ಬೆಂಗಳೂರು ಬಂದ್: ನಮ್ಮ ಮೆಟ್ರೋ, ಓಲಾ, ಉಬರ್ ಸೇವೆ ಲಭ್ಯ- ಮಾಹಿತಿ, ವಿವರ
ಬೆಂಗಳೂರು, ಸೆಪ್ಟೆಂಬರ್ 26: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆ ನೀಡಿವೆ. ಆದರೆ, ಬೆಂಗಳೂರಿನಲ್ಲಿ ಬಹುತೇಕ ಎಲ್ಲಾ ಸಾರಿಗೆ ಸೇವೆಗಳು ಲಭ್ಯವಿದೆ. ಸಂಘಟನೆಗಳು ಬಂದ್ಗೆ ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡಿದ್ದರಿಂದ ಸಾರ್ವಜನಿಕರಿಗೆ ಎಲ್ಲಾ ಸೇವೆಗಳನ್ನೂ ಒದಗಿಸಲಾಗುತ್ತಿದೆ.
ಬಿಎಂಟಿಸಿ ಬಸ್ಗಳು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಎಲ್ಲಾ ಮಾರ್ಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ನಗರ ಸಾರಿಗೆ ಸಂಸ್ಥೆಯು ಎಕ್ಸ್ನಲ್ಲಿ ಪ್ರಕಟಿಸಿದೆ. ಆದಾಗ್ಯೂ, ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಜನಜಂಗುಳಿ ಕಂಡುಬಂದಿಲ್ಲ. ಕೆಲವೇ ಪ್ರಯಾಣಿಕರನ್ನು ಹೊಂದಿರುವ ಬಸ್ಸುಗಳು ಸಂಚರಿಸುತ್ತಿರುವ ಬಗ್ಗೆ ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಸಿಬ್ಬಂದಿ ಮತ್ತು ಕಾರ್ಮಿಕರ ಫೆಡರೇಶನ್ ಬೆಂಗಳೂರು ಬಂದ್ಗೆ ಬೆಂಬಲ ನೀಡಿದೆ.

ನಮ್ಮ ಮೆಟ್ರೋ: ನಗರದ ಪ್ರಯಾಣಿಕರಿಗೆ ಮೆಟ್ರೋ ಸೇವೆ ಲಭ್ಯವಿದೆ. ಬೆಂಗಳೂರಿನ ನಮ್ಮ ಮೆಟ್ರೋದ ಯಾವುದೇ ಮಾರ್ಗದಲ್ಲಿ ಯಾವುದೇ ಅಡಚಣೆಗಳಿಲ್ಲ.
ಓಲಾ / ಉಬರ್ ಕ್ಯಾಬ್ ಸೇವೆಗಳು: ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘವು ಬಂದ್ಗೆ ಬೆಂಬಲವನ್ನು ಹಿಂಪಡೆದ ನಂತರ ನಗರದಾದ್ಯಂತ ಟ್ಯಾಕ್ಸಿ ಸೇವೆಗಳು ಲಭ್ಯವಿರುತ್ತವೆ. ಈ ಮಾತನಾಡಿರುವ ಸಂಘದ ಅಧ್ಯಕ್ಷ ತನ್ವೀರ್ ಪಾಷಾ, 'ಶುಕ್ರವಾರ ರಾಜ್ಯಾದ್ಯಂತ ನಡೆಯುವ ಬಂದ್ಗೆ ಸಂಘಟನೆ ಬೆಂಬಲ ನೀಡಲಿದೆ. ರಾಜ್ಯಾದ್ಯಂತ ನಡೆಯಲಿರುವ ಬಂದ್ನಲ್ಲಿ ಭಾಗವಹಿಸಲು ನಿರ್ಧರಿಸಿದ್ದೇವೆ. ಎರಡು ದಿನವೂ ಭಾಗವಹಿಸಲು ಸಾಧ್ಯವಾಗದ ಕಾರಣ ಬೆಂಗಳೂರು ಬಂದ್ನಿಂದ ಹಿಂದೆ ಸರಿದಿದ್ದೇವೆ' ಎಂದು ಹೇಳಿದ್ದಾರೆ.

ಆಟೋ ಸೇವೆಗಳು: ಆಟೋ ಚಾಲಕರು ಮುಷ್ಕರವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಸಾಮಾನ್ಯಕ್ಕಿಂತ ಹೆಚ್ಚು ಶುಲ್ಕ ವಿಧಿಸುತ್ತಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಒಬ್ಬ ಪ್ರಯಾಣಿಕರಿಗೆ 12 ಕಿಲೋಮೀಟರ್ಗಳಿಗೆ 300-500 ರೂಪಾಯಿಗಳನ್ನು ನೀಡುವಂತೆ ಕೇಳಲಾಗಿದೆ ಎಂದು 'ಎಎನ್ಐ' ವರದಿ ಮಾಡಿದೆ.
'ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ನಮ್ಮ ಬೆಂಬಲವಿದೆ. ಕಾವೇರಿ ನದಿ ನೀರಿನ ಸಮಸ್ಯೆ ಬಂದಾಗ, ನಮ್ಮದು ನಿಲುವು ಸ್ಪಷ್ಟವಾಗಿದೆ. ಇಂದು ಆಟೋಗಳು ಓಡುವುದಿಲ್ಲ. ನಾವು ಬಂದ್ ಅನ್ನು ಬೆಂಬಲಿಸುತ್ತೇವೆ' ಎಂದು ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ ಆಟೋ ಚಾಲಕ ನಸೀರ್ ಖಾನ್ ಹೇಳಿದರು.
ಅಂತರರಾಜ್ಯ ವಿಮಾನಗಳು: ಬೆಂಗಳೂರು ಬಂದ್ ಬಿಸಿ ಅಂತರರಾಜ್ಯ ವಿಮಾನಗಳಿಗೆ ತಟ್ಟಿದೆ. ಪ್ರಯಾಣಿಕರಿಲ್ಲದ ಕಾರಣ ಸುಮಾರು 13 ವಿಮಾನಗಳನ್ನು ರದ್ದುಗೊಳಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications