ಬೆಂಗಳೂರು ಬಾಂಬ್ ಸ್ಫೋಟ: ಕೇರಳದ ಕಾಡಿನಲ್ಲಿ ಅವಿತಿದ್ದ ಸಲೀಂ ಬಂಧನ
ಬೆಂಗಳೂರು, ಅಕ್ಟೋಬರ್ 11: ಹತ್ತು ವರ್ಷಗಳ ಹಿಂದೆ (2008) ಬೆಂಗಳೂರಿನ ಮಡಿವಾಳದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಸಲೀಮ್ನನ್ನು ಕೇಂದ್ರ ಅಪರಾಧ ದಳದ ಪೊಲೀಸರು (ಸಿಸಿಬಿ) ಬಂಧಿಸಿದ್ದಾರೆ.
ಕೇರಳದ ಪಿಣರಾಯಿ ಗ್ರಾಮದ ಕಾಡೊಂದರಲ್ಲಿ ಹೆಂಡತಿ ಮತ್ತು ಮೂವರು ಮಕ್ಕಳೊಂದಿಗೆ ತಲೆಮರೆಸಿಕೊಂಡಿದ್ದ ಸಲೀಂನನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ.
ಸಿಸಿಬಿ ಎಸಿಪಿ ಸುಬ್ರಮಣಿ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಪ್ರವೀಣ್, ಸತೀಶ್ ಕುಮಾರ್ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೂಡ ಸಲೀಂಗಾಗಿ ಹುಡುಕಾಟ ನಡೆಸಿತ್ತು. ಕೇರಳದಲ್ಲಿಯೂ ಈತನ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದವು. ಅಲ್ಲದೆ, ಇನ್ನೂ ಅನೇಕ ಬಾಂಬ್ ಸ್ಫೋಟ ಕೃತ್ಯಗಳಲ್ಲಿ ಈತ ಭಾಗಿಯಾಗಿರುವ ಶಂಕೆ ಇದೆ.

2008ರಲ್ಲಿ ಘಟನೆ
2008ರ ಜುಲೈ 25ರಂದು ಮಡಿವಾಳ ಸೇರಿದಂತೆ ಒಟ್ಟು ಒಂಬತ್ತು ಕಡೆ ಬಾಂಬ್ ಸ್ಫೋಟಗಳು ನಡೆದಿದ್ದವು. ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿದ್ದರೆ, 20 ಮಂದಿ ಗಾಯಗೊಂಡಿದ್ದರು. ಅದೇ ವರ್ಷ ಜೈಪುರ ಮತ್ತು ಅಹಮದಾಬಾದ್ಗಳಲ್ಲಿಯೂ ಸರಣಿ ಸ್ಫೋಟ ಸಂಭವಿಸಿದ್ದವು. ಈ ಸ್ಫೋಟದ ಪ್ರಮುಖ ಸಂಚುಕೋರ ಈತನೇ ಎಂದು ಹೇಳಲಾಗಿದೆ.

ಮುಖ್ಯಮಂತ್ರಿಯ ಊರು
ಪೊಲೀಸರ ಕಣ್ತಪ್ಪಿಸಿದ್ದ ಸಲೀಂ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಊರಿನಲ್ಲಿ ತಲೆಮರೆಸಿಕೊಂಡಿದ್ದ. ಕಣ್ಣೂರು ಜಿಲ್ಲೆಗೆ ಸೇರಿದ ಹಳ್ಳಿಯೊಂದರಲ್ಲಿ ಆತ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ನೆಲೆಸಿದ್ದ. ಎರಡು ದಿನ ಕಾಡಿನಲ್ಲಿ ಆತನ ಚಲನವಲನಗಳನ್ನು ಗಮನಿಸಿದ್ದ ಪೊಲೀಸರು, ಬುಧವಾರ ರಾತ್ರಿ 8.45ರ ವೇಳೆಗೆ ಹಳ್ಳಿಯ ಮನೆಯೊಂದರಲ್ಲಿದ್ದ ಸಲೀಂನನ್ನು ಸುತ್ತವರಿದು ಬಂಧಿಸಿದ್ದಾರೆ.

ವಿಚಾರಣೆಗೆ ವಶಕ್ಕೆ ಕೋರಿಕೆ
ಬಂಧಿತ ಸಲೀಂನನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಆತನನ್ನು ಪೊಲೀಸರು ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಗುರುವಾರ ಹಾಜರುಪಡಿಸಲಿದ್ದಾರೆ. ಬೆಂಗಳೂರು ಬಾಂಬ್ ಸ್ಫೋಟ ಮಾತ್ರವಲ್ಲದೆ, ದೇಶದ ವಿವಿಧೆಡೆ ನಡೆದ ದಾಳಿಗಳ ಮಾಹಿತಿಗಳು ಆತನಿಗೆ ತಿಳಿದಿರುವ ಸಾಧ್ಯತೆ ಇರುವುದರಿಂದ ಹೆಚ್ಚಿನ ವಿಚಾರಣೆ ನಡೆಸಲು ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದಾರೆ.

ಪ್ರಕರಣದಲ್ಲಿ ಪ್ರಗತಿ
ಬೆಂಗಳೂರು, ಅಹಮದಾಬಾದ್ ಮತ್ತು ಜೈಪುರದಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ದಾಳಿಯ ಪ್ರಮುಖ ಮಾಸ್ಟರ್ ಮೈಂಡ್ ಎಂಬ ಆರೋಪ ಹೊತ್ತಿರುವ ಕೇರಳದ ಅಬ್ದುಲ್ ನಾಸಿರ್ ಮದನಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಈ ಘಟನೆಗಳಲ್ಲಿ ನಿಷೇಧಿತ ಸಿಮಿ ಹಾಗೂ ಲಷ್ಕರ್ ಸಂಘಟನೆಯ ಕೈವಾಡ ಇದೆ ಎಂಬ ಶಂಕೆ ಇದ್ದು, ಲಷ್ಕರ್ ಕಮಾಂಡರ್ ಟಿ. ನಸೀರ್ ಪೊಲೀಸರ ವಶದಲ್ಲಿದ್ದಾನೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications