ಬೆಂಗಳೂರು ಸ್ಪೋಟದ ರೂವಾರಿ ಮದನಿಗೆ 11 ದಿನಗಳ ಪೆರೋಲ್
ಬೆಂಗಳೂರು, ಅಕ್ಟೋಬರ್ 29: ಕಳೆದ 2008ರ ಬೆಂಗಳೂರು ಸರಣಿ ಸ್ಪೋಟದ ಪ್ರಮುಖ ಆರೋಪಿ ಹಾಗೂ ಕೇರಳದ ಪಿಡಿಪಿ ಪಕ್ಷದ ಮುಖ್ಯಸ್ಥ ಅಬ್ದುಲ್ ನಜೀರ್ ಮದನಿಗೆ ಹೈಕೋರ್ಟ್ ಸೋಮವಾರ 11 ದಿನಗಳ ಪೆರೋಲ್ ಮಂಜೂರು ಮಾಡಿದೆ.
ಮದನಿ ತಾಯಿಗೆ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಪೆರೋಲ್ ನೀಡಿದ್ದು, ಇಂದೇ ರಾತ್ರಿ ಕೇರಳಕ್ಕೆ ತೆರಳಲಿದ್ದಾನೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಸ್ವತಃ ಅನಾರೋಗ್ಯದಿಂದ ಬಳಲುತ್ತಿರುವ ಮದನಿ ಈಗಾಗಲೇ ಸುಪ್ರಿಂಕೋರ್ಟ್ ನಿರ್ದೇಶನದ ಮೇರೆಗೆ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮನೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹೀಗಾಗಿ ಆತನನ್ನು ಪರಪ್ಪನ ಅಗ್ರಹಾರ ಜೈಲು ವಾಸದಿಂದ ವಿನಾಯ್ತಿ ನೀಡಿ, ಗೃಹಬಂಧನದಲ್ಲಿ ಇರಿಸಲಾಗಿದೆ. ಇದೀಗ ಪೆರೋಲ್ ಸಿಕ್ಕ ಹಿನ್ನೆಲೆಯಲ್ಲಿ ಮನೆಯಿಂದಲೇ ಕೇರಳಕ್ಕೆ ತೆರಳಲಿದ್ದಾನೆ. 11 ದಿನಗಳ ಬಳಿಕ ಬೆಂಗಳೂರು ಪೊಲೀಸರು ಮದನಿಯನ್ನು ವಾಪಸ್ ಕರೆ ತರಲಿದ್ದಾರೆ.

ಈ ಹಿಂದೆ 2013ರ ಮಾರ್ಚ್ 7ರಂದು ಪುತ್ರನ ಮದುವೆಗಾಗಿ ಐದು ದಿನಗಳ ಪೆರೋಲ್ ನೀಡಲಾಗಿತ್ತು. 2017ರಲ್ಲಿ ಮತ್ತೊಬ್ಬ ಪುತ್ರನ ಮದುವೆಗೆ ಪೆರೋಲ್ಗೆ ಅರ್ಜಿ ಸಲ್ಲಿಸಿದ್ದರೂ ನ್ಯಾಯಾಲಯ ಮಾನ್ಯ ಮಾಡಿರಲಿಲ್ಲ. ಈ ಮಧ್ಯೆ 2015 ಮತ್ತು 16ರಲ್ಲಿ ಮದನಿ ತನ್ನ ತಂದೆ ಹಾಗೂ ತಾಯಿಗೆ ಅನಾರೋಗ್ಯದ ಕಾರಣಕ್ಕಾಗಿ ಕೇರಳಕ್ಕೆ ಭೇಟಿ ನೀಡಲು ಪೆರೋಲ್ ಪಡೆದಿದ್ದ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications