DCM DK Shivakumar: ಕೇವಲ ಎರಡು- ಮೂರು ವರ್ಷಗಳಲ್ಲಿ ಬೆಂಗಳೂರನ್ನು ಬದಲಾಯಿಸಲು ಆಗಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು, ಫೆಬ್ರವರಿ 20: ಕೇವಲ ಎರಡು- ಮೂರು ವರ್ಷಗಳಲ್ಲಿ ಬೆಂಗಳೂರನ್ನು ಬದಲಾಯಿಸಲು ಆಗುವುದಿಲ್ಲ. ಮೇಲಿರುವ ಭಗವಂತ ಕೆಳಗೆ ಬಂದರೂ ಸಾಧ್ಯವಿಲ್ಲದ ಕೆಲಸ. ಆದರೆ ನಾವು ಯೋಜನೆಗಳ ರೂಪುರೇಷೆಗಳನ್ನು ಸರಿಯಾಗಿ ಮಾಡಿ, ಅನುಷ್ಠಾನಕ್ಕೆ ತಂದರೆ ಮಾತ್ರ ಇದು ಸಾಧ್ಯವಾಗುತ್ತದೆ. ರಕ್ಷಣೆ, ಗುಣಮಟ್ಟ ಮತ್ತು ಏಕರೂಪತೆ ಕಾಪಾಡುವುದು ನಮ್ಮ ಗುರಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ "ನಮ್ಮ ರಸ್ತೆ - ವಿನ್ಯಾಸ ಕಾರ್ಯಾಗಾರ" ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿ, ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ ಸಾಧಿಸಬೇಕು. ಇಲ್ಲದಿದ್ದರೇ ಬೆಂಗಳೂರಿಗೆ ನಾವುಗಳು ಮೋಸ ಮಾಡಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಈ ಕೈಪಿಡಿ ಮೂಲಕ ಅನೇಕ ಸಲಹೆ, ಸೂಚನೆಗಳನ್ನು ನಾವು ಪಡೆಯಬಹುದು. ರಸ್ತೆಬದಿ ಸಸಿಗಳನ್ನು ಎಲ್ಲಿ ನೆಡಬೇಕು, ಕಂಬಗಳು ಎಲ್ಲಿರಬೇಕು, ಮುಖ್ಯರಸ್ತೆ ಹೇಗಿರಬೇಕು, ವಾರ್ಡ್ ರಸ್ತೆಗಳು ಹೇಗಿರಬೇಕು, ಪಾದಚಾರಿ ಮಾರ್ಗಗಳನ್ನು ಹೇಗೆ ನಿರ್ಮಾಣ ಮಾಡಬೇಕು, ಜೊತೆಗೆ ರಸ್ತೆಯಲ್ಲಿ ಸಂಚಾರ ಮಾಡುವಾಗ, ನಡೆಯುವಾಗ ಹೇಗೆ ಶಿಸ್ತನ್ನು ಪಾಲಿಸಬೇಕು, ಬಸ್ ನಿಲ್ಧಾಣಗಳ ವಿನ್ಯಾಸ, ಮೆಟ್ರೋ ಪಿಲ್ಲರ್ ಗಳು, ವೃತ್ತಗಳ ಸೌಂದರ್ಯೀಕರಣದ ಬಗ್ಗೆ ಹೊಸ ಆಲೋಚನೆಗಳನ್ನು ಇಲ್ಲಿ ನೋಡಬಹುದು ಎಂದು ಹೇಳಿದರು.
ನಗರದ ಎಲ್ಲಾ ರಸ್ತೆಗಳ, ಪಾದಚಾರಿ ಮಾರ್ಗಗಳ ವಿನ್ಯಾಸ ಏಕರೂಪತೆಯಿಂದ ಕೂಡಿರಬೇಕು ಎನ್ನುವುದು ನಮ್ಮ ಉದ್ದೇಶ. ರಸ್ತೆ ಬದಿ ಕಂಬಗಳ ಬಣ್ಣವೂ ಸಹ ಮೊದಲೇ ನಿರ್ಧಾರ ಮಾಡಲಾಗುವುದು. ನಗರದ ಅನೇಕ ಕಡೆ ಬೇರೆ, ಬೇರೆ ವಿನ್ಯಾಸ ಬಸ್ ನಿಲ್ದಾಣಗಳಿವೆ ಅವುಗಳನ್ನು ಸಹ ಒಂದೇ ಮಾದರಿಯಲ್ಲಿ ನಿರ್ಮಾಣ ಮಾಡಬೇಕು. ಈ ಬಗ್ಗೆ ಈ ಕಾರ್ಯಾಗಾರದಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರುಟ.
ಹೊರಗಡೆ ಇರುವ ಎಲ್ಲಾ ಕೇಬಲ್ ವಯರ್ ಗಳನ್ನು ಕಿತ್ತು ಹಾಕಬೇಕು. ಇವುಗಳನ್ನು ಭೂಗತವಾಗಿ ಹಾಕುವಂತಹ ವ್ಯವಸ್ಥೆ ಮಾಡಬೇಕು ಎಂದು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಇಷ್ಟು ದಿನ ಕಾದೆವು ಏನಾದರೂ ಬದಲಿ ವ್ಯವಸ್ಥೆ ಮಾಡಿಕೊಳ್ಳುತ್ತಾರೆ ಎಂದು, ಇದಾಗದ ಕಾರಣ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಎಲ್ಲಾ ಕೇಬಲ್ ಗಳನ್ನು ಕತ್ತರಿಸಿದರೆ ಅವರೇ ದಾರಿಗೆ ಬರುತ್ತಾರೆ. ಹೊಸ ಯೋಜನೆಗಳು, ಬೆಂಗಳೂರಿನ ರೂಪುರೇಷೆಗಳ ಬಗ್ಗೆ, ಪ್ರತಿ ನಾಗರೀಕನ ಆಸ್ತಿ ರಕ್ಷಣೆ ಕುರಿತು ಹೊಸ ನೀತಿಗಳನ್ನು ತರಲಾಗಿದ್ದು ಅದನ್ನು ಫೆಬ್ರವರಿ ತಿಂಗಳ ಕೊನೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಬಹಿರಂಗಗೊಳಿಸಲಾಗುವುದು ಎಂದರು.
ಸುರಂಗರಸ್ತೆಯ ನಿರ್ಮಾಣಕ್ಕೆ ಹಲವಾರು ಸವಾಲುಗಳಿವೆ. ಇನ್ನೂ ಟೆಂಡರ್ ಕರೆಯಲು ಸಾಧ್ಯವಾಗಿಲ್ಲ. ಏಕೆಂದರೆ ಭೂಮಿಯ ಸ್ವಾಧೀನ, ಹಣಕಾಸು, ತಾಂತ್ರಿಕ ಅಂಶಗಳಿವೆ. ನೂತನ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಅನ್ನು ಕಾರ್ಯಗತಗೊಳಿಸಲಾಗಿದೆ. ಈ ಹಿಂದೆ ಮೆಟ್ರೋ ಮಾರ್ಗವಿರುವ ಕಡೆ ಡಬಲ್ ಡೆಕ್ಕರ್ ಸಾಧ್ಯವಾಗಿಲ್ಲ ಎಂದು ಹೇಳಿದರು. ಬೆಂಗಳೂರಿನಲ್ಲಿ ಸುಮಾರು 1,700 ಕಿಮೀ ವಿಸ್ತೀರ್ಣಕ್ಕೆ ವೈಟ್ ಟಾಪಿಂಗ್ ಹಾಕಲಾಗುತ್ತಿದೆ. ಮುಂದಿನ 30 ವರ್ಷ ಇದು ಬಾಳಿಕೆ ಬರುತ್ತದೆ. ರಾಜಕಾಲುವೆ ಪಕ್ಕದಲ್ಲಿ ಹೊಸ ರಸ್ತೆಗಳ ನಿರ್ಮಾಣ. ಮೇಲ್ಸೇತುವೆ ಸೇರಿದಂತೆ ಅನೇಕ ನೂತನ ಯೋಜನೆಗಳು ಸರ್ಕಾರದ ಮುಂದಿವೆ ಎಂದು ಹೇಳಿದರು.
ಬಾಬಾ ಸಾಹೇಬರ ಸಂವಿಧಾನ ನಮ್ಮೆಲ್ಲರ ಬದುಕನ್ನು ರೂಪಿಸಿದೆ. ಅದೇ ರೀತಿ ಈ ನಮ್ಮರಸ್ತೆ ಎನ್ನುವ ಕೈಪಿಡಿ ಬೆಂಗಳೂರಿನ ಭವಿಷ್ಯ ಹೇಗಿರಬೇಕು ಎಂದು ದಾರಿ ತೋರಿಸಲಿದೆ. ನಾನು ಬೆಂಗಳೂರು ಅಭಿವೃದ್ದಿ ಸಚಿವನಾಗಿ ಅಧಿಕಾರವಹಿಸಿಕೊಳ್ಳುವ ಮೊದಲು ಹಾಗೂ ನಂತರವೂ ಅನೇಕ ಸ್ಥಳಗಳಿಗೆ ಭೇಟಿ ನೀಡಿದಾಗ ಅಲ್ಲಿನ ರಸ್ತೆ, ಮೆಟ್ರೋ, ಸುರಂಗ ರಸ್ತೆಗಳ ಕುರಿತು ಕುತೂಹಲಕ್ಕೆ ತಿಳಿದುಕೊಳ್ಳುತ್ತಿದ್ದೆ ಎಂದರು.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications