ಯುವಕನಿಗೆ ಕಿರುಕುಳ ಆರೋಪ ಇಬ್ಬರು ಪೊಲೀಸ್ ಪೇದೆ ಅಮಾನತು
ಬೆಂಗಳೂರು, ಜನವರಿ 16: ಯವಕನಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಆಧಾರದಲ್ಲಿ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಪೇದೆ ಸೋಮವಾರ ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನಗರದ ಖಾಸಗಿ ಸಂಸ್ಥೆಯೊಂದರಲ್ಲಿ ಇಂಟರ್ನಿ ಆಗಿ ಕೆಲಸ ನಿರ್ವಹಿಸುತ್ತಿರುವ ಯುವಕ ವೈಭವ್ ಪಾಟೀಲ್ ಎಂಬವವರು ಅಮಾನತುಗೊಂಡ ಇಬ್ಬರು ಪೇದೆಗಳ ವಿರುದ್ಧ ಆರೋಪ ಮಾಡಿದ್ದಾರೆ. ಈ ಯುವಕ ಪೊಲೀಸರು ಹಣಕ್ಕಾಗಿ ಹೇಗೆ ಕಿರುಕುಳ ನೀಡಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆ ಎಂಬುದನ್ನು ಟ್ವಿಟರ್ ನಲ್ಲಿ ವಿವರಿಸಿ ಪೋಸ್ಟ್ ಹಂಚಿಕೊಂಡಿದ್ದರು. ಪೋಲೀಸರ ವಿರುದ್ಧ ಈ ಆರೋಪ ಪ್ರಶ್ನಿಸಿ ಅನೇಕರು ಯುವಕನ ಪರವಾಗಿ ಕಾಮೆಂಟ್ ಮಾಡಿದ್ದರು. ಬಳಿಕ ಯುವಕ ಪೋಸ್ಟ್ ಡಿಲೀಟ್ ಮಾಡಿದ್ದಾನೆ ಎನ್ನಲಾಗಿದೆ.
ಬೆಂಗಳೂರು (ದಕ್ಷಿಣ) ಉಪ ಪೊಲೀಸ್ ಆಯುಕ್ತರಾದ ಸಿ.ಕೆ ಬಾಬಾ ಅವರು ಕಿರುಕುಳ ಆರೋಪ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬಂಡೆಪಾಳ್ಯ ಪೊಲೀಸ್ ಠಾಣೆಯಿಂದ ಇಬ್ಬರು ಪೇದೆಗಳನ್ನು ಅಮಾನತು ಮಾಡಿ ಆದೇಶಿಸಿದ್ದೇವೆ. ಟ್ವೀಟ್ ಪರಿಶೀಲಿಸಿ ಯುವಕನ ದೂರಿನ ಆಧಾರದ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.

ನಗರದಲ್ಲಿ ಗುರುವಾರ ತಡರಾತ್ರಿ ಬಂಡೆಪಾಳ್ಯ ಪೊಲೀಸ್ ಠಾಣೆಯ ಇಬ್ಬರು ಪೇದೆಗಳು ತನ್ನನ್ನು ತಡೆದು ನಿಲ್ಲಿಸಿ ಬ್ಯಾಗ್ ಅನ್ನು ಪರಿಶೀಲಿಸಿದರು. ಇದರಲ್ಲಿ ನಾನು ಗಾಂಜಾ ಇಟ್ಟಿರುವುದಾಗಿ ಅವರು ಆರೋಪಿಸಿದರು. ಬಳಿಕ ಇಬ್ಬರು ಪೊಲೀಸ್ ಪೇದೆಗಳು ತನ್ನಿಂದ ಹಣ ನೀಡುವಂತೆ ಬೇಡಿಕೆ ಇಟ್ಟರು. ಅಲ್ಲದೇ ನಿನ್ನ ವಿರುದ್ಧ ಮಾದಕ ದ್ರವ್ಯದ ಪ್ರಕರಣ ದಾಖಲಿಸಿ ಜೈಲಿಗಟ್ಟುತ್ತೇವೆ ಎಂದೆಲ್ಲ ಬೆದರಿಸಿದರು. ನಂತರ ನನ್ನಿಂದ 2,500 ರೂ. ಪಡೆದು ಸ್ಥಳದಲ್ಲೇ ಹಂಚಿಕೊಂಡಿದ್ದಾರೆ ಎಂದೆಲ್ಲ ಯುವಕ ಆರೋಪಿಸಿ ಬರೆದುಕೊಂಡಿದ್ದ.
ದಂಪತಿ ಅಡ್ಡಗಟ್ಟಿದ್ದವರು ಅಮಾನತು
ಯುವಕ ವೈಭವ್ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿನ ಖಾಸಗಿ ಸಂಸ್ಥೆಯೊಂದರಲ್ಲಿ ಇಂಟರ್ನಿ ಆಗಿ ಕೆಲಸ ಮಾಡುತ್ತಿದ್ದು, ಈತ ಮೂಲತಃ ಹಿಮಾಚಲ ಪ್ರದೇಶದ ನಿವಾಸಿ ಎಂದು ತಿಳಿದು ಬಂದಿದೆ. ಇಂತಹ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆ ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಂಗಳೂರಿನಲ್ಲಿ ಗಸ್ತು ತಿರುಗುವ ವೇಳೆ ದಂಪತಿಯನ್ನು ಸುಲಿಗೆ ಮಾಡಿದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಸಹ ಪೊಲೀಸ್ ಇಲಾಖೆ ಅಮಾನತು ಮಾಡಲಾಗಿತ್ತು.
ಆ ದಂಪತಿಯು ತಮಗಾದ ಕಿರುಕುಳವನ್ನು ಟ್ವಿಟರ್ ಮೂಲಕ ದೂರಿದ್ದರು. ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಟ್ಯಾಗ್ ಮಾಡಿದ್ದರು. ಈ ಪೋಸ್ಟ್ ಭಾರೀ ವೈರಲ್ ಆಗಿತ್ತು. ಕೂಡಲೇ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಇಂತಹ ವರ್ತನೆ ಯಾವ ಸಿಬ್ಬಂದಿಯಿಂದ ಸಹಿಸುವುದಿಲ್ಲ. ಜನರ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications