ಬೆಂಗಳೂರು: ಬಿಬಿಎಂಪಿಯಿಂದ ಇದುವರೆಗೆ 2,641 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ
ಬೆಂಗಳೂರು, ಡಿಸೆಂಬರ್ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2022-23ನೇ ಹಣಕಾಸು ವರ್ಷದಲ್ಲಿ ನವೆಂಬರ್ 25ರವರೆಗೆ 2,641 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ ಎಂದು ಅಂಕಿ ಅಂಶಗಳು ದೃಢಪಡಿಸಿವೆ.
ಈ ಬಗೆಗಿನ ಮಾಹಿತಿಯನ್ನು ಖಚಿತ ಪಡಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಕಳೆದ ಹಣಕಾಸು ವರ್ಷದಲ್ಲಿ ನಾವು ಸಂಗ್ರಹಿಸಿದ್ದಕ್ಕಿಂತ ಹೆಚ್ಚಿನ ಮೊತ್ತದೊಂದಿಗೆ ನಾವು ಆರ್ಥಿಕ ವರ್ಷವನ್ನು ನಾವು 3010 ಕೋಟಿ ತೆರಿಗೆ ಸಂಗ್ರಹಿಸಲಾಗಿತ್ತು. ಈ ವರ್ಷಾಂತ್ಯಕ್ಕೆ ಅಷ್ಟು ಮೊತ್ತಕ್ಕೆ ಹೆಚ್ಚು ತೆರಿಗೆ ಸಂಗ್ರಹಿಸಲಿದ್ದೇವೆ. ಆ ಮೂಲಕ ಒಟ್ಟು 4,000 ಕೋಟಿ ರೂ. ಗುರಿಯನ್ನು ತಲುಪಲಿದ್ದೇವೆ ಎಂದರು.
ಬಿಬಿಎಂಪಿ ಅಧಿಕಾರಿಗಳ ತಂಡವು ಒಂದು ತಿಂಗಳಿಗೂ ಹೆಚ್ಚು ಕಾಲ ಮತದಾರರ ಪಟ್ಟಿ ಪರಿಷ್ಕರಣೆ, ಪರಿಶೀಲನೆ ಕೆಲಸದಲ್ಲಿ ನಿರತರಾಗಿತ್ತು. ಈ ಕಾರಣದಿಂದ ತೆರಿಗೆ ಸಂಗ್ರಹದತ್ತ ಹೆಚ್ಚು ಗಮನ ಹರಿಸಿರಲಿಲ್ಲ. ಅಂಕಿ ಅಂಶಗಳ ಪ್ರಕಾರ, ನವೆಂಬರ್ 25 ರ ಹೊತ್ತಿಗೆ, ನಾಗರಿಕ ಸಂಸ್ಥೆಯು ನಾಲ್ಕು ವರ್ಗದ ಕಟ್ಟಡಗಳಿಂದ ಆಸ್ತಿ ತೆರಿಗೆಯಾಗಿ 2,641 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಇದರಲ್ಲಿ ವಸತಿ, ವಸತಿ ರಹಿತ ಕಟ್ಟಡ ಹಾಗೂ ಕೈಗಾರಿಕೆಗಳು ಒಳಪಟ್ಟಿವೆ ಎಂದು ತಿಳಿಸಿದರು.

ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಡೇಟಾಬೇಸ್ ಮೂಲಕ ಆಸ್ತಿಗಳನ್ನು ಗುರುತಿಸುವುದು, ಮಾಲ್ಗಳಿಂದ ತೆರಿಗೆ ವಸೂಲಿ ಮತ್ತು ಸ್ವಯಂ-ಮೌಲ್ಯಮಾಪನ ಅಫಿಡವಿಟ್ಗಳ ಶೇಕಡಾವಾರು ಪರಿಶೀಲನೆಯು ತೆರಿಗೆ ಸಂಗ್ರಹವನ್ನು ಹೆಚ್ಚಿಸುವ ಕ್ರಮಗಳಲ್ಲಿ ಪ್ರಮುಖವಾಗಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಪಾಲಿಕೆಯು 11,000 ಕೋಟಿ ರೂ.ಗೂ ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸಿದೆ. ಇದರಲ್ಲಿ 2021-22ರಲ್ಲಿ ಅತೀ ಹೆಚ್ಚು ಸಂಗ್ರಹವಾಗಿದೆ (3,010.4 ಕೋಟಿ ರೂ.), ಉಳಿದಂತೆ 2020-21ರಲ್ಲಿ 2,781.4 ಕೋಟಿ ಮತ್ತು 2019-20ರಲ್ಲಿ 2,686.2 ಕೋಟಿ ತೆರಿಗೆ ಪಾಲಿಕೆ ಬೊಕ್ಕಸಕ್ಕೆ ಸೇರಿದೆ.
ಬಿಬಿಎಂಪಿ ಕಾಯಿದೆ ಅಡಿ ತೆರಿಗೆ ಸಂಗ್ರಹ
ಬಿಬಿಎಂಪಿಯು ವಿವಿಧ ವಿಧಾನಗಳ ಮೂಲಕ ಸುಸ್ತಿದಾರರನ್ನು ಗುರುತಿಸುವ ಕೆಲಸ ಮಾಡುತ್ತಿದೆ. ಈ ಹಿಂದೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಶನ್ಸ್ (ಕೆಎಂಸಿ) ಕಾಯಿದೆ 1976 ರ ಸೆಕ್ಷನ್ 108 (ಎ) ಅಡಿಯಲ್ಲಿ ರಚಿಸಲಾದ ನಿಯಮಗಳ ನಿಬಂಧನೆಯಡಿಯಲ್ಲಿ ನಾಗರಿಕ ಸಂಸ್ಥೆ ಆಸ್ತಿ ಮಾಲೀಕರಿಂದ ತೆರಿಗೆ ಸಂಗ್ರಹಿಸುತ್ತಿತ್ತು, ಇದು ತೆರಿಗೆ ಸುಸ್ತಿದಾರರ ಚರ ಆಸ್ತಿಗಳನ್ನು ಮಾತ್ರ ವಶಪಡಿಸಿಕೊಳ್ಳುವ ಅಧಿಕಾರವನ್ನು ನಾಗರಿಕ ಸಂಸ್ಥೆಗೆ ನೀಡಿತ್ತು.
ಪ್ರಸ್ತುತ ಬಿಬಿಎಂಪಿ ಕಾಯಿದೆ, 2020ರ ಸೆಕ್ಷನ್ 144ರ ಅಡಿಯಲ್ಲಿ ತೆರಿಗೆ ಸಂಗ್ರಹಿಸಲಾಗುತ್ತಿದೆ. ಇದು ತೆರಿಗೆ ಸುಸ್ತಿದಾರರ ಚರ, ಸ್ಥಿರ ಆಸ್ತಿಗಳು ಮತ್ತು ಬ್ಯಾಂಕ್ ಖಾತೆಗಳನ್ನು ವಶಪಡಿಸಿಕೊಳ್ಳಲು ಬಿಬಿಎಂಪಿಗೆ ಅಧಿಕಾರ ನೀಡುತ್ತದೆ. ನಮ್ಮ ಡೇಟಾಬೇಸ್ನಲ್ಲಿ ಇಲ್ಲದ ಹಲವಾರು ಆಸ್ತಿಗಳನ್ನು ಹೊಂದಿರುವ ಕಾರಣ ನಾವು ಬೆಸ್ಕಾಂನಿಂದ ಆಸ್ತಿ ವಿವರಗಳನ್ನು ಸಂಗ್ರಹಿಸುತ್ತಿದ್ದೇವೆ. ಅಲ್ಲದೆ, ಪ್ರಮಾಣಪತ್ರ ನೀಡಲಾಗಿದೆ, ಏಕೆ ಖಾತಾ ಇಲ್ಲ ಎಂಬುದನ್ನು ಗಮನಿಸಲಾಗಿದೆ. ಡಿಸೆಂಬರ್ ಕೊನೆಯ ವಾರ ಇಲ್ಲವೇ ಜನವರಿಯ ಆರಂಭದ ವೇಳೆಗೆ 1,000 ಕೋಟಿ ರೂ.ಗಳನ್ನು ಸಂಗ್ರಹಿಸುವ ವಿಶ್ವಾಸವಿದೆ ಎಂದು ಅವರು ವಿವರಿಸಿದರು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gas Bill: ಹೋಟೆಲ್ ಬಿಲ್ನಲ್ಲಿ ಗ್ರಾಹಕರಿಗೆ 'ಗ್ಯಾಸ್ ಶುಲ್ಕ' ವಿಧಿಸುವಂತಿಲ್ಲ: ಕೇಂದ್ರದಿಂದ ಖಡಕ್ ಎಚ್ಚರಿಕೆ











Click it and Unblock the Notifications