SWR: ಬೆಂಗಳೂರಿನಿಂದ ಇಲ್ಲಿಗೆ ಒಂದು ಟ್ರಿಪ್ ವಿಶೇಷ ರೈಲು, ವೇಳಾಪಟ್ಟಿ
ಬೆಂಗಳೂರು, ಅಕ್ಟೋಬರ್ 23: ದೀಪಾವಳಿ ಹಾಗೂ ಛತ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ (South Western Railway) ವಿಶೇಷ ರೈಲು ಸಂಚಾರವನ್ನು ಘೋಷಿಸಿದೆ. ಅಕ್ಟೋಬರ್ 24ರವರೆಗೆ ಒಂದು ಟ್ರಿಪ್ ರೈಲು ಸೇವೆ ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕ ಭಾಗದವರಿಗೆ ಸಿಗಲಿದೆ.
ಪ್ರಯಾಣಿಕರ ದಟ್ಟಣೆ ಸಂಬಂಧ ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ಕಲಬುರಗಿ ಮರಳಿ ನಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಕ್ಕೆ ಮಾರ್ಗದಲ್ಲಿ ಎರಡು ವಿಶೇಷ ಎಕ್ಸ್ಪ್ರೆಸ್ ರೈಲುಗಳು ಸಂಚಾರ ಸೇವೆ ಲಭ್ಯವಾಗಲಿದೆ. ಬೆಂಗಳೂರು ಕಂಟೋನ್ಮೆಂಟ್ನಿಂದ ಕಲಬುರಗಿಗೆ ಅಕ್ಟೋಬರ್ 23ರ ರಾತ್ರಿ 7.40 ಕ್ಕೆ (ಗುರುವಾರ) ಮೊದಲ ರೈಲು (06557) ಹೊರಡಲಿದೆ. ಮರುದಿನ ಬೆಳಗ್ಗೆ 7.30 ಕ್ಕೆ (ಶುಕ್ರವಾರ) ತಲುಪಲಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಲಬುರಗಿಯಿಂದ ಬೆಂಗಳೂರು ಕಂಟೋನ್ಮೆಂಟ್ ವಿಶೇಷ ರೈಲು (06558) ಅಕ್ಟೋಬರ್ 24 ಬೆಳಗ್ಗೆ 9.30 ಕ್ಕೆ ಶುಕ್ರವಾರ ಹೊರಡಲಿದೆ. ಅದೇ ದಿನ ರಾತ್ರಿ 8.30 ಕ್ಕೆ ಕಲಬುರಗಿ ನಿಲ್ದಾಣ ತಲುಪಲಿದೆ. ಈ ರೈಲುಗಳು ಪ್ರಯಾಣಿಕರಿಗೆ ಹಬ್ಬದ ಸಮಯದಲ್ಲಿ ಅನುಕೂಲವಾಗುವಂತೆ ಕೇವಲ ಒಂದು ಟ್ರಿಪ್ನ ವಿಶೇಷ ಎಕ್ಸ್ಪ್ರೆಸ್ ರೈಲುಗಳಾಗಿ ಓಡಿಸಲಾಗುತ್ತಿದೆ. ಈ ರೈಲು ಸೇವೆ ಅಕ್ಟೋಬರ್ 20 ರಂದು ಕೋಚಿಂಗ್ ಸಂಯೋಜನೆ ಇದೆ.
ಪ್ರಯಾಣಿಕರು ರೈಲುಗಳ ವೇಳಾಪಟ್ಟಿ ಹಾಗೂ ಆಸನ ಲಭ್ಯತೆ ಕುರಿತು ಹೆಚ್ಚಿನ ಮಾಹಿತಿಗಾಗಿ ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ http://www.enquiry.indianrail.gov.in ಅಥವಾ NTES ಆಪ್ ಮೂಲಕ ಮಾಹಿತಿ ಪಡೆದುಕೊಳ್ಳಬಹುದು. ಈ ವಿಶೇಷ ರೈಲುಗಳು ಹಬ್ಬದ ಪ್ರಯಾಣದ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಪ್ರಯಾಣಿಕರಿಗೆ ಸುಗಮ ಮತ್ತು ಆರಾಮದಾಯಕ ಪ್ರಯಾಣದ ಅನುಭವ ನೀಡಲಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತೀಚೆಗೆ ಇದೇ ದೀಪಾವಳಿ ಪ್ರಯುಕ್ತ ಬೆಂಗಳೂರು ಕಂಟ್ರೋನ್ಮೆಂಟ್-ಕಲಬುರಗಿಗೆ ವಿಶೇಷ ರೈಲುಗಳನ್ನು ಬಿಡಲಾಗಿತ್ತು. ಅಕ್ಟೋಬರ್ 18ರಿಂದ 22 ರವರೆಗೆ ಕೆಲವು ರೈಲುಗಳನ್ನು ಓಡಿಸಿತ್ತು. ಇದರ ಬೆನ್ನಲ್ಲೆ ಪ್ರಯಾಣಿಕರ ಹಿತ ದೃಷ್ಟಿಯಿಂದ ಮತ್ತೊಂದು ಸೆಟ್ ರೈಲನ್ನು ಕಾರ್ಯಾಚರಣೆಗೆ ಇಳಿಸಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications