ಬೆಂಗಳೂರು ಅವ್ಯವಸ್ಥೆ: ಸರ್ಕಾರದ ಮೇಲೆ ಮುಗಿಬಿದ್ದ ಮೋಹನ್ ದಾಸ್ ಪೈ & ಕಿರಣ್ ಮಜುಂದಾರ್ ಶಾ
ಬೆಂಗಳೂರು ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಉದ್ಯಮಿಗಳು ಸರ್ಕಾರದ ವಿರುದ್ಧ ತಿರುಗಿ ಬೀಳುವುದು ಮುಂದುವರಿದಿದೆ. ಬೆಂಗಳೂರಿನ ರಸ್ತೆಗುಂಡಿ, ಕಸ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯದ ಸಮಸ್ಯೆಗಳ ಬಗ್ಗೆ ಉದ್ಯಮಿಗಳು ಧ್ವನಿ ಎತ್ತುವುದು ಮುಂದುವರಿದಿದೆ. ಬೆಂಗಳೂರಿನ ಮೂಲಸೌಕರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಉದ್ಯಮಿಗಳಾದ ಮೋಹನ್ ದಾಸ್ ಪೈ ಮತ್ತು ಕಿರಣ್ ಮಜುಂದಾರ್ ಶಾ ಅವರು ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ಮೂಲಸೌಕರ್ಯದ ವಿಚಾರವು ಪದೇ ಪದೇ ಚರ್ಚೆ ಆಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯವಾಗಿ ಪರ - ವಿರೋಧ ಚರ್ಚೆಗಳು ನಡೆದಿವೆ. ಆದರೆ ಬೆಂಗಳೂರಿನಲ್ಲಿ ಮೌಲಸೌಕರ್ಯ ಕುಸಿದಿರುವ ಬಗ್ಗೆ ಎಲ್ಲರೂ ಒಪ್ಪಿಕೊಳ್ಳುವಂತಿದೆ. ಬೆಂಗಳೂರಿನಲ್ಲಿ ಮೂಲಸೌಕರ್ಯದ ಬಗ್ಗೆ ಇದೀಗ ವ್ಯಕ್ತಿಯೊಬ್ಬರು ಪೋಸ್ಟ್ ಮಾಡಿದ ಬೆನ್ನಲ್ಲೇ ಉದ್ಯಮಿಗಳಾದ ಮೋಹನ್ ದಾಸ್ ಪೈ ಮತ್ತು ಮಜುಂದರ್ ಶಾ ಅವರು ಸರ್ಕಾರದ ಮೇಲೆ ಮುಗಿ ಬಿದ್ದಿದ್ದಾರೆ.

ನರೇಶ್ ಎನ್ನುವವರು, ಬೆಳ್ಳಂದೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಇದೀಗ ಪ್ರಯಾಣಿಸಿದೆ. ಈ ಮಾರ್ಗದಲ್ಲಿ ಸಂಚರಿಸುವುದಕ್ಕೆ ಬರೋಬ್ಬರಿ 1 ಗಂಟೆ 45 ನಿಮಿಷಗಳನ್ನು ಬೇಕಾಯಿತು. ಇದು ಹುಚ್ಚುತನ. ಜೊತೆಗೆ ರಸ್ತೆಗಳೆಲ್ಲವೂ ಅಗೆದು ಹೊಂಡಗಳಿಂದ ತುಂಬಿವೆ. ರಸ್ತೆ ಗುಂಡಿಗಳೇ ತುಂಬಿವೆ. ಕ್ಷಮಿಸಿ, ಆದರೆ ಬೆಂಗಳೂರಿನಲ್ಲಿ ಭಾರತದ ಅತ್ಯಂತ ಕೆಟ್ಟ ರಸ್ತೆಗಳಿವೆ ಎಂದು ನಾನು ಭಾವಿಸುತ್ತೇನೆ. ಇದು ಸುಸ್ಥಿರವಲ್ಲ, ಇದು ಮುಂದಿನ 10 ವರ್ಷಗಳಲ್ಲಿ ಪ್ರಯಾಣಿಕರಿಗೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಇದು ಸೃಷ್ಟಿ ಮಾಡಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ರಿಯಾಕ್ಟ್ ಮಾಡಿರುವ ಮೋಹನ್ ದಾಸ್ ಪೈ ಅವರು, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕೆಲವು ಪ್ರತಿಕ್ರಿಯೆಗಳು. ಇದು ಅಭಿವೃದ್ಧಿಯ ಬೆಳವಣಿಗೆಯಲ್ಲ. ಬದಲಾಗಿ ಭಾರಿ ಭ್ರಷ್ಟಾಚಾರ ಮತ್ತು ಕೆಟ್ಟ ಆಡಳಿತದ ಪರಿಣಾಮವಾಗಿದೆ. ದಯವಿಟ್ಟು ಸಹಾಯ ಮಾಡಿ ಎಂದು ಗ್ರೇಟರ್ ಬೆಂಗಳೂರು ಆಡಳಿತಕ್ಕೆ ಟ್ಯಾಗ್ ಮಾಡಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತದ ಮುಖ್ಯ ಆಯುಕ್ತರಿಗೂ ಟ್ಯಾಗ್ ಮಾಡಿದ್ದಾರೆ. ಗುಂಡಿಗಳಿಲ್ಲದೆ ನಾವು ರಸ್ತೆಗಳನ್ನು ಹೊಂದಲು ಸಾಧ್ಯವಿಲ್ಲವೇ ಎಂದು ಪ್ರಶ್ನೆ ಮಾಡಿರುವ ಅವರು, ಇದು AI ಕೆಲಸವಲ್ಲ ಆದರೆ 200 ವರ್ಷಗಳಿಗೂ ಹೆಚ್ಚು ಕಾಲ ಇದೇ ಮುಂದುವರಿದಿದೆ ಎಂದಿದ್ದಾರೆ.
ಇನ್ನು ಮೋಹನ್ ದಾಸ್ ಪೈ ಅವರ ಟ್ವೀಟ್ಗೆ ರೀಟ್ವೀಟ್ ಮಾಡಿರುವ ಮಜುಂದರ್ ಶಾ ಅವರು, ನಮ್ಮ ನಗರವನ್ನು ಸರಿಪಡಿಸಲು ಮತ್ತು ಅದನ್ನು ವಿಶ್ವ ದರ್ಜೆಯನ್ನಾಗಿ ಮಾಡಲು ರಾಜಕೀಯ ನಾಯಕತ್ವವು, ರಾಜಕೀಯ ಇಚ್ಛಾಶಕ್ತಿಯನ್ನು ಏಕೆ ತೋರಿಸುತ್ತಿಲ್ಲ ಎಂಬುದರ ಬಗ್ಗೆ ನನಗೆ ಗೊಂದಲವಿದೆ. ಬಜೆಟ್ ಹಂಚಿಕೆ ಮತ್ತು ಅನುಷ್ಠಾನದ ವಿಷಯದಲ್ಲಿ ಗಮನಹರಿಸುವುದಕ್ಕಿಂತ ಹೆಚ್ಚಿನದನ್ನು ಇದು ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications