ಬಿಬಿಎಂಪಿ: ಬೊಮ್ಮನಹಳ್ಳಿ, ದಕ್ಷಿಣ ವಲಯದಲ್ಲಿ ಬೀದಿ ನಾಯಿ ಕಾಟ, ನಿತ್ಯ 40-50 ಕೇಸ್
ಬೆಂಗಳೂರು, ಡಿಸೆಂಬರ್ 08: ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬೈಕ್ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಅನೇಕ ನೌಕರರು ನಾಯಿಗಳ ಕಾಟಕ್ಕೆ ಅಪಘಾತಕ್ಕೀಡಾಗಿ ಕೆಲಸಕ್ಕೆ ಹೋಗದೇ ಮನೆಗೆ ಹಿಂದಿರುಗಿದ್ದಾರೆ.
ಹೌದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಹಲವು ಕ್ರಮಗಳ ಹೊರತಾಗಿಯೂ ನಗರದಲ್ಲಿ ನಿತ್ಯ ನಾಯಿ ಕಡಿತದ ಸುಮಾರು 50 ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿದು ಬಂದಿದೆ. ಬಿಬಿಎಂಪಿ ಪಶುಸಂಗೋಪನಾ ಇಲಾಖೆ 2019 ರಿಂದ ಈವರೆಗೆ ನಗರದಲ್ಲಿ ಬೀದಿ ನಾಯಿ ಕಡಿತದ ಪ್ರಕರಣಗಳು ಶೇ.60 ರಷ್ಟು ಕಡಿಮೆಯಾಗಿದೆ ಎಂದು ಹೇಳಿದೆ.
ನಾಯಿಗಳ ಹಾವಳಿ ನಿಯಂತ್ರಣಕ್ಕಾಗಿ ಬಿಬಿಎಂಪಿ ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ) ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಂಡಿದೆ. ಜೊತೆಗೆ ಆಂಟಿ-ರೇಬೀಸ್ ವ್ಯಾಕ್ಸಿನೇಷನ್ (ಎಆರ್ವಿ) ಅನ್ನು 2018ರಲ್ಲಿಯೇ ಚಾಲನೆ ನೀಡಿದೆ ಎಂದು ತನ್ನ ಕ್ರಮಗಳನ್ನು ಬಿಬಿಎಂಪಿ ಸಮರ್ಥಸಿಕೊಂಡಿದೆ. ಆದರೆ ನಾಯಿಗಳ ಕಾಟದಿಂದ ಸಾರ್ವಜನಿಕರು ಬೇಸತ್ತಿದ್ದಾರೆ.

ಬೀದಿ ನಾಯಿ, ಸಾಕು ನಾಯಿ ಸಂಖ್ಯೆ 3ಲಕ್ಷ
ಈ ಕುರಿತು ಪ್ರತಿಕ್ರಿಯಿಸಿರುವ ಬಿಬಿಎಂಪಿಯ ಪಶುಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಡಾ.ಕೆ.ಪಿ.ರವಿಕುಮಾರ್ ಅವರು, ನಗರದಲ್ಲಿ ಬೀದಿನಾಯಿಗಳ ಸಂಖ್ಯೆ 1.5 ಲಕ್ಷದಷ್ಟಿದೆ ಮತ್ತು ಮಾಲೀಕತ್ವದ ನಾಯಿ'ಗಳ ಸಂಖ್ಯೆಯೂ ಅಷ್ಟೇ ಇದೆ. ಆದರೆ, ಬಿಬಿಎಂಪಿ ವಲಯಗಳಾದ ದಕ್ಷಿಣ, ಮಹದೇವಪುರ, ಆರ್ಆರ್ ನಗರ ಮತ್ತು ಬೊಮ್ಮನಹಳಿ ವಲಯಗಳಿಗೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳು ಹತ್ತಿರವಾಗುತ್ತವೆ. ಈ ಕಾರಣದಿಂದ ಆಯಾ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.
ನಗರದ ವಿವಿಧ ಪ್ರದೇಶಗಳಲ್ಲಿ ಮಾಸಿಕವಾಗಿ ಸರಾಸರಿ 40 ರಿಂದ 50 ಬೀದಿನಾಯಿ ಕಡಿತದ ಬಗ್ಗೆ ದೂರುಗಳನ್ನು ಸ್ವೀಕರಿಸುತ್ತೇವೆ. ದಕ್ಷಿಣ, ಬೊಮ್ಮನಹಳ್ಳಿ ಮತ್ತು ಮಹದೇವಪುರ ವಲಯಗಳು ವ್ಯಾಪ್ತಿಗೆ ಹೊರಗಿನ ಗ್ರಾಮ ಪಂಚಾಯಿತಿ ಅಡಿಯ ಪ್ರದೇಶಗಳಲ್ಲಿ ಈ ಸಮಸ್ಯೆ ಕೇಳಿ ಬಂದಿದೆ ಎಂದರು.
2022ರ ಏಪ್ರಿಲ್ ನಿಂದ ಇಲ್ಲಿಯವರೆಗೆ, ಇಲಾಖೆಯು 52,635 ಲಸಿಕೆ ಹಾಕಿದೆ. ಎಲ್ಲಾ ಎಂಟು ಬಿಬಿಎಂಪಿ ವಲಯಗಳಲ್ಲಿ ಲಸಿಕೆ ನೀಡುವ ಕೆಲಸವನ್ನು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಅನುಮೋದಿತ ಎನ್ಜಿಒಗಳಿಗೆ ಹೊರಗುತ್ತಿಗೆ ಅಡಿ ನೀಡಲಾಗಿದೆ. ಬಿಬಿಎಂಪಿಯ ಶ್ವಾನ ಜನಸಂಖ್ಯೆಯ ಸಮೀಕ್ಷೆಯ ಪ್ರಕಾರ, ಆರ್ಆರ್ನಗರದಲ್ಲಿ ಅತಿ ಹೆಚ್ಚು ಬೀದಿ ನಾಯಿಗಳು (52,968) ಇವೆ, ಮಹದೇವಪುರ (46,333) ನಂತರದ ಸ್ಥಾನದಲ್ಲಿವೆ ಎಂದು ಅವರು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications