ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಸಿಬ್ಬಂದಿಗೆ ಸಿಹಿ ಸುದ್ದಿ
ಬೆಂಗಳೂರು, ಮೇ 01: ಬೆಂಗಳೂರು ನಗರಕ್ಕೆ ನಿರಂತರವಾಗಿ ನೀರು ಸರಬರಾಜು ಮಾಡಲು ಹಾಗೂ ನಗರದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಜಲಮಂಡಳಿಯ ತನ್ನ ವ್ಯಾಪ್ತಿಯ ಸಿಬ್ಬಂದಿ-ನೌಕರರಿಗೆ ಸಿಹಿ ಸುದ್ದಿ ನೀಡಿದೆ.
ಬುಧವಾರ ಎಚ್ಬಿಆರ್ ಜಲಮಂಡಳಿ ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆಯ ಅಂಗವಾಗಿ ಆಲ್ಟಿಯಸ್ ಮತ್ತು ಲಕ್ಷ್ಮಿ ಗ್ರೂಪ್ ಆಸ್ಪತ್ರೆ ಅವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಜಲಮಂಡಳಿ ಅಧ್ಯಕ್ಷರಾದ ಡಾ. ವಿ ರಾಮ್ ಪ್ರಸಾತ್ ಮನೋಹರ್ ಅವರು ಮಾಹಿತಿ ನೀಡಿದರು.

ಜಲಮಂಡಳಿ ವ್ಯಾಪ್ತಿಯ ವಾಟರ್ಮ್ಯಾನ್, ಸ್ಯಾನಿಟರಿ ವರ್ಕರ್, ಜೆಟ್ಟಿ ಡ್ರೈವರ್ ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೂ ಮಂಡಳಿ ವತಿಯಿಂದ ಮೇ ತಿಂಗಳಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಅವರು ಹೇಳಿದರು.
ಉತ್ತಮ ಆರೋಗ್ಯ ಕರೆ
ಬೆಂಗಳೂರು ನಗರದ ಸ್ವಚ್ಚತೆಯನ್ನು ಕಾಪಾಡುವಲ್ಲಿ ಜಲಮಂಡಳಿಯ ವಾಟರ್ಮ್ಯಾನ್, ಸ್ಯಾನಿಟರಿ ವರ್ಕರ್, ಜೆಟ್ಟಿ ಡ್ರೈವರ್ಗಳ ಪಾತ್ರ ಬಹಳ ಮುಖ್ಯ. ಅವರುಗಳು ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾರ್ಮಿಕರು ಹಾಗೂ ಸಿಬ್ಬಂದಿಗಳೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಬೇಕು. ದುಶ್ಚಟಗಳಿಂದ ದೂರವಿದ್ದು ಉತ್ತಮ ಆರೋಗ್ಯದ ಕಡೆಗೆ ಗಮನ ನೀಡಬೇಕು ಎಂದು ಕರೆ ನೀಡಿದರು.
ಮೇ ತಿಂಗಳಲ್ಲಿ ಆರೋಗ್ಯ ತಪಾಸಣೆ
ಕಾರ್ಮಿಕರು ಹಾಗೂ ಸಿಬ್ಬಂದಿಗಳ ಆರೋಗ್ಯದ ಬಗ್ಗೆ ಮಂಡಳಿ ವಿಶೇಷ ಕಾಳಜಿಯನ್ನು ಹೊಂದಿದೆ. ಮಂಡಳಿಯ ಕಾರ್ಮಿಕರ ಆರೋಗ್ಯವನ್ನು ಸುಸ್ಥಿಯಲ್ಲಿಡುವ ದೃಷ್ಟಿಯಿಂದ ಪ್ರತಿವರ್ಷ ಮೇ ತಿಂಗಳಲ್ಲಿ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲಾಗುವುದು ಎಂದರು.
ಆರೋಗ್ಯ ಶಿಬಿರದಲ್ಲಿ 300 ಕ್ಕೂ ಹೆಚ್ಚು ಸಿಬ್ಬಂದಿಗಳು ಹಾಗೂ ಅವರ ಕುಟುಂಬದ ಸದಸ್ಯರು ಆರೋಗ್ಯ ತಪಾಸಣೆ ಲಾಭ ಪಡೆದುಕೊಂಡರು.

ಏರಿಯೇಟರ್ ಅವಳಡಿಕೆ ಗಡುವು ವಿಸ್ತರಣೆ
ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಏರಿಯೇಟರ್/ಫ್ಲೋ ರಿಸ್ಟ್ರಿಕ್ಟರ್ ಅವಳಡಿಕೆ ಅಂತಿಮ ದಿನವನ್ನು ಮೇ 7ರವರೆಗೆ ವಿಸ್ತರಣೆ ಮಾಡಲಾಗಿದೆ. ನೀರು ಉಳಿತಾಯ ಹಾಗೂ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಾಲ್ಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲಿ, ಅಪಾರ್ಟ್ಮೆಂಟ್ಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ, ಐಷಾರಾಮಿ ಹೋಟೇಲ್ಗಳಲ್ಲಿ, ರೆಸ್ಟೋರೆಂಟ್ಗಳಲ್ಲಿ ಹಾಗೂ ಧಾರ್ಮಿಕ ಸ್ಥಳಗಳನ್ನೊಳಗೊಂಡ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಚತೆಗಾಗಿ ಬಳಸುವ ನಲ್ಲಿಗಳಲ್ಲಿ ಅಳವಡಿಕೆ ಮಾಡುವಂತೆ ಜಲಮಂಡಳಿ ಸೂಚಿಸಿದೆ.
ಸದ್ಯ ಈಗಾಗಲೇ ಸುಮಾರು 6 ಲಕ್ಷಕ್ಕೂ ಹೆಚ್ಚು ಏರಿಯೇಟರ್ಗಳನ್ನು ಅಳವಡಿಸಿಕೊಳ್ಳಲಾಗಿದೆ. ಉಳಿದ ಏರಿಯೇಟರ್ ಅಳವಡಿಕೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಮೇ 8ರ ನಂತರ ಜಲಮಂಡಳಿ ಅಧಿಕಾರಿಗಳು ಪರಿಶೀಲನೆ ನಡೆಸಿ ಎರಿಯೇಟರ್ ಅಳವಡಿಸಿಕೊಳ್ಳದೇ ಇರುವಂತವರ ಮೇಲೆ ದಂಡ ವಿಧಿಸಲು ನಿರ್ಧರಿಸಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications