ಬೆಂಗಳೂರಲ್ಲಿ ಬಸ್ ಇಲ್ಲ, ಬಾಕಿ ಎಲ್ಲ ಎಂದಿನಂತೆ
ಬೆಂಗಳೂರು, ಸೆ. 02: ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮೆಜೆಸ್ಟಿಕ್ ಸುತ್ತಮುತ್ತ, ಗಾಂಧಿನಗರದಲ್ಲಿ ದಿನದ ವಹಿವಾಟು ಎಂದಿನಂತೆ ನಡೆಯುತ್ತಿದೆ.
ಕೆಆರ್ ಮಾರುಕಟ್ಟೆಯಲ್ಲೂ ಸಹ ಕೆಲ ಅಂಗಡಿಗಳು ಬಾಗಿಲು ತೆರೆದಿವೆ. ಜಯನಗರ, ಬಸವನಗುಡಿ, ಗಾಂಧಿಬಜಾರ್, ಮಲ್ಲೇಶ್ವರಂ ಸೇರಿದಂತೆ ಕೆಲ ಅಂಗಡಿಗಳು ಮಾತ್ರ ಬಾಗಿಲು ಹಾಕಿದ್ದವು. ಬಸ್ ಸಂಚಾರ ಮಾತ್ರ ಸಂಪೂರ್ಣ ಬಂದಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೆಟ್ರೋ ಸಂಚಾರ ಎಂದಿನಂತೆ ಇದೆ. ಕೆಲ ರೈಲುಗಳನ್ನು ಮಾತ್ರ ಸ್ಥಗಿತ ಮಾಡಲಾಗಿದೆ.[ಭಾರತ ಬಂದ್: ಬೆಂಗಳೂರಲ್ಲಿ ಏನಾಗುತ್ತಿದೆ]
ಖಾಸಗಿ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಜನರು ಸ್ವಂತ ವಾಹನದ ಮೂಲಕ ತೆರಳುತ್ತಿದ್ದಾರೆ. ಪುರಭವನದಿಂದ ಮೆರವಣಿಗೆ ಹೊರಟ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದ ಬಳಿ ಇರುವ ಕಾಳಿದಾಸ ಮಾರ್ಗದಲ್ಲಿ ಸಮಾವೇಶಗೊಂಡರು. ಬೆಂಗಳೂರಿನಲ್ಲಿ ಬಂದ್ ಯಾವ ರೀತಿ ಇತ್ತು, ನೋಡಿಕೊಂಡು ಬರೋಣ.

ಟ್ರಾಫಿಕ್ ಜಾಮ್
ಪುರಭವನದ ಎದುರು ಪ್ರತಿಭಟನೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಜೆಸಿ ರಸ್ತೆಯಲ್ಲಿ ಅರ್ಧ ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಚೇರಿಗೆ ತೆರಳುವವರು ಟ್ರಾಫಿಕ್ ಮಧ್ಯೆ ಸಿಕ್ಕಿಹಾಕಿಕೊಂಡು ಸಂಕಟ ಅನುಭವಿಸಬೇಕಾಯಿತು.

ಬಿಎಂಟಿಸಿ ಬಸ್ ಇಲ್ಲ
ಈ ಬಾರಿಯ ಬಂದ್ ಬಗ್ಗೆ ಮೊದಲಿನಿಂದಲೂ ಮಾಹಿತಿ ಇದ್ದ ಕಾರಣ ಜನರು ಮನೆಬಿಟ್ಟು ಹೊರ ಬರುವ ಸಾಹಸ ಮಾಡಲಿಲ್ಲ. ಬೆಂಗಳೂರು ಮಾರ್ಗವಾಗಿ ಕೆಲ ಊರಿಗೆ ತೆರಳಬೇಕಾದವರು ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು. ಮೆಜೆಸ್ಟಿಕ್ ಸಿಟಿ ನಿಲ್ದಾಣ ಬಿಕೋ ಎನ್ನುತ್ತಿತ್ತು.

ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ಸಿಐಟಿಯು, ಬೃಹತ್ ಬೆಂಗಳೂರು ಬೀದಿ ವ್ಯಾಪಾರಿಗಳ ಸಂಘ ಸೇರಿದಂತೆ 10 ಕ್ಕೂ ಅಧಿಕ ಸಂಘಟನೆಗಳು ಒಂದೆಡೆ ಸೇರಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ವಿದೇಶಿ ನೇರ ಬಂಡವಾಳ ಹೂಡಿಕೆಗೆ ನೀಡುರುವ ಅವಕಾಶ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಜನ ಸಂಚಾರ ಎಂದಿನಂತೆ
ಕಾರ್ಮಿಕರು ಕರೆ ನೀಡಿರುವ ಬಂದ್ ಗೆ ಖಾಸಗಿ ಸಂಸ್ಥೆಗಳು ಬೆಂಬಲ ಸೂಚಿಸಲಿಲ್ಲ. ಖಾಸಗಿ ಬಸ್ ಗಳು ಮತ್ತು ಕ್ಯಾಬ್ ಗಳು ಸಂಚಾರ ನಡೆಸುತ್ತಿದ್ದವು. ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಕಚೇರಿಗೆ ಆಗಮಿಸಲು ವ್ಯವಸ್ಥೆ ಮಾಡಿದ್ದರು.

ಮದ್ಯದಂಗಡಿಯೂ ತೆರೆದೇ ಇದೆ!
ಮದ್ಯದಂಗಡಿಗಳು ಸಹ ಅಲ್ಲಲ್ಲಿ ಬಾಗಿಲು ತೆರೆದುಕೊಂಡಿರುವುದು ಕಂಡು ಬಂತು. ಶಾಂತಿ ನಗರದ ಬಳಿಯ ಮದ್ಯದಂಗಡಿಯಲ್ಲಿ ವ್ಯಾಪಾರ ನಿರಾತಂಕವಾಗಿ ಸಾಗಿತ್ತು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications