Kadalekai Parishe 2025: ಬಸವನಗುಡಿ ಕಡಲೆಕಾಯಿ ಪರಿಷೆ ಈ ಬಾರಿ ಎಷ್ಟು ದಿನ ನಡೆಯುತ್ತೆ?
ಕಾರ್ತಿಕ ಮಾಸದ ಕೊನೆಯ ಸೋಮವಾರದ ಪ್ರಯುಕ್ತ ಬೆಂಗಳೂರಿನ ಬಸವನಗುಡಿಯಲ್ಲಿ ಇಂದಿನಿಂದ ಐತಿಹಾಸಿ ಕಡಲೆಕಾಯಿ ಪರಿಷೆ ಆರಂಭವಾಗಿದೆ. ಇಲ್ಲಿನ ಬಸವನಗುಡಿಯ ದೊಡ್ಡ ಬಸವಣ್ಣನ ದೇಗುಲದಲ್ಲಿ ವಿಶೇಷ ಅಭಿಷೇಕದೊಂದಿಗೆ ಕಡಲೆಕಾಯಿ ಪರಿಷೆಗೆ ಚಾಲನೆ ಸಿಕ್ಕಿದೆ. ಹೆಸರೇ ಹೇಳುವಂತೆ ಇಲ್ಲಿ ಕಡಲೆಕಾಯಿ ಕೇಂದ್ರಬಿಂದುವಾಗಿದೆ. ಪರಿಷೆಯಲ್ಲಿ ಎತ್ತ ಕಣ್ಣುಹಾಯಿಸಿದರೂ ಬಗೆಬಗೆಯ ಕಡಲೆಕಾಯಿಗಳನ್ನು ರಾಶಿ ಹಾಕಲಾಗಿದೆ. ಈ ಬಾರಿ ಎಷ್ಟು ದಿನ ಪರಿಷೆ ನಡೆಯಲಿದೆ? ಹಾಗೂ ಏನೆಲ್ಲ ವಿಶೇಷತೆ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಬಸವನಗುಡಿ ಕಡಲೆಕಾಯಿ ಪರಿಷೆಯು ಐತಿಹಾಸಿಕ ಹಿನ್ನೆಲೆ ಹೊಂದಿದೆ. ಪ್ರತಿ ವರ್ಷವೂ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಪರಿಷೆ ಶುರುವಾಗುತ್ತದೆ. ಈ ಬಾರಿ ಐದು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಬಾರಿಯ ವಿಶೇಷವೆಂದರೆ ಪರಿಷೆ ಪ್ಲಾಸ್ಟಿಕ್ ಮುಕ್ತವಾಗಿರಲಿದ್ದು, ಲಕ್ಷಾಂತರ ಪ್ರವಾಸಿಗರು ಆಗಮಿಸಲಿದ್ದಾರೆ. ಕರ್ನಾಟಕ ಮಾತ್ರವಲ್ಲದೆ ನೆರೆ ರಾಜ್ಯಗಳಿಂದಲೂ ವ್ಯಾಪಾರಿಗಳು ಕೂಡ ಇಲ್ಲಿಗೆ ಕಡಲೆಕಾಯಿ ಮಾರಾಟಕ್ಕೆ ಆಗಮಿಸಿದ್ದು, ರೈತರಿಗೂ ಲಾಭದ ನಿರೀಕ್ಷೆಯಲ್ಲಿದೆ.

ಈಗಾಗಲೇ ಪರಿಷೆಗಾಗಿ ಬಸವನಗುಡಿಯ ಬೀದಿಗಳನ್ನು ಅಲಂಕಾರ ಮಾಡಲಾಗಿದೆ. ರಸ್ತೆಯ ಎರಡೂ ಬದಿ ಕಡಲೆಕಾಯಿ ರಾಶಿ ಹಾಕಿಕೊಂಡು ಭರ್ಜರಿ ಮಾರಾಟ ನಡೆಯುತ್ತಿದೆ. ಲಕ್ಷಾಂತರ ಜನ ಈ ಪರಿಷೆಗೆ ಸೇರುತ್ತಿರುವ ಕಾರಣ ಪ್ರತಿ ವರ್ಷವೂ ಕೇವಲ ಎರಡು ದಿನಕ್ಕೆ ಮಾತ್ರವೇ ಪರಿಷೆಯನ್ನು ಸೀಮಿತಗೊಳಿಸಲಾಗಿತ್ತು. ಆದರೆ ಇದೇ ಮೊದಲ ಬಾರಿಗೆ ಕಡಲೆಕಾಯಿ ಪರಿಷೆಯನ್ನು ಐದು ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ. ವ್ಯಾಪಾರಿಗಳು ಸಂತಸದಿಂದ ಕಡಲೆಕಾಯಿ ರಾಶಿ ಹಾಕ್ಕೊಂಡು ಕುಳಿತಿದ್ದಾರೆ.
ಈ ಬಾರಿಯೂ ಬಸವನಗುಡಿಯ ದೊಡ್ಡ ಬಸವಣ್ಣ ಹಾಗೂ ದೊಡ್ಡಗಣಪತಿ ದೇವಾಲಯಗಳಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಬೆಂಗಳೂರು ಮಂದಿ ಹೆಚ್ಚಾಗಿ ಈ ಪರಿಷೆಗೆ ಕುಟುಂಬ ಸಮೇತರಾಗಿ ಬರುತ್ತಾರೆ. ಅಲ್ಲದೆ ಅಕ್ಕಪಕ್ಕದ ಜಿಲ್ಲೆಗಳು, ನೆರೆಯ ತಮಿಳುನಾಡು, ಆಂಧ್ರ ಪ್ರದೇಶಗಳ ರೈತರು ಕೂಡ ತಾವು ಬೆಳೆದ ಕಡಲೆಕಾಯಿ ಮಾರಾಟ ಮಾಡಲು ಪ್ರತಿ ವರ್ಷ ಇಲ್ಲಿಗೆ ಬರುತ್ತಾರೆ.

ಏನೆಲ್ಲ ಕಾರ್ಯಕ್ರಮಗಳು ಇರಲಿವೆ?
ಕಡಲೆಕಾಯಿ ಪರಿಷೆಯ ಅಂಗವಾಗಿ ಈ ಬಾರಿ ಕೆಂಪಾಂಬುಧಿ ಕೆರೆಯಲ್ಲಿ ನ.17ರಂದು ಸಂಜೆ 6 ಗಂಟೆಗೆ ತೆಪ್ಪೋತ್ಸವ ನಡೆಯಲಿದೆ. ಇದಲ್ಲದೆ ಸಂಗೀತ, ನೃತ್ಯ ಕಾರ್ಯಕ್ರಮಗಳೂ ಇರಲಿವೆ. ಬ್ಯೂಗಲ್ ರಾಕ್ ಪಾರ್ಕ್ನಲ್ಲಿ ಮೂರು ದಿನಗಳ ಕಾಲ ಸಂಜೆ 6ರಿಂದ ಸಂಗೀತ ಸಂಜೆ, ಹಾಸ್ಯ ಸಂಜೆ ಹಾಗೂ ಭರತನಾಟ್ಯ ಪ್ರದರ್ಶನಗಳು ಕೂಡ ಆಯೋಜಿಸಲಾಗಿದೆ. ನವೆಂಬರ್ 17ರಿಂದ ನವೆಂಬರ್ 21ರವರೆಗೆ ಪರಿಷೆ ನಡೆಯಲಿದೆ. ಈವರೆಗೆ ಎರಡು ಅಥವಾ ಮೂರು ದಿನಗಳವರೆಗೆ ಮಾತ್ರ ಪರಿಷೆಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಐದು ದಿನಗಳ ಕಾಲ ನಡೆಯಲಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications