Bengaluru Bus Accident: ಹೃದಯವಿದ್ರಾವಕ ಘಟನೆ: ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಪುಟಾಣಿ ಮಕ್ಕಳ ಸಾವು, ವಿಡಿಯೋ ವೈರಲ್
ಬೆಂಗಳೂರು: ಬೆಂಗಳೂರಿನಲ್ಲಿ ಪುಟಾಣಿ ಮಕ್ಕಳಿಬ್ಬರು ಖಾಸಗಿ ಶಾಲೆಯ ಬಸ್ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಸಂಭವಿಸಿರುವ ಈ ಭೀಕರ ಬಸ್ ಅಪಘಾತದ ದೃಶ್ಯಗಳಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕಲ್ಲು ಹೃದಯವನ್ನೂ ಕರಗಿಸುವಂತೆ ಇದೆ. ಘಟನೆಯ ಹಿನ್ನೆಲೆಯ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಫೆಬ್ರವರಿ 11ರಂದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಪುಟಾಣಿ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾಸಗಿ ಶಾಲೆಯೊಂದರ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ಈ ದುರ್ಘಟನೆ ಸಂಭವಿಸಿದೆ. ನಗರದ ಸಿಎಆರ್ ವಿಭಾಗದ ಕಾನ್ಸ್ಟೇಬಲ್ ನಾಗನಗೌಡ ಅವರ ಇಬ್ಬರು ಮಕ್ಕಳಾದ ವರ್ಷ (2), ಭಾನು (4) ಮೃತ ಮಕ್ಕಳು.

ಘಟನೆಯ ಹಿನ್ನೆಲೆ ಏನು ?
ನಗರದ ಸಿಎಆರ್ ವಿಭಾಗದ ಕಾನ್ಸ್ಟೇಬಲ್ ನಾಗನಗೌಡ ಅವರು ತಮ್ಮ ಇಬ್ಬರು ಮಕ್ಕಳನ್ನು ಎಂದಿಂತೆ ಬುಧವಾರ ಬೆಳಿಗ್ಗೆ ಸ್ಕೂಟರ್ನಲ್ಲಿ ಕೂರಿಸಿಕೊಂಡು ಅವರು ಹಾಲು ತರುವುದಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಥಣಿಸಂದ್ರದ ಮುಖ್ಯರಸ್ತೆಯ ಮುಂಭಾಗದಲ್ಲಿ ಎದುರುಗಡೆಯಿಂದ ಬಂದ ಖಾಸಗಿ ಶಾಲೆಯ ಬಸ್ ಏಕಾಏಕಿ ತಿರುವು ತೆಗೆದುಕೊಂಡಿದೆ. ಈ ವೇಳೆ ಸ್ಕೂಟರ್ನ ಮೇಲೆ ಬಸ್ ಚಕ್ರ ಹರಿದಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಕರಣ ದಾಖಲು; ಆರೋಪಿ ಬಂಧನ
ಮಕ್ಕಳಾದ ವರ್ಷ ಹಾಗೂ ಭಾನು ಅವರ ಸಾವು ಹಾಗೂ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಭವಿಸಿದ ಕೂಡಲೇ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿದ್ದು, ಶಾಲೆಯ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಅಪಘಾತಕ್ಕೆ ಬಸ್ ಚಾಲಕನ ಅಜಾಗರೂಕ ಚಾಲನೆಯೇ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗಿದೆ. ಈ ಬಗ್ಗೆ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈರಲ್ ವಿಡಿಯೋದಲ್ಲಿ ಏನಿದೆ ?
ಇನ್ನು ಈ ಅಪಘಾತದ ದೃಶ್ಯಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಾಗನಗೌಡ ಅವರು ಶಾಲಾ ಬಸ್ ಬರುವುದನ್ನು ನೋಡಿ ಗಾಡಿ ನಿಲ್ಲಿಸಿದ್ದಾರೆ. ಬಸ್ ತಿರುವು ಪಡೆದುಕೊಳ್ಳಲಿ ಎಂದು ಕಾಯುವುದು ವೈರಲ್ ಆಗಿರುವ ವಿಡಿಯೋದಲ್ಲಿ ಇದೆ. ಆದರೆ ಬಸ್ ಚಾಲಕ ತಿರುವು ಪಡೆದುಕೊಳ್ಳುವುದಕ್ಕೆ ವಿಶಾಲವಾದ ಜಾಗವಿದ್ದರೂ, ಸಹ ಆ ಭಾಗದಲ್ಲಿ ತಿರುವು ಪಡೆದುಕೊಳ್ಳದೆ ಅಪಘಾತ ಮಾಡಿರುವುದು ವೈರಲ್ ವಿಡಿಯೋದಲ್ಲಿ ಇದೆ.
ಸಾರ್ವಜನಿಕರಿಂದ ತೀವ್ರ ಆಕ್ಷೇಪ
ಇನ್ನು ಈ ಪ್ರಕರಣಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಬಸ್ ಚಾಲಕ ಕುಡಿದು ವಾಹನ ಚಲಾಯಿಸಿರುವ ಸಾಧ್ಯತೆ ಇದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
-
Property Tax: ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮ: ಜಿಬಿಎ -
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications