ಬೆಂಗಳೂರು ಕಸ ಗುಡಿಸುವ ಯಂತ್ರ ಬಾಡಿಗೆಗೆ: ಸರ್ಕಾರದ ಪರ ಬ್ಯಾಟ್ ಬೀಸಿದ ಉದ್ಯಮಿ ಕಿರಣ್ ಮಜುಂದಾರ್ ಶಾ
Sweeping Machine: ಕಳೆದ ಕೆಲವು ದಿನಗಳಿಂದ ಬೆಂಗಳೂರು ಮೂಲಸೌಕರ್ಯ ಹಾಗೂ ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು, ಬೆಂಗಳೂರಿನ ಕಸ ಗುಡಿಸುವ ಮಿಷನ್ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಸರ್ಕಾರದ ಪರವಾಗಿ ಟ್ವೀಟ್ ಮಾಡಿದ್ದಾರೆ. YeThikKarkeDikhao ಎನ್ನುವ ಸೋಷಿಯಲ್ ಮೀಡಿಯಾ ಖಾತೆಯಿಂದ ಮಾಡಲಾಗಿರುವ ಟ್ವೀಟ್ಗೆ ಕಿರಣ್ ಅವರು ರಿಯಾಕ್ಟ್ ಮಾಡಿದ್ದಾರೆ.

ಈ ಸೋಷಿಯಲ್ ಮೀಡಿಯಾ ಖಾತೆಯಿಂದ ಕರ್ನಾಟಕದ ಮುಖ್ಯಮಂತ್ರಿ ಸಿ.ಎಂ ಸಿದ್ದರಾಮಯ್ಯ ಅವರ ಕಾರ್ಯವೈಖರಿ ನೋಡಿ.
ನಿಮ್ಮ ಸರ್ಕಾರವು ಬೆಂಗಳೂರಿನ 46 ರಸ್ತೆ ಗುಡಿಸುವ ಯಂತ್ರಗಳನ್ನು ಬಾಡಿಗೆಗೆ ಪಡೆಯಲು ವರ್ಷಕ್ಕೆ ₹ 613 ಕೋಟಿ ಖರ್ಚು ಮಾಡಲು ಬಯಸುತ್ತದೆ. ಆದರೆ GeM ನಲ್ಲಿರುವ ಅದೇ ಯಂತ್ರಗಳನ್ನು ನೇರವಾಗಿ ಖರೀದಿಸಲು ಸುಮಾರು ₹ 2.5 ಕೋಟಿ ವೆಚ್ಚವಾಗುತ್ತದೆ.
ನೀವು ಉತ್ತರಿಸಬೇಕಾದ ಕೆಲವು ಪ್ರಶ್ನೆಗಳು:
• ಪ್ರತಿ ಯಂತ್ರಕ್ಕೆ ವರ್ಷಕ್ಕೆ ₹ 2 ಕೋಟಿ ವಿಧಿಸುವ ಈ ಅಸಂಬದ್ಧ ಬಾಡಿಗೆ ಮಾದರಿಯನ್ನು ಯಾರು ವಿನ್ಯಾಸಗೊಳಿಸಿದರು ?
• ಯಂತ್ರದ ಪೂರ್ಣ ಖರೀದಿ ವೆಚ್ಚದ 80% ಅನ್ನು ವಾರ್ಷಿಕವಾಗಿ ಬಾಡಿಗೆಗೆ ಏಕೆ ನೀಡಲಾಗುತ್ತಿದೆ ?
• ಯಾವ ಗುತ್ತಿಗೆದಾರರನ್ನು ಪ್ರೋತ್ಸಾಹಿಸಲಾಗುತ್ತಿದೆ.
• ಸಂಪೂರ್ಣ ಖರೀದಿಯನ್ನು (ಅಗ್ಗದ ಮತ್ತು ಪಾರದರ್ಶಕ) ಏಕೆ ಆಯ್ಕೆ ಮಾಡಲಾಗಿಲ್ಲ ?
• GBA ಒಳಗೆ ಈ ಟೆಂಡರ್ ಪ್ರಸ್ತಾವನೆಯನ್ನು ಯಾರು ಅನುಮೋದಿಸಿದರು ?
• ಸಾರ್ವಜನಿಕ ಹಣವನ್ನು ಈ ರೀತಿ ಬಳಕೆ ಮಾಡುವ ಮೊದಲು ಯಾವ ರೀತಿ ಕೆಲಸ ಮಾಡಲಾಯಿತು ?
• ಬೆಂಗಳೂರಿನ ತೆರಿಗೆದಾರರು ನಿಜವಾದ ಮೂಲಸೌಕರ್ಯದ ಬದಲು ಈ "ಬಾಡಿಗೆ-ವಂಚನೆ"ಗೆ ಏಕೆ ಪಾವತಿಸಬೇಕು ಎಂದು ಸರಣಿ ಪ್ರಶ್ನೆಗಳನ್ನು ಕೇಳಲಾಗಿದೆ.
ಕರ್ನಾಟಕವು ಉತ್ತರಗಳು ಅರ್ಹವಾಗಿವೆ, ಕ್ಷಮಿಸಿಲ್ಲ.
ಈ ಟ್ವೀಟ್ಗೆ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಟ್ವೀಟ್ ಮಾಡಿದ್ದಾರೆ. ಒಪ್ಪಂದವನ್ನು ಅರ್ಥಮಾಡಿಕೊಳ್ಳದೆ ಕಾಮೆಂಟ್ ಮಾಡಬೇಡಿ. ನಗರವನ್ನು ಯಾಂತ್ರೀಕರಣಗೊಳಿಸಬೇಕಾಗಿದೆ. ಇವು ಭಾರೀ ಸಂಯೋಜಿತ ಯಂತ್ರಗಳಾಗಿವೆ, ನೀವು ಉಲ್ಲೇಖಿಸುತ್ತಿರುವ ದುರ್ಬಲ ವಾಹನಗಳಲ್ಲ. ಒಪ್ಪಂದವು ಸಾರ್ವಜನಿಕ ವಲಯದಲ್ಲಿರುತ್ತದೆ. ನಂತರ ನೀವು ಕಾಮೆಂಟ್ ಮಾಡಲು ಮುಕ್ತರಾಗಿದ್ದೀರಿ ಎಂದು ಹೇಳಿದ್ದಾರೆ. ಇದೀಗ ಈ ವಿಚಾರವು ಪರ - ವಿರೋಧ ಚರ್ಚೆಗೆ ಕಾರಣವಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ: ಇನ್ನು ಕಿರಣ್ ಅವರು ಸೋಷಿಯಲ್ ಮೀಡಿಯಾದಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿರುವುದಕ್ಕೆ ಹಲವರು ಅಚ್ಚರಿ ಸೂಚಿಸಿದ್ದಾರೆ.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications