ಯುವಕನಿಗೆ ಕಿರುಕುಳ ಆರೋಪ ಇಬ್ಬರು ಪೊಲೀಸ್ ಪೇದೆ ಅಮಾನತು
ಬೆಂಗಳೂರು, ಜನವರಿ 16: ಯವಕನಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಆಧಾರದಲ್ಲಿ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಪೇದೆ ಸೋಮವಾರ ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನಗರದ ಖಾಸಗಿ ಸಂಸ್ಥೆಯೊಂದರಲ್ಲಿ ಇಂಟರ್ನಿ ಆಗಿ ಕೆಲಸ ನಿರ್ವಹಿಸುತ್ತಿರುವ ಯುವಕ ವೈಭವ್ ಪಾಟೀಲ್ ಎಂಬವವರು ಅಮಾನತುಗೊಂಡ ಇಬ್ಬರು ಪೇದೆಗಳ ವಿರುದ್ಧ ಆರೋಪ ಮಾಡಿದ್ದಾರೆ. ಈ ಯುವಕ ಪೊಲೀಸರು ಹಣಕ್ಕಾಗಿ ಹೇಗೆ ಕಿರುಕುಳ ನೀಡಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆ ಎಂಬುದನ್ನು ಟ್ವಿಟರ್ ನಲ್ಲಿ ವಿವರಿಸಿ ಪೋಸ್ಟ್ ಹಂಚಿಕೊಂಡಿದ್ದರು. ಪೋಲೀಸರ ವಿರುದ್ಧ ಈ ಆರೋಪ ಪ್ರಶ್ನಿಸಿ ಅನೇಕರು ಯುವಕನ ಪರವಾಗಿ ಕಾಮೆಂಟ್ ಮಾಡಿದ್ದರು. ಬಳಿಕ ಯುವಕ ಪೋಸ್ಟ್ ಡಿಲೀಟ್ ಮಾಡಿದ್ದಾನೆ ಎನ್ನಲಾಗಿದೆ.
ಬೆಂಗಳೂರು (ದಕ್ಷಿಣ) ಉಪ ಪೊಲೀಸ್ ಆಯುಕ್ತರಾದ ಸಿ.ಕೆ ಬಾಬಾ ಅವರು ಕಿರುಕುಳ ಆರೋಪ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಂಡೆಪಾಳ್ಯ ಪೊಲೀಸ್ ಠಾಣೆಯಿಂದ ಇಬ್ಬರು ಪೇದೆಗಳನ್ನು ಅಮಾನತು ಮಾಡಿ ಆದೇಶಿಸಿದ್ದೇವೆ. ಟ್ವೀಟ್ ಪರಿಶೀಲಿಸಿ ಯುವಕನ ದೂರಿನ ಆಧಾರದ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

ನಗರದಲ್ಲಿ ಗುರುವಾರ ತಡರಾತ್ರಿ ಬಂಡೆಪಾಳ್ಯ ಪೊಲೀಸ್ ಠಾಣೆಯ ಇಬ್ಬರು ಪೇದೆಗಳು ತನ್ನನ್ನು ತಡೆದು ನಿಲ್ಲಿಸಿ ಬ್ಯಾಗ್ ಅನ್ನು ಪರಿಶೀಲಿಸಿದರು. ಇದರಲ್ಲಿ ನಾನು ಗಾಂಜಾ ಇಟ್ಟಿರುವುದಾಗಿ ಅವರು ಆರೋಪಿಸಿದರು. ಬಳಿಕ ಇಬ್ಬರು ಪೊಲೀಸ್ ಪೇದೆಗಳು ತನ್ನಿಂದ ಹಣ ನೀಡುವಂತೆ ಬೇಡಿಕೆ ಇಟ್ಟರು. ಅಲ್ಲದೇ ನಿನ್ನ ವಿರುದ್ಧ ಮಾದಕ ದ್ರವ್ಯದ ಪ್ರಕರಣ ದಾಖಲಿಸಿ ಜೈಲಿಗಟ್ಟುತ್ತೇವೆ ಎಂದೆಲ್ಲ ಬೆದರಿಸಿದರು. ನಂತರ ನನ್ನಿಂದ 2,500 ರೂ. ಪಡೆದು ಸ್ಥಳದಲ್ಲೇ ಹಂಚಿಕೊಂಡಿದ್ದಾರೆ ಎಂದೆಲ್ಲ ಯುವಕ ಆರೋಪಿಸಿ ಬರೆದುಕೊಂಡಿದ್ದ.
ದಂಪತಿ ಅಡ್ಡಗಟ್ಟಿದ್ದವರು ಅಮಾನತು
ಯುವಕ ವೈಭವ್ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಇಂಟರ್ನಿ ಆಗಿ ಕೆಲಸ ಮಾಡುತ್ತಿದ್ದು, ಈತ ಮೂಲತಃ ಹಿಮಾಚಲ ಪ್ರದೇಶದ ನಿವಾಸಿ ಎಂದು ತಿಳಿದು ಬಂದಿದೆ. ಇಂತಹ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆ ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಂಗಳೂರಿನಲ್ಲಿ ಗಸ್ತು ತಿರುಗುವ ವೇಳೆ ದಂಪತಿಯನ್ನು ಸುಲಿಗೆ ಮಾಡಿದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಸಹ ಪೊಲೀಸ್ ಇಲಾಖೆ ಅಮಾನತು ಮಾಡಲಾಗಿತ್ತು.
ಆ ದಂಪತಿಯು ತಮಗಾದ ಕಿರುಕುಳವನ್ನು ಟ್ವಿಟರ್ ಮೂಲಕ ದೂರಿದ್ದರು. ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಟ್ಯಾಗ್ ಮಾಡಿದ್ದರು. ಈ ಪೋಸ್ಟ್ ಭಾರೀ ವೈರಲ್ ಆಗಿತ್ತು. ಕೂಡಲೇ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಇಂತಹ ವರ್ತನೆ ಯಾವ ಸಿಬ್ಬಂದಿಯಿಂದ ಸಹಿಸುವುದಿಲ್ಲ. ಜನರ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications