Bengaluru Bandh: ಪ್ರತಿಭಟನೆ ಆರಂಭಕ್ಕೆ ಮುನ್ನವೇ ಕುರುಬೂರು ಪೊಲೀಸರ ವಶಕ್ಕೆ
ಬೆಂಗಳೂರು, ಸೆ 26: ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕರೆಯಲಾಗಿರುವ ಬೆಂಗಳೂರು ಬಂದ್ ಗೆ ಪ್ರಾಥಮಿಕ ಮಾಹಿತಿಯ ಪ್ರಕಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಸ್, ಆಟೋ ಸಂಚಾರ ವಿರಳವಾಗಿದ್ದು, ಅಂಗಡಿ ಮುಂಗಟ್ಟುಗಳು ಅಲ್ಲಲ್ಲಿ ತೆರೆದಿವೆ.
ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಪ್ರತಿಭಟನಾಕಾರರು ಸಿದ್ದತೆಯನ್ನು ನಡೆಸಿಕೊಂಡಿದ್ದಾರೆ. ಈ ಸಂಬಂಧ ವಿವಿಧ ಸಂಘಟನೆಗಳು ಸದಸ್ಯರು, ಮುಖಂಡರು ಮೈಸೂರು ಬ್ಯಾಂಕ್ ವೃತ್ತದತ್ತ ಜಮಾಯಿಸುತ್ತಿದ್ದಾರೆ.

ಆದರೆ, ಪ್ರತಿಭಟನಾ ಮೆರವಣಿಗೆ ಆರಂಭ ಆಗುವುದಕ್ಕೂ ಮುನ್ನವೇ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿದಂತೆ ಪ್ರತಿಭಟನಾಕಾರರನ್ನು ಪೊಲೀಸರು ಮೈಸೂರು ಬ್ಯಾಂಕ್ ವೃತ್ತದ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿಭಟನಾ ಮೆರವಣಿಗೆ ನಡೆಸುವ ವಿಚಾರದಲ್ಲಿ ಪೊಲೀಸರು ಮತ್ತು ಕುರುಬೂರು ಮತ್ತು ರೈತ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದೆ. ಇದಾದ ನಂತರ, ಪೊಲೀಸರು ರೈತ ಸಂಘಟನೆಯವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ನಗರಕ್ಕೆ ನಲವತ್ತು ಟಿಎಂಸಿ ನೀರು ಬೇಕಿದೆ, ಇದರಿಂದ ಗೊತ್ತಾಗುತ್ತದೆ ಕಾವೇರಿ ನೀರು ಬೆಂಗಳೂರಿಗೆ ಎಷ್ಟು ಮುಖ್ಯ ಎಂದು. ಹಾಗಾಗಿ, ನಾವು ಬಂದ್ ಕರೆಯೋದಲ್ಲ, ಬೆಂಗಳೂರು ನಿವಾಸಿಗರೇ ಸ್ವಯಂಪ್ರೇರಿತರಾಗಿ ಬಂದ್ ನಲ್ಲಿ ಪಾಲ್ಗೊಳ್ಳಬೇಕು"ಎಂದು ಕುರುಬೂರು ಶಾಂತಕುಮಾರ್ ಮನವಿ ಮಾಡಿದ್ದಾರೆ.
ರಾಮನಗರ, ಮಂಡ್ಯ, ಮೈಸೂರು ವ್ಯಾಪ್ತಿಯಲ್ಲಿಯೂ ಸಹ ಪ್ರತಿಭಟನೆಗಳು ನಡೆಯುತ್ತಿವೆ. ರಾಮನಗರದಲ್ಲಿ ಪ್ರತಿಭಟನಾಕಾರರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಪ್ರತಿಕ್ರಿತಿಯನ್ನು ದಹಿಸಿ ಆಕ್ರೋಶ ಹೊರಹಾಕಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications