ಬೆಂಗಳೂರು ಮೂಲದ ಸಂಸ್ಥೆಯಿಂದ ಲಂಡನ್ನಲ್ಲಿ ಸಂವಿಧಾನ ಜಾಗೃತಿ: ಎಂ.ಕೆ ಸ್ಟಾಲಿನ್ ಮೆಚ್ಚುಗೆ !
ಬೆಂಗಳೂರು ಮೂಲದ (Reclaim Constitution) ಎನ್ನುವ ಸಂಸ್ಥೆಯೊಂದು ವಿಭಿನ್ನವಾದ ಪ್ರಯತ್ನವನ್ನು ಮಾಡುತ್ತಿದ್ದು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಲಂಡನ್ನ SOAS ಗ್ಯಾಲರಿಯಲ್ಲಿ "ಆಫ್ಟರ್ ದಿ ಅಸೆಂಬ್ಲಿ: ಕಾನ್ಸ್ಟಿಟ್ಯೂಟಿಂಗ್ ಇಂಡಿಯಾ" ಎಂಬ ಕಾರ್ಯಕ್ರಮ ನಡೆಯುತ್ತಿದೆ. ಅದರಲ್ಲಿ ಬೆಂಗಳೂರು ಮೂಲದ ರಿಕ್ಲೈಮ್ ಕಾನ್ಸ್ಟಿಟ್ಯೂಷನ್ ಎನ್ನುವ ಸಂಸ್ಥೆಯು ಸಂವಿಧಾನ ಸಭೆಯ ಚರ್ಚೆಗಳ ಕುರಿತು ದಾಖಲೆಗಳು ಹಾಗೂ ವಿಶೇಷವಾದ ವಸ್ತುಗಳನ್ನು ಪ್ರದರ್ಶಿಸುವ ಮೂಲಕ ಸಂವಿಧಾನ ರಚನೆಯ ಆರಂಭಿಕ ದಿನಗಳ ಬಗ್ಗೆ ಹಲವಾರು ಮಾಹಿತಿಯನ್ನು ಹಂಚಿಕೊಳ್ಳುತ್ತಿದೆ. ಇದೊಂದು ವಿಭಿನ್ನವಾದ ಕಾರ್ಯಕ್ರಮವಾಗಿದೆ.
ರಿಕ್ಲೈಮ್ ಕಾನ್ಸ್ಟಿಟ್ಯೂಷನ್ನ ವಿನಯ್ ಕುಮಾರ್ ಅವರು ಸಂವಿಧಾನ ಸಭೆಯಲ್ಲಿ ಭಾಗಿಯಾಗಿದ್ದವರು ಮಾತ್ರ ಸಂವಿಧಾನ ರಚನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಅಭಿಪ್ರಾಯ ಕೆಲವೊಮ್ಮೆ ಇರುತ್ತದೆ. ಆದರೆ ಕೊಡುಗೆ ನೀಡಿದ ಅನೇಕ ಸಾಮಾನ್ಯ ಜನರು ಸಹ ಇದ್ದಾರೆ. ಭಾರತದ ಸಾಮಾನ್ಯ ಜನರು ಸಹ ಸಂವಿಧಾನ ಸಭೆಗೆ ಕಳುಹಿಸಿದ ಸಾವಿರಾರು ಪತ್ರಗಳು ಇಲ್ಲಿವೆ ಎಂದಿದ್ದಾರೆ. ಈ ಸಂಬಂಧ ದಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಬೆಂಗಳೂರು ಮೂಲದ ಸಂಸ್ಥೆಯೊಂದು ಸಂವಿಧಾನ ವಿಚಾರವಾಗಿ ಅದರಲ್ಲೂ ಲಂಡನ್ನಲ್ಲಿ ವಿಶೇಷ ಅಭಿಯಾನ ಆಯೋಜಿಸಿರುವುದು ಗಮನ ಸೆಳೆದಿದೆ.

ಈ ಕಾರ್ಯಕ್ರಮದಲ್ಲಿ ಭಾರತೀಯ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು, ರೀಕ್ಲೈಮ್ ಕಾನ್ಸ್ಟಿಟ್ಯೂಷನ್ ಸಂವಿಧಾನದ ಮುನ್ನುಡಿಯನ್ನು ಹೊಂದಿರುವ ಬ್ಯಾಗ್ಗಳನ್ನು ಹಾಗೂ ವಿಶೇಷ ಕಲಾಕೃತಿಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಸ್ವಾತಂತ್ರ್ಯದ ನಂತರದ ಮೊದಲ ಅಂಚೆಚೀಟಿಯಿಂದ ಇಂದಿನ ಕಾಲದಲ್ಲಿ ಬಿಡುಗಡೆಯಾದ ಅಂಚೆಚೀಟಿಗಳವರೆಗೆ ಸಾಂವಿಧಾನಿಕ ವಿಷಯಗಳನ್ನು ಪ್ರದರ್ಶಿಸುವ ಅಂಚೆಚೀಟಿಗಳು ಹಾಗೂ ಅಂಚೆಚೀಟಿಗಳ ಸಂಗ್ರಹವನ್ನು ಸಹ ಈ ಪ್ರದರ್ಶನದಲ್ಲಿ ಇರಿಸಲಾಗಿದೆ.
ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು 200 ಅಂಚೆಚೀಟಿಗಳ ವಸ್ತುಗಳ ಮೂಲ ಸಂಗ್ರಹವು ಸಹ ಸೇರಿದೆ.
ಇನ್ನು ಈಚೆಗೆ ಈ ತಂಡವನ್ನು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಭೇಟಿ ಮಾಡಿದ್ದರು. ಸಂವಿಧಾನ ವಿಷಯದ ಬಗ್ಗೆ ಜಾಗೃತಿ ಹಾಗೂ ಅಭಿಯಾನ ಉತ್ತಮವಾಗಿದೆ ಎಂದಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರು ಮೂಲದ ಸಂಸ್ಥೆಯೊಂದು ವಿದೇಶದಲ್ಲಿ ಜಾಗೃತಿ ಮೂಡಿಸುತ್ತಿರುವುದು ಹಾಗೂ ವಿದೇಶಿಗರು ಸೇರಿದಂತೆ ಹಲವರ ಗಮನ ಸೆಳೆದಿರುವುದು ಇದೀಗ ಮೆಚ್ಚಿಗೆಗೆ ಪಾತ್ರವಾಗಿದೆ.
ವಸಾಹತುಶಾಹಿಯ ದೃಷ್ಟಿಕೋನದ ಮೂಲಕ ಸಂವಿಧಾನಗಳೊಂದಿಗೆ ವ್ಯವಹರಿಸುವ ವಿದ್ವಾಂಸರನ್ನು ಭೇಟಿ ಮಾಡುವುದಕ್ಕೂ ಅವಕಾಶ ಸಿಕ್ಕಿರುವುದಾಗಿ ಸಂಸ್ಥೆ ಹೇಳಿಕೊಂಡಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications