ಬೆಂಗಳೂರು ವಾಯು ಮಾಲಿನ್ಯ ನಿಯಂತ್ರಣಕ್ಕೆ ಲಂಡನ್ ಸಂಸ್ಥೆ ಜೊತೆ ಒಪ್ಪಂದ
ಬೆಂಗಳೂರು, ಡಿಸೆಂಬರ್ 05 : ಬೆಂಗಳೂರು ನಗರದ ವಾಯುಮಾಲಿನ್ಯ ನಿಯಂತ್ರಣಕ್ಕೆ ಲಂಡನ್ ಸಹಭಾಗಿತ್ವ ಸಿಗಲಿದೆ. ಬಿಬಿಎಂಪಿ ಮೇಯರ್ ಸಂಪತ್ ರಾಜ್ ಲಂಡನ್ ಸಂಸ್ಥೆಯ ಜೊತೆ ಈ ಕುರಿತ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.
ದೆಹಲಿಯಲ್ಲಿ ಬಿಬಿಎಂಪಿ ಮೇಯರ್ ಸಂಪತ್ ರಾಜ್, ಲಂಡನ್ ಮೇಯರ್ ಸಾದಿಕ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಸಿ40 ಸಂಸ್ಥೆ ಜೊತೆ ಬಿಬಿಎಂಪಿ ಒಪ್ಪಂದ ಮಾಡಿಕೊಳ್ಳಲಿದ್ದು, ಇದು ವಾಯು ಮಾಲಿನ್ಯದ ಕುರಿತು ತಪಾಸಣೆ ನಡೆಸಿ ಪರಿಹಾರ ಸೂಚಿಸಲಿದೆ.
ಲಂಡನ್ ಮೂಲದ ಸಿಟೀಸ್ ಕ್ಲೈಮೆಟ್ ಲೀಡರ್ ಶಿಪ್ ಗ್ರೂಪ್ (ಸಿ40) ಸಂಸ್ಥೆ ಮಹಾನಗರದಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಲಹೆ ನೀಡುತ್ತದೆ. ವಿಶ್ವದ 90ಕ್ಕೂ ಹೆಚ್ಚು ಮಹಾನಗರಗಳನ್ನು ಸಿ40 ಸಂಸ್ಥೆ ಆಯ್ಕೆ ಮಾಡಿಕೊಳ್ಳಲಿದೆ.
ಬೆಂಗಳೂರು ನಗರದ ಮಾಲಿನ್ಯದ ಬಗ್ಗೆಯೂ ಅಧ್ಯಯನ ನಡೆಸುತ್ತೇವೆ ಎಂದು ಸಿ40 ಬಿಬಿಎಂಪಿಗೆ ಪತ್ರ ಬರೆದಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಒಟ್ಟಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಉತ್ತರ ಬರೆದಿದ್ದರು. ಇಂದು ದೆಹಲಿಯಲ್ಲಿ ಲಂಡನ್ ಮೇಯರ್ ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

ಲಂಡನ್ ಮೇಯರ್ ಭೇಟಿ
ದೆಹಲಿಯಲ್ಲಿ ಬಿಬಿಎಂಪಿ ಮೇಯರ್ ಸಂಪತ್ ರಾಜ್, ಲಂಡನ್ ಮೇಯರ್ ಸಾದಿಕ್ ಖಾನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತ ಒಪ್ಪಂದ ಡಿ.7ರಂದು ನಡೆಯಲಿದೆ. ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

1 ವರ್ಷದ ಕಾರ್ಯಕ್ರಮ
ಒಡಂಬಡಿಕೆ ಪ್ರಕಾರ ಇದು ಒಂದು ವರ್ಷದ ಕಾರ್ಯಕ್ರಮವಾಗಿದೆ. ಸುಮಾರು 64 ಕೋಟಿ ಅನುದಾನ ಸಿಗಲಿದೆ. ಈ ಹಣದಲ್ಲಿ ಬೆಂಗಳೂರು ನಗರದಾದ್ಯಂಂತ 1000 ವಾಯುಗುಣಮಟ್ಟ ಮೇಲ್ವಿಚಾರಣಾ ಸೆನ್ಸಾರ್ಗಳನ್ನು ಅಳವಡಿಸಲಾಗುತ್ತದೆ.

ಮೇಯರ್ ಹೇಳಿದ್ದೇನು?
ಮಾಧ್ಯಮಗಳ ಜೊತೆ ಮಾತನಾಡಿರುವ ಬೆಂಗಳೂರು ಮೇಯರ್ ಸಂಪರ್ ರಾಜ್, 'ಪ್ರಸ್ತುತ ನಗರದಲ್ಲಿ 19 ಕಡೆ ಮಾಲಿನ್ಯ ಮಾಪಕ ಅಳವಡಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಿತರ ಪ್ರದೇಶಗಳಲ್ಲಿಯೂ ಆಳವಡಿಸಲಾಗುತ್ತದೆ' ಎಂದು ಹೇಳಿದರು.

ಸಿ40 ಗ್ರೂಪ್ ಏನು ಮಾಡುತ್ತದೆ?
ಸಿ40 ಸಂಸ್ಥೆ ತನ್ನ ಜಾಲದಲ್ಲಿರುವ ನಗರಗಳಲ್ಲಿ ವಾಯು ಮಾಲಿನ್ಯ ತಡೆಗಟ್ಟಲು ಗಮನಹರಿಸಲಿದೆ. ವಾಯು ಮಾಲಿನ್ಯ ಗುಣಮಟ್ಟದ ಮೇಲ್ವಿಚಾರಣೆ, ಪರಿಹಾರದ ಕುರಿತು ಚರ್ಚಿಸಲಾಗುತ್ತದೆ. ವಾಯು ಮಾಲಿನ್ಯದ ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಜತೆಗೆ ಸುಸ್ಥಿರ ನಗರ ಅಭಿವೃದ್ಧಿ ಮಾಡುವುದು ಹೇಗೆ? ಎಂದು ವಿಚಾರ ವಿನಿಮಯವನ್ನು ಮಾಡಲಿದೆ.

'ಮತ್ತೊಂದು ದೆಹಲಿಯಾಗಲು ಬಿಡಬಾರದು'
'ಬೆಂಗಳೂರು ನಗರದಲ್ಲಿ 20-30 ವರ್ಷಗಳಿಂದ ಸಂಚಾರ ನಡೆಸುತ್ತಿರುವ ವಾಹನಗಳು ನಗರಕ್ಕೆ ಅಪಾಯಕಾರಿಯಾಗಿವೆ. ನಗರದಲ್ಲಿ ನೋಂದಣಿಯಾಗಿರುವ ವಾಹನಗಳ ಮಾಹಿತಿ ಮಾತ್ರ ಇದೆ. ಆದರೆ, ಬೇರೆ ನಗರಗಳಿಂದ ಬಂದಿರುವ ವಾಹನಗಳ ಮಾಹಿತಿ ಇಲ್ಲ. ಬೆಂಗಳೂರು ಮತ್ತೊಂದು ದೆಹಲಿಯಾಗಲು ಬಿಡಬಾರದು' ಎಂದು ಮೇಯರ್ ಸಂಪರ್ ರಾಜ್ ಹೇಳಿದರು.
-
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ












Click it and Unblock the Notifications