Bengaluru: ನಗರದ ಸಮಸ್ಯೆಗಳಿಗೆ ಪರಿಹಾರ ಕೊಡಿ, ₹10 ಲಕ್ಷ ಬಹುಮಾನ ಗೆಲ್ಲಿ
ಬೆಂಗಳೂರು, ನವೆಂಬರ್ 05: ಮಳೆಗಾಲ, ಬೇಸಿಗೆ ಕಾಲ, ಚಳಿಗಾಲದಂತೆ ಬೆಂಗಳೂರು ಮಹಾನಗರದಲ್ಲಿ ಕಾಲ ಕಾಲಕ್ಕೆ ಸಮಸ್ಯೆಗಳು ಬದಲಾಗುತ್ತವೆ. ಮತ್ತದೇ ಸಮಸ್ಯೆಗಳು ಪ್ರತಿ ವರ್ಷ ಪುನರಾವರ್ತನೆ ಆಗುತ್ತವೆ. ಇಂತಹ ಸಮಸ್ಯೆಗಳಿಗೆ ನಿಮ್ಮ ಬಳಿ ಪರಿಹಾರವಿದೆಯೇ?. ಇದ್ದರೆ ನೀವು "ನಮ್ಮ ಬೆಂಗಳೂರು ಚಾಲೆಂಜ್"ನಲ್ಲಿ ಭಾಗವಹಿಸಲು ಕೂಡಲೇ ಅರ್ಜಿ ಸಲ್ಲಿಸಬಹುದು.
ಸಿಲಿಕಾನ್ ಸಿಟಿ ಬೆಂಗಳೂರು ಸಂಚಾರ ದಟ್ಟಣೆ, ಜಲಾವೃತ-ಪ್ರವಾಹ, ಕುಡಿಯುವ ನೀರಿನ ಬಿಕ್ಕಟ್ಟು, ತ್ಯಾಜ್ಯ ವಿಲೇವಾರಿ ಹೀಗೆ ಅನೇಕ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ವಿಭಿನ್ನ ಆಲೋಚನೆ, ಐಡಿಯಾ ನಿಮ್ಮಲ್ಲಿದೆಯೇ? ಹಾಗಿದ್ದರೆ ಇಲ್ಲಿದೆ ಉತ್ತಮ ಅವಕಾಶ.

ಅನ್ಬಾಕ್ಸಿಂಗ್ ಬೆಂಗಳೂರು ಹಾಗೂ WT ಫಂಡ್ ಸಹಯೋಗದೊಂದಿಗೆ ಬೆಂಗಳೂರು ಸಮಸ್ಯೆಗೆ ಪರಿಹಾರ ಸೂಚಿಸುವ ಐದು ವಿಭಿನ್ನ ಆಲೋಚನೆಗಳಿಗೆ ತಲಾ 10 ಲಕ್ಷ ರೂ ಅನುದಾನ ನೀಡುವ "ನಮ್ಮ ಬೆಂಗಳೂರು ಚಾಲೆಂಜ್" ಉಪಕ್ರಮವನ್ನು ಘೊಷಣೆ ಮಾಡಿದೆ.
ಐದು ವ್ಯಕ್ತಿ ಅಥವಾ ಸಮುದಾಯ ಸಂಸ್ಥೆಗಳಿಗೆ ಹಣ
ಬೆಂಗಳೂರಿನ ಸಮಸ್ಯೆಗಳಿಗೆ ಉತ್ತಮ ಐಡಿಯಾ ನೀಡುವ 5 ವ್ಯಕ್ತಿಗಳು ಅಥವಾ ಸ್ಟಾರ್ಟ್ಅಪ್ ಅಥವಾ ಸಮುದಾಯ ಸಂಸ್ಥೆಗಳು ತಲಾ 10 ಲಕ್ಷ ರೂಪಾಯಿಗಳ ಅನುದಾನಕ್ಕಾಗಿ ಆಯ್ಕೆ ಆಗಲಿವೆ ಎಂದು ಸಂಸ್ಥೆಯು ಮಾಹಿತಿ ನೀಡಿದೆ.
ಈ ಉಪಕ್ರಮದ ಬಗ್ಗೆ ಮಾತನಾಡಿದ ಅನ್ಬಾಕ್ಸಿಂಗ್ ಬೆಂಗಳೂರಿನ ಸಿಇಒ ಮತ್ತು ಸಹ-ಸಂಸ್ಥಾಪಕರಾದ ಮಾಲಿನಿ ಗೋಯಲ್ ಅವರು, ಈ ವಿನೂತನ ಉಪಕ್ರಮದ ಮೂಲಕ ನಗರದ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರು ನಗರ ನಮಗೆ ಸಾಕಷ್ಟು ನೀಡಿದೆ. ಅದಕ್ಕೆ ಪರ್ಯಾಯವಾಗಿ ನಾವೂ ನಗರದ ಸಮಸ್ಯೆಗಳಿಗೆ ಪರಿಹಾರ ರೂಪದಲ್ಲಿ ಕೊಡುಗೆ ನೀಡಲು ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ತಿಳಿಸಿದರು.

ಬದುಕು ನೀಡಿದ ಬೆಂಗಳೂರಿಗೆ ಕೊಡುಗೆ ಕೊಡೋಣ
WT ಫಂಡ್ಉದ್ಯಮಿ ನಿಖಿಲ್ ಕಾಮತ್ ಅವರು, ಈ ಮಹಾನಗರ ನನಗೆ ಎಲ್ಲವನ್ನೂ ನೀಡಿದೆ, ಮುಂದೆ ಬೆಳೆಯಬೇಕು ಎನ್ನುವ ಹಸಿವು ಸಹ ನೀಡಿದೆ. ಈ ಬೆಂಗಳೂರು ಸುಂದರವನ್ನಾಗಿ ಉಳಿಸಿಕೊಂಡು ಹೋಗಲು ಈಗಿರುವ ಒಂದಷ್ಟು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿ.ದೆ ಈ ನಿಟ್ಟಿನಲ್ಲಿ 'ಬೆಂಗಳೂರು ಚಾಲೆಂಜ್'' ಅನ್ನು ಜನಸಾಮಾನ್ಯರ ವಿಭಿನ್ನ ಆಲೋಚನೆಗೆ ಬಿಡಲಾಗಿದೆ ಎಂದು ಅವರು ಹೇಳಿದರು.
ಐಡಿಯಾವುಳ್ಳವರು ಅರ್ಜಿ ಸಲ್ಲಿಸುವುದು ಹೇಗೆ?
ನಮ್ಮ ಬೆಂಗಳೂರು ಚಾಲೆಂಜ್ಗಾಗಿ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನಾವೀನ್ಯತೆ, ಪ್ರಭಾವ, ಕಾರ್ಯಸಾಧ್ಯತೆ, ಸ್ಕೇಲೆಬಿಲಿಟಿ ಮತ್ತು ಬದ್ಧತೆಯ ಆಧಾರದ ಮೇಲೆ ಅವರ ಐಡಿಯಾಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಇಚ್ಚಿಸುವವರು ಅನ್ಬಾಕ್ಸಿಂಗ್ ಬೆಂಗಳೂರಿನ ಅಧಿಕೃತ ವೆಬ್ಸೈಟ್ https://www.unboxingblr.com/ ನಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು.
ಅರ್ಜಿಯಲ್ಲಿ ತಮ್ಮ ಸ್ವವಿವರ ಮತ್ತು ಅವರ ಐಡಿಯಾಗಳ ಪರಿಚಯಿಸುವ ಕಿರು ವೀಡಿಯೊವನ್ನು ಸಲ್ಲಿಸಬೇಕು. ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವರ್ಚುವಲ್ ಇಂಟರ್ವ್ಯೂಗಳಿಗೆ ಆಹ್ವಾನಿಸಲಾಗುತ್ತದೆ. ಇದರಲ್ಲಿ ಆಯ್ಕೆಯಾಗುವ ಟಾಪ್ 5 ಅರ್ಜಿದಾರ ವಿಜೇತರಿಗೆ ತಲಾ 10 ಲಕ್ಷ ರೂ.ಗಳ ಅನುದಾನ/ ಬಹುಮಾನ ಪಡೆಯುತ್ತಾರೆ.
ನವೆಂಬರ್ 30 ರಿಂದ ಡಿಸೆಂಬರ್ 15ರವರೆಗೆ ನಡೆಯಲಿರುವ ಬೆಂಗಳೂರು ಹಬ್ಬದಲ್ಲಿ ನಡೆಯಲಿರುವ ಕಾರ್ಯಾಗಾರಗಳಲ್ಲಿಯೂ ಸಹ ಆಯ್ಕೆಯಾದ ಐಡಿಯಾಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಈ ಹಬ್ಬದ ಕೊನೆಗೆ ವಿಜೇತರನ್ನು
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications