BodyBuilder Love Tragedy: ಪ್ರೇಯಸಿಗೆ ಬೇರೆಯವರೊಂದಿಗೆ ಮದುವೆ: ಮನನೊಂದು ಸಾವಿಗೆ ಶರಣಾದ ಬಾಡಿ ಬಿಲ್ಡರ್
BodyBuilder Love Tragedy: ಪ್ರೀತಿ ಮಾಡಿದ ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ಮದುವೆ ನಿಶ್ಚಯವಾಗಿದೆ ಎಂದು ತಿಳಿದ ಬೆಂಗಳೂರಿನ ಬಾಡಿ ಬಿಲ್ಡರ್ ಹಾಗೂ ಜಿಮ್ ತರಬೇತಿದಾರರಾದ ಕಿರಣ್ (26 ವರ್ಷ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಕಿರಣ್ ಅವರು ಮೂರು ವರ್ಷದಿಂದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಆದರೆ ಪ್ರೇಯಸಿಯ ಮದುವೆ ಬೇರೆ ವ್ಯಕ್ತಿಯೊಂದಿಗೆ ಆಗಿದೆ ಎಂದು ಆ ಯುವತಿ ಲಗ್ನ ಪತ್ರಿಕೆಯನ್ನು ತಂದು ಕಿರಣ್ ಎನ್ನುವವರಿಗೆ ತೋರಿಸಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಮನನೊಂದ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.
ವೃತ್ತಿಯಲ್ಲಿ ಬಾಡಿಬಿಲ್ಡರ್ ಮತ್ತು ಜಿಮ್ ತರಬೇತುದಾರರಾಗಿರುವ ಕಿರಣ್ ಅವರು, ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬರನ್ನು ಪ್ರೀತಿ ಮಾಡುತ್ತಿದ್ದರು. ಶನಿವಾರ ಅವರು ತಮ್ಮ ಗೆಳತಿಯನ್ನು ಭೇಟಿಯಾದಾಗ ಅವರಿಗೆ ಬೇರೊಬ್ಬ ಹುಡುಗನೊಂದಿಗಿನ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆ ಆಮಂತ್ರಣ ಪತ್ರಿಕೆ ಹಾಗೂ ಮದುವೆಗೆ ಎಂದು ತಂದಿದ್ದ ಹೊಸ ಸೀರೆಯನ್ನು ತೋರಿಸಿದ್ದಾರೆ ಎಂದು ಹೇಳಲಾಗಿದೆ.

ಸುದ್ದಿ ಕೇಳಿ ಮನನೊಂದ ಕಿರಣ್ ಅವರು, ತಮ್ಮ ಮಹಾಲಕ್ಷ್ಮಿ ಲೇಔಟ್ ಮನೆಗೆ ಹಿಂತಿರುಗಿ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಎಷ್ಟು ಕೂಗಿದರೂ ಕಿರಣ್ ಹೊರಗೆ ಬರದ ಹಿನ್ನೆಲೆಯಲ್ಲಿ ಬಾಗಿ ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಕಿರಣ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಿರಣ್ ಅವರ ಕೋಣೆಯಿಂದ ಪತ್ತೆಯಾದ ಡೆತ್ ನೋಟ್ ಸೇರಿದಂತೆ ಪ್ರಕರಣದ ವಿವಿಧ ಆಯಾಮಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಹಿನ್ನೆಲೆ ಏನು & ಡೆತ್ನೋಟ್ನಲ್ಲಿ ಏನಿದೆ ?
ಬಾಡಿ ಬಿಲ್ಡರ್ ಹಾಗೂ ಜಿಮ್ ತರಬೇತಿದಾರರಾದ ಕಿರಣ್ ಅವರು ಕಳೆದ ಮೂರು ವರ್ಷಗಳಿಂದಲೂ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದರು. ಇದೇ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯಂದು ಗೀಫ್ಟ್ ಕೊಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಯುವತಿಯು ಮದುವೆ ಪತ್ರಿಕೆಯನ್ನು ತಂದು ತೋರಿಸಿದಾಗ ಕಿರಣ್ ಆಘಾತಕ್ಕೆ ಒಳಗಾಗಿದ್ದಾರೆ.
ಇನ್ನು ಕಿರಣ್ ಆತ್ಮಹತ್ಯೆಗೂ ಮುಂಚೆ ಬರೆದಿದ್ದ ಡೆತ್ನೋಟ್ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಪ್ರೇಯಸಿ ಹಾಗೂ ಆಕೆಯ ತಾಯಿಯೇ ಕಾರಣ ಎಂದು ಬರೆದಿಟ್ಟಿದ್ದಾರೆ. ಅಲ್ಲದೇ ಡೆತ್ನೋಟ್ನಲ್ಲಿ ಅವರ ಮೊಬೈಲ್ನ ಪಾಸ್ವರ್ಡ್ ಅನ್ನು ಸಹ ನಮೂದಿಸಿದ್ದಾರೆ ಎಂದು ಹೇಳಲಾಗಿದೆ. ಕಿರಣ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕಿರಣ್ ಹಾಗೂ ಪ್ರೇಯಸಿಯ ಫೋಟೋ ವೈರಲ್ ಆಗುತ್ತಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications