ಶಿವಾಜಿನಗರದಲ್ಲಿ ಕುಸಿದ ಬಿದ್ದ 80 ಮಕ್ಕಳು ಓದುತ್ತಿದ್ದ ಬಿಬಿಎಂಪಿ ಇಂಗ್ಲಿಷ್ ನರ್ಸರಿ ಶಾಲೆ!
ಬೆಂಗಳೂರು ನವೆಂಬರ್ 27: ಬೆಂಗಳೂರಿನ ಶಿವಾಜಿನಗರದಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಅನಾಹುತದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ಮೂರು ಗಂಟೆ ಸುಮಾರಿಗೆ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ.
ಶಿವಾಜಿನಗರದಲ್ಲಿ 80 ಮಕ್ಕಳು ಓದುತ್ತಿದ್ದ ಬಿಬಿಎಂಪಿ ಇಂಗ್ಲಿಷ್ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. 75 ವರ್ಷ ಹಳೆಯದಾದ ಈ ಶಾಲೆಯಲ್ಲಿ 80 ಮಕ್ಕಳು ಓದುತ್ತಿದ್ದಾರೆ. ನಿತ್ಯ ಶಾಲೆಗೆ 75 ಮಕ್ಕಳು ಬರುತ್ತಾರೆ. ಇಂದು ಬೆಳಗಿನ ಜಾವ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ವೇಳೆ ಯಾವುದೇ ಮಕ್ಕಳು ಶಾಲೆಯಲ್ಲಿ ಇರಲಿಲ್ಲ.

ಬೆಳಿಗಿನ ಜಾವ ಈ ಘಟನೆ ನಡೆದಿದ್ದರಿಂದ ಭಾರೀ ದೊಡ್ಡ ಅನಾಹುತ ತಪ್ಪಿದೆ. ಕಳೆದ ಶನಿವಾರ ಈ ಶಾಲೆಗೆ ಮಕ್ಕಳು ಆಗಮಿಸಿದ್ದರು. ಇಂದೂ ಕೂಡ ಮಕ್ಕಳು ಶಾಲೆಗೆ ಬರಬೇಕಾಗಿತ್ತು. ಅಷ್ಟರಲ್ಲಾಗಲೇ ಶಾಲೆಯ ಕಟ್ಟಡ ಕುಸಿದು ದೊಡ್ಡ ದುರಂತ ತಪ್ಪಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ಸಿಬ್ಬಂದಿಗಳು ಯಾರೂ ಕೂಡ ಶಾಲೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಶಾಲೆ ಏಕಾಏಕಿ ಕುಸಿದು ಬಿದ್ದಿದ್ದರಿಂದ ಅಕ್ಕಪಕ್ಕದಲ್ಲಿ ನಿಲ್ಲಿಸಿದ ವಾಹನಗಳಿಗೆ ಹಾನಿಯಾಗಿದೆ. ಕಾರುಗಳ ಕಿಟಕಿ ಗಾಜುಗಳು ಒಡೆದು ಹೋಗಿದೆ. ಕೆಲವು ವಾಹನಗಳಿಗೆ ಭಾರೀ ಹಾನಿಯಾಗಿದೆ. ಜೊತೆಗೆ ಅಕ್ಕಪಕ್ಕದ ಮನೆಗಳಿಗೂ ತೊಂದರೆಯಾಗಿದೆ. ಅನಿರೀಕ್ಷಿತ ಈ ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಜೆಸಿಬಿಯಿಂದ ತೆರವು ಕಾರ್ಯಚರಣೆ ನಡೆದಿದೆ. ಈ ದುರಂತದಿಂದ 80 ಮಕ್ಕಳು ಪಾರಾಗಿದ್ದು ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಜೊತೆಗೆ ಶಾಲೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೋಷಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ












Click it and Unblock the Notifications