ಡಿ.19ರಿಂದ ಬೆಂಗಳೂರು ಪುಸ್ತಕೋತ್ಸವ
ಬೆಂಗಳೂರು, ನ.12 : 'ಪುಸ್ತಕಕ್ಕೆ ಮರಳಿ'ಎಂಬ ಪರಿಕಲ್ಪನೆಯೊಂದಿಗೆ ಬೆಂಗಳೂರು ಪುಸ್ತಕ ಮಾರಾಟ ಮತ್ತು ಪ್ರಕಾಶಕರ ಸಂಘ ಬೆಂಗಳೂರು ಪುಸ್ತಕೋತ್ಸವವನ್ನು ಹಮ್ಮಿಕೊಂಡಿದೆ. ಡಿ.19ರಂದು ಪುಸ್ತಕೋತ್ಸವಕ್ಕೆ ಚಾಲನೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿದೆ.
ಬೆಂಗಳೂರು ಪುಸ್ತಕ ಮಾರಾಟ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷ ನಿತಿನ್ ಎಸ್ ಶಾ ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಡಿ.19 ರಿಂದ 28 ರವರೆಗೆ ಜೆ.ಪಿ.ನಗರದ ಇಲಾನ್ ಕನ್ವೆನ್ಷನ್ ಸೆಂಟರ್ನಲ್ಲಿ 11ನೇ ವರ್ಷದ ಪುಸ್ತಕೋತ್ಸವ ನಡೆಯಲಿದೆ ಎಂದು ಹೇಳಿದ್ದಾರೆ.

ಪುಸ್ತಕೋತ್ಸವದಲ್ಲಿ 250ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು. ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ತಮಿಳು, ತೆಲುಗು, ಮಲಯಾಳಂ, ಗುಜರಾತಿ ಸೇರಿದಂತೆ ದೇಶದ ನಾನಾ ಭಾಷೆಗಳ ಪುಸ್ತಕಗಳು ಲಭ್ಯವಿರುತ್ತವೆ ಎಂದು ತಿಳಿಸಿದರು. [ವಾಲ್ಮೀಕಿ' ಪುಸ್ತಕ ಮಾರಾಟ, ಸಪ್ನಾ ಮಳಿಗೆ ಮೇಲೆ ದಾಳಿ]
ಕನ್ನಡ ಪುಸ್ತಕಗಳಿಗೆ ಪುಸ್ತಕೋತ್ಸವದಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ಎಲ್ಲಾ ಪುಸ್ತಕಗಳಿಗೂ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ. ಕತೆ, ಕಾದಂಬರಿ, ಆತ್ಮಚರಿತ್ರೆ, ಹಾಸ್ಯ, ಮನರಂಜನೆ, ಮನೋವಿಕಾಸ, ಸಾಹಿತ್ಯ ಸೇರಿದಂತೆ ವಿಭಿನ್ನ ರೀತಿಯ ಪುಸ್ತಕಗಳು ದೊರೆಯಲಿವೆ. [ನಿಮ್ಮ ಇಷ್ಟದ ಪುಸ್ತಕ ಓದಲೊಂದು ವೆಬ್ ತಾಣ]
ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ : ಹತ್ತು ದಿನಗಳ ಪುಸ್ತಕೋತ್ಸವದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಉಚಿತ ಪ್ರವೇಶ ನೀಡಲಾಗುತ್ತದೆ. ದೇಶದ ನಾನಾ ಭಾಗದ ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿಚಾರ ಗೋಷ್ಠಿಗಳು : ಪುಸ್ತಕೋತ್ಸವದಲ್ಲಿ ಸಾಂಸ್ಕೃತಿಕ ಹಾಗೂ ಸಾಹಿತ್ಯ ವಿಚಾರಗೋಷ್ಠಿಗಳನ್ನು ಆಯೋಜಿಸಲಾಗಿದೆ. ನಾಡಿನ ಹಿರಿಯ ಹಾಗೂ ಕಿರಿಯ ಸಾಹಿತಿಗಳು, ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಸಾಹಿತ್ಯಾಸಕ್ತರು ಇದರಲ್ಲಿ ಭಾಗವಹಿಸಲಿದ್ದಾರೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications