Freedom Park: ಗುಡ್ ನ್ಯೂಸ್: ಸ್ವಾತಂತ್ರ್ಯ ಉದ್ಯಾನ ಸಮಗ್ರ ಅಭಿವೃದ್ಧಿಗೆ ಪ್ಲಾನ್
ಬೆಂಗಳೂರು, ಅಕ್ಟೋಬರ್ 24: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್) ಅನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ನಗರದ ಕೇಂದ್ರ ನಗರ ಪಾಲಿಕೆ ಸಜ್ಜಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ರಾಜೇಂದ್ರ ಚೋಳನ್ ರವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶುಕ್ರವಾರ ಬೆಳಗ್ಗೆ ನಗರದ ಸ್ವಾತಂತ್ರ್ಯ ಉದ್ಯಾನವನ (ಫ್ರೀಡಂ ಪಾರ್ಕ್) ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು. ಪಾರ್ಕ್ನಲ್ಲಿ ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ, ವಾಯುವಿಹಾರಿಗಳ ನಡಿಗೆಗೆ ಸುಗಮ ಮಾರ್ಗ, ಸೂಕ್ತ ಭದ್ರತಾ ವ್ಯವಸ್ಥೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಕಿಡ್ಸ್ ಪಾರ್ಕ್ ನಿರ್ಮಾಣ, ಶೌಚಾಲಯ ವ್ಯವಸ್ಥೆ
ನಗರದ ಹೃದಯ ಭಾಗದಲ್ಲಿರುವ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಯುವಿಹಾರಕ್ಕೆ (ವಾಕಿಂಗ್) ಆಗಮಿಸುವ ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳ ನಡಿಗೆಗೆ ಸುಗಮವಾಗುವಂತೆ ಮಾರ್ಗವನ್ನು ನಿರ್ಮಿಸಬೇಕೆಂದರು. ಉದ್ಯಾನವನಕ್ಕೆ ಆಗಮಿಸುವ ಮಕ್ಕಳ ಆಟೋಟಕ್ಕಾಗಿ ಆಟದ ಉಪಕರಣಗಳೊಂದಿಗೆ ಕಿಡ್ಸ್ ಪಾರ್ಕ್ ನಿರ್ಮಿಸಬೇಕು ಎಂದು ಹೇಳಿದರು.
ಉದ್ಯಾನವನಕ್ಕೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಮತ್ತು ಉದ್ಯಾನವನದಲ್ಲಿ ಸ್ವಚ್ಛತೆ ಕಾಪಾಡಬೇಕು. ಇಲ್ಲಿ ಹೆಚ್ಚು ಸಸಿಗಳನ್ನು ನೆಟ್ಟು ಅವುಗಳ ಸರಿಯಾದ ಪೋಷಣೆಗೆ ಕ್ರಮ ವಹಿಸಲು ಹಾಗೂ ಒಣಗಿದ ಹಾಗೂ ಅಪಾಯಕಾರಿ ಮರ ಮತ್ತು ರೆಂಬೆ ಕೊಂಬೆಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಿದರು.
ಬಹುಮಹಡಿ ವಾಹನ ನಿಲುಗಡೆ ಕಟ್ಟಡದ ಮೇಲ್ಭಾಗದ ಸ್ಥಳವನ್ನು ವಾಣಿಜ್ಯ ಉದ್ದೇಶ ಬಳಸಿ ಕಂದಾಯ ಉತ್ಪತ್ತಿಗೆ ಕ್ರಮ ವಹಿಸಬೇಕಿದೆ. ಉದ್ಯಾನವನದ ಪಕ್ಕದಲ್ಲಿರುವ ಬಹುಮಹಡಿ ವಾಹನ ನಿಲುಗಡೆ ಸ್ಥಳಕ್ಕೆ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈ ಕಟ್ಟಡದ ಮೇಲ್ಭಾಗದಲ್ಲಿರುವ ಜಾಗವನ್ನು, ವಸ್ತು ಪ್ರದರ್ಶನ ಮತ್ತು ಮಾರಾಟ ಹಾಗೂ ಇನ್ನಿತರ ವಾಣಿಜ್ಯ ಉದ್ದೇಶಗಳಿಗೆ ಉಪಯೋಗಕ್ಕೆ ನೀಡುವ ಮೂಲಕ ನಗರ ಪಾಲಿಕೆಗೆ ಆದಾಯ ಬರುವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು.
ಕಟ್ಟಡ ತ್ಯಾಜ್ಯ ರಸ್ತೆಗೆ ಸುರಿದವರಿಗೆ ದಂಡ ವಿಧಿಸಿ
ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಹಂತದಲ್ಲಿರುವ ಕೆಲವು ಕಟ್ಟಡಗಳ ತ್ಯಾಜ್ಯ, ಕಬ್ಬಿಣ, ಜಲ್ಲಿಕಲ್ಲು, ಮರಳು ಇತರೆ ವಸ್ತುಗಳನ್ನು ರಸ್ತೆಯಲ್ಲಿ ಹಾಕಲಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕಾರಣ ಅದನ್ನು ಕೂಡಲೇ ತೆರವುಗೊಳಿಸಲು ಹಾಗೂ ಕಟ್ಟಡ ಮಾಲೀಕರಿಗೆ ದಂಡ ವಿಧಿಸಬೇಕು.
ಸ್ವಾತಂತ್ರ್ಯ ಉದ್ಯಾನವನದ ಅಕ್ಕ ಪಕ್ಕದಲ್ಲಿನ ರಸ್ತೆಗಳನ್ನು ಪರಿಶೀಲಿಸಿದ ಅವರು, ರಸ್ತೆಬದಿಯಲ್ಲಿ ಎಳನೀರು ಮಾರಾಟ ಮಾಡುತ್ತಿರುವವರ ತೆಂಗಿನ ಚಿಪ್ಪುಗಳನ್ನು ಅಲ್ಲಿಯೇ ಬಿಡದೆ, ವಿಲೇವಾರಿ ಮಾಡಲು ಕ್ರಮ ವಹಿಸಲು ಸೂಚಿಸಿದರು. ಜೊತೆಗೆ ಪಾದಚಾರಿ ಮಾರ್ಗಗಳ ಸರಿಯಾಗಿ ನಿರ್ವಬೇಕು ಎಂದು ತಿಳಿಸಿದರು.
-
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು -
ಯುದ್ಧದ ನಡುವೆಯೂ ಸರ್ವಧರ್ಮ ಸಮನ್ವಯತೆ ಸಂದೇಶ: ನಮ್ ಭಾರತ ಅಂದ್ರೆ ಹೀಗೆ ಅಂತಾ ವಿಶ್ವಕ್ಕೆ ಸಾರಿದ ಸಂಜು ಸ್ಯಾಮ್ಸನ್ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ಕರ್ನಾಟಕದ ಅಲಿಪುರದಲ್ಲಿ ಇರಾನ್ ನಾಯಕ ಖಮೇನಿ ಅಂದು ಆಡಿದ್ದ ಮಾತುಗಳೇನು ?












Click it and Unblock the Notifications