ಹೊಸ ಯೋಜನೆ ಇಲ್ಲದ ಬಿಬಿಎಂಪಿ ಬಜೆಟ್ ಮುಖ್ಯಾಂಶಗಳು
ಬೆಂಗಳೂರು, ಮಾ. 18 : ಯಾವುದೇ ಹೊಸ ಯೋಜನೆಗಳನ್ನು ಘೋಷಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್ ಮಂಗಳವಾರ ಮಂಡನೆಯಾಗಿದೆ. ಏ.22ಕ್ಕೆ ಬಿಬಿಎಂಪಿ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದ್ದು, ಚುನಾವಣೆ ಎದುರಾಗಲಿದೆ.
ಮಂಗಳವಾರ ಮಧ್ಯಾಹ್ನ 12 ಗಂಟೆಗೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಆನಂದ್ ಅವರು 2015-16ನೇ ಸಾಲಿನ ಒಟ್ಟು 6,729 ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿದರು. 2014-15ನೇ ಸಾಲಿನಲ್ಲಿ7,779 ಕೋಟಿ ಬಜೆಟ್ ಮಂಡಿಸಿದ್ದ ಪಾಲಿಕೆ ಈ ಬಾರಿ ಬಜೆಟ್ ಗಾತ್ರವನ್ನು ತಗ್ಗಿಸಿಕೊಂಡಿದೆ.

ಹಾಸಿಗೆ ಇದ್ದಷ್ಟು ಕಾಲು ಚಾಚಿದ್ದೇವೆ : 'ಹಾಸಿಗೆ ಇದ್ದಷ್ಟು ಕಾಲುಚಾಚಿ ಅನುಷ್ಠಾನಗೊಳಿಸಲು ಯೋಗ್ಯವಾದ ಬಜೆಟ್ ನೀಡಿದ್ದೇವೆ. ಅನಗತ್ಯ ಕಾಮಗಾರಿ ಮತ್ತು ಯೋಜನೆಗಳಿಗೆ ಕಡಿವಾಣ ಹಾಕಿದ್ದೇವೆ. ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಸರ್ಕಾರ ಬಜೆಟ್ಗೆ ಅನುಮತಿ ನೀಡಿದೆ' ಎಂದು ಮೇಯರ್ ಎನ್.ಶಾಂತಕುಮಾರಿ ಹೇಳಿದ್ದಾರೆ. [ಸಿದ್ದರಾಮಯ್ಯ ಬಜೆಟ್ : ಬೆಂಗಳೂರಿಗೆ ಏನು ಸಿಕ್ತು?]
ಬಜೆಟ್ನಲ್ಲಿ ನಗರೋತ್ಥಾನದಡಿ ಮೂಲ ಸೌಕರ್ಯ ಒದಗಿಸಲು 600 ಕೋಟಿ, ಘನತ್ಯಾಜ್ಯ ಮತ್ತು ಕಸ ವಿಲೇವಾರಿಗೆ 415 ಕೋಟಿ, ಕೆರೆ ಅಭಿವೃದ್ಧಿಗೆ 130 ಕೋಟಿ, ಬೀದಿ ದೀಪಗಳ ನಿರ್ವಹಣೆಗೆ 55 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. [ಕರ್ನಾಟಕ ಬಜೆಟ್ ಮುಖ್ಯಾಂಶಗಳು]
ಬಜೆಟ್ ಮುಖ್ಯಾಂಶಗಳು
* ರಾಜ್ಯ ಸರ್ಕಾರದಿಂದ 5,480.47 ಕೋಟಿ ರೂ. ಅನುದಾನಕ್ಕೆ ಮನವಿ
* ಕೇಂದ್ರ, ರಾಜ್ಯ ಸರ್ಕಾರಗಳ ಕಟ್ಟಡಗಳಿಂದ ಸೇವಾ ಶುಲ್ಕ ಕಡ್ಡಾಯ ವಸೂಲು
* ಅತಿಥಿಗೃಹ, ಪಿ.ಜಿ ಹಾಸ್ಟೆಲ್ ವಸತಿಯೇತರ ತೆರಿಗೆ ವ್ಯಾಪ್ತಿಗೆ
* ಭೂಪರಿವರ್ತನೆಯಾದ ಸ್ವತ್ತುಗಳಿಂದ ಸುಧಾರಣಾ ವೆಚ್ಚ ಸಂಗ್ರಹ
* ಪಾಲಿಕೆ ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ಸಿಸಿಟಿವಿ ಆಳವಡಿಕೆ 1 ಕೋಟಿ ಅನುದಾನ
* ಆಸ್ತಿ ತೆರಿಗೆ ಸಂಗ್ರಹದ ಗುರಿ 2,480 ಕೋಟಿ
* ಪಾಲಿಕೆಯ ಎಲ್ಲಾ ಆರ್ಥಿಕ ವ್ಯವಹಾರಗಳನ್ನು ಆನ್ಲೈನ್ ಮೂಲಕ ಮಾಡಲು ಕ್ರಮ
* ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆನೀರು ಕೊಯ್ಲ ಅಳವಡಿಕೆ ಕಡ್ಡಾಯ ಮುಂದುವರಿಕೆ
* ಮಲ್ಲೇಶ್ವರಂನಲ್ಲಿ ಬಹುಮಹಡಿ ವಾಹನ ನಿಲ್ದಾಣ ಮತ್ತು ಮಾರುಕಟ್ಟೆ ನಿರ್ಮಾಣಕ್ಕೆ 20 ಕೋಟಿ
* ಏಪ್ರಿಲ್ನಲ್ಲಿ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ ಲೋಕಾರ್ಪಣೆ
* ಬೃಹತ್, ಸಣ್ಣ ಉದ್ಯಾನವನ ಸೇರಿ 1237 ಪಾರ್ಕ್ಗಳ ಅಭಿವೃದ್ಧಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications