Bengaluru BDA Property: ಬಿಡಿಎ ಇತಿಹಾಸದಲ್ಲೇ ಐತಿಹಾಸಿಕ ನಿರ್ಣಯ: ಈ ನಿವೇಶನದಾರರಿಗೆ ಗುಡ್ನ್ಯೂಸ್
Bengaluru BDA Property: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬೆಂಗಳೂರಿನ ನಾಗರಿಕರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಬೆಂಗಳೂರಿನಲ್ಲಿ ನಿವೇಶನ ಕಗ್ಗಂಟಾಗಿದ್ದ ನೂರಾರು ಜನರಿಗೆ ಅನುಕೂಲವಾಗುವಂತಹ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಬಿಡಿಎ ಇತಿಹಾಸದಲ್ಲೇ ಐತಿಹಾಸಿಕ ನಿರ್ಣಯ ಎಂದು ಹೇಳಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಬಿಡಿಎ ಮುಖ್ಯ ಕಚೇರಿಯಲ್ಲಿ ಅಧ್ಯಕ್ಷರಾದ ಎನ್.ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ನಡೆದ ಗಣಕೀಕೃತ ನಿವೇಶನ ಹಂಚಿಕೆ ಸಭೆಯಲ್ಲಿ (Allotment of alternate sites through randomization) ಅರ್ಕಾವತಿ ಬಡಾವಣೆಯಲ್ಲಿ ವಿವಿಧ ಕಾರಣಗಳಿಂದ ನಿವೇಶನ ಲಭ್ಯವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದ 755 ನಿವೇಶನದಾರರಿಗೆ ಹಾಗೂ ಸುರಬಿ ಸೇವಾ ಸಂಘದ 29 ಕಂದಾಯ ನಿವೇಶನದಾರರಿಗೂ ಏಕಕಾಲದಲ್ಲಿ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) 15 ನಿಮಿಷಗಳಲ್ಲಿ 755 ನಿವೇಶನಗಳನ್ನು ಹಂಚಿಕೆ ಮಾಡಿದೆ! ಹೌದು. ಬಿಡಿಎ ಅಧ್ಯಕ್ಷರಾದ ಎನ್.ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಅರಕಾವತಿ ಬಡಾವಣೆಯ ಹಂಚಿಕೆದಾರರಿಗೆ ಪರ್ಯಾಯ ನಿವೇಶನಗಳನ್ನು ನೀಡುವ 20 ವರ್ಷಗಳ ಹಳೆಯ ಸಮಸ್ಯೆಯನ್ನು ಗಣಕೀಕೃತ ಯಾದೃಚ್ಛಿಕ ಪ್ರಕ್ರಿಯೆಯ ಮೂಲಕ 15 ನಿಮಿಷಗಳಲ್ಲಿ ಪರಿಹರಿಸಿದರು. ಇದಲ್ಲದೆ, ಈ ಪ್ರಕ್ರಿಯೆಯನ್ನು YouTube ನಲ್ಲಿ ನೇರ ಪ್ರಸಾರ ಮಾಡಲಾಯಿತು!
ಈ ಹಂಚಿಕೆದಾರರಲ್ಲಿ ಹಲವರು 2005-06 ರಿಂದ ಅರಕಾವತಿಯಲ್ಲಿ ಕಳೆದುಕೊಂಡ ಸೈಟ್ ಬದಲಿಗೆ NPKL ನಲ್ಲಿ ಪರ್ಯಾಯ ನಿವೇಶನವನ್ನು ಪಡೆಯಲು ಸಂಕಷ್ಟ ಅನುಭವಿಸುತ್ತಿದ್ದರು. ಈಗ, ಅವರಲ್ಲಿ ಎಲ್ಲಾ 755 ನಿವೇಶನಕ್ಕೆ ಕಾಯುತ್ತಿದ್ದವರು ಇನ್ಮುಂದೆ ಯಾರನ್ನೂ ಭೇಟಿ ಮಾಡುವ ಅಥವಾ ಕೇಳುವ ಅಗತ್ಯವಿಲ್ಲ. ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅವರು ಮಾರಾಟ ಪತ್ರವನ್ನು ತಕ್ಷಣವೇ ಪೂರ್ಣಗೊಳಿಸಬೇಕಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪಿ ಮಣ್ಣಿವಣ್ಣನ್ ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಸ್ಪಷ್ಟ ನಿರ್ದೇಶನಗಳಿಗೆ ಧನ್ಯವಾದ. ಬಿಡಿಎ ಪಾರದರ್ಶಕ, ಜವಾಬ್ದಾರಿಯುತ ಮತ್ತು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಲು, ಬಿಡಿಎಯಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮೇಲೆ ತಿಳಿಸಲಾದ ಕ್ರಮಗಳು ಅವುಗಳಲ್ಲಿ ಒಂದು. ಮುಂಬರುವ ದಿನಗಳಲ್ಲಿ ಹೆಚ್ಚು ನಾಗರಿಕ ಸ್ನೇಹಿ ಮತ್ತು ಪಾರದರ್ಶಕ ಕ್ರಮಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಬಿಡಿಎ ಕ್ರಮಕ್ಕೆ ಮೆಚ್ಚುಗೆ: ಇನ್ನು ಬೆಂಗಳೂರಿನ ಅಭಿವೃದ್ಧಿ ಪ್ರಾಧಿಕಾರದ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಇನ್ನಷ್ಟು ಜನಸ್ನೇಹಿ ಯೋಜನೆಗಳನ್ನು ರೂಪಿಸುವುದಾಗಿ ಹೇಳಿದೆ.
-
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ












Click it and Unblock the Notifications