂಗಳೂರಿನಿಂದ ಹೊರಟವರಿಗೆ ಶಾಕ್‌ವೊಂದು ಎದುರಾಗಿದೆ. ಬೆಂಗಳೂರು-ಅಯೋಧ್ಯೆ ವಿಮಾನ ದರ 400% ರಷ್ಟು ಹೆಚ್ಚಳ ಆಗಿದೆ. ಜನವರಿ 20ರಂದು ಅಯೋಧ್ಯೆಗೆ ಹೋಗಲು ವಿಮಾನದ ಟಿಕೆಟ್ ಬುಕ್ ಮಾಡುವುದಕ್ಕೆ ಹೊರಟವರು ಇದನ್ನು ಗಮನಿಸಲೇಬೇಕಿದೆ.

Bengaluru-Ayodhya flight ticket: ticket price Increase, know details

ಅತಿ ಕಡಿಮೆ ಟಿಕೆಟ್ ದರವೇ 24 ಸಾವಿರ ರೂಪಾಯಿ ಇದೆ. ವಿಮಾನದಲ್ಲಿ ಅಯೋಧ್ಯೆ ತಲುಪುವುದಕ್ಕೆ 24 ಸಾವಿರ ರೂಪಾಯಿ ಹಣ ನೀಡಬೇಕು. ಬೇರೆ ದಿನಕ್ಕೆ ಹೋಲಿಕೆ ಮಾಡಿದರೆ, ಈಗಿನ ಟಿಕೆಟ್ ದರದಲ್ಲಿ 395% ಏರಿಕೆ ಕಂಡು ಬಂದಿದೆ.

ಜನವರಿ 20ರಂದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1ಕ್ಕೆ ಹೊರಡಲಿರುವ ವಿಮಾನ ಅದೇ ದಿನ ರಾತ್ರಿ 11 ಗಂಟೆಗೆ ಅಯೋಧ್ಯೆಗೆ ತಲುಪಲಿದೆ. ನಡುವೆ 5 ಗಂಟೆಗಳ ಕಾಲ ಈ ವಿಮಾನ ಅಹಮದಾಬಾದ್‌ನಲ್ಲಿ ಇರಲಿದ್ದು, ಈ ವಿಮಾನದ ಟಿಕೆಟ್ ದರ 29,700 ರೂಪಾಯಿ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+