ಡಿ.19ರಿಂದ ಬೆಂಗಳೂರು ಪುಸ್ತಕೋತ್ಸವ
ಬೆಂಗಳೂರು, ನ.12 : 'ಪುಸ್ತಕಕ್ಕೆ ಮರಳಿ'ಎಂಬ ಪರಿಕಲ್ಪನೆಯೊಂದಿಗೆ ಬೆಂಗಳೂರು ಪುಸ್ತಕ ಮಾರಾಟ ಮತ್ತು ಪ್ರಕಾಶಕರ ಸಂಘ ಬೆಂಗಳೂರು ಪುಸ್ತಕೋತ್ಸವವನ್ನು ಹಮ್ಮಿಕೊಂಡಿದೆ. ಡಿ.19ರಂದು ಪುಸ್ತಕೋತ್ಸವಕ್ಕೆ ಚಾಲನೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.
ಬೆಂಗಳೂರು ಪುಸ್ತಕ ಮಾರಾಟ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷ ನಿತಿನ್ ಎಸ್ ಶಾ ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಡಿ.19 ರಿಂದ 28 ರವರೆಗೆ ಜೆ.ಪಿ.ನಗರದ ಇಲಾನ್ ಕನ್ವೆನ್ಷನ್ ಸೆಂಟರ್ನಲ್ಲಿ 11ನೇ ವರ್ಷದ ಪುಸ್ತಕೋತ್ಸವ ನಡೆಯಲಿದೆ ಎಂದು ಹೇಳಿದ್ದಾರೆ.

ಪುಸ್ತಕೋತ್ಸವದಲ್ಲಿ 250ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು. ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ತಮಿಳು, ತೆಲುಗು, ಮಲಯಾಳಂ, ಗುಜರಾತಿ ಸೇರಿದಂತೆ ದೇಶದ ನಾನಾ ಭಾಷೆಗಳ ಪುಸ್ತಕಗಳು ಲಭ್ಯವಿರುತ್ತವೆ ಎಂದು ತಿಳಿಸಿದರು. [ವಾಲ್ಮೀಕಿ' ಪುಸ್ತಕ ಮಾರಾಟ, ಸಪ್ನಾ ಮಳಿಗೆ ಮೇಲೆ ದಾಳಿ]
ಕನ್ನಡ ಪುಸ್ತಕಗಳಿಗೆ ಪುಸ್ತಕೋತ್ಸವದಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ಎಲ್ಲಾ ಪುಸ್ತಕಗಳಿಗೂ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ. ಕತೆ, ಕಾದಂಬರಿ, ಆತ್ಮಚರಿತ್ರೆ, ಹಾಸ್ಯ, ಮನರಂಜನೆ, ಮನೋವಿಕಾಸ, ಸಾಹಿತ್ಯ ಸೇರಿದಂತೆ ವಿಭಿನ್ನ ರೀತಿಯ ಪುಸ್ತಕಗಳು ದೊರೆಯಲಿವೆ. [ನಿಮ್ಮ ಇಷ್ಟದ ಪುಸ್ತಕ ಓದಲೊಂದು ವೆಬ್ ತಾಣ]
ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ : ಹತ್ತು ದಿನಗಳ ಪುಸ್ತಕೋತ್ಸವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಉಚಿತ ಪ್ರವೇಶ ನೀಡಲಾಗುತ್ತದೆ. ದೇಶದ ನಾನಾ ಭಾಗದ ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿಚಾರ ಗೋಷ್ಠಿಗಳು : ಪುಸ್ತಕೋತ್ಸವದಲ್ಲಿ ಸಾಂಸ್ಕೃತಿಕ ಹಾಗೂ ಸಾಹಿತ್ಯ ವಿಚಾರಗೋಷ್ಠಿಗಳನ್ನು ಆಯೋಜಿಸಲಾಗಿದೆ. ನಾಡಿನ ಹಿರಿಯ ಹಾಗೂ ಕಿರಿಯ ಸಾಹಿತಿಗಳು, ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಸಾಹಿತ್ಯಾಸಕ್ತರು ಇದರಲ್ಲಿ ಭಾಗವಹಿಸಲಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications