Get Updates
Get notified of breaking news, exclusive insights, and must-see stories!

Bengaluru-Chennai Expressway: ಎಕ್ಸ್‌ಪ್ರೆಸ್‌ವೇ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ನಿತಿನ್‌ ಗಡ್ಕರಿ

ಬೆಂಗಳುರು, ಫೆಬ್ರವರಿ, 23: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಮತ್ತು ಬೆಂಗಳೂರು ಸುತ್ತಮುತ್ತಲಿನ ಪಟ್ಟಣಗಳನ್ನು ಸಂಪರ್ಕಿಸುವ ರಿಂಗ್ ರಸ್ತೆಯ ಕಾಮಗಾರಿಗಳು ಡಿಸೆಂಬರ್ 2024ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. ಹಾಗೆಯೇ ಈ ಹೆದ್ದಾರಿ ಬಗ್ಗೆ ಇನ್ನೂ ಮಹತ್ವದ ವಿಚಾರಗಳನ್ನು ಕೂಡ ಹಂಚಿಕೊಂಡಿದ್ದಾರೆ. ಹಾಗಾದರೆ ಆ ವಿಚಾರಗಳು ಯಾವುವು ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 6,200 ಕೋಟಿ ರೂಪಾಯಿಗಳ ಒಟ್ಟು 300 ಕಿಲೋ ಮೀಟರ್‌ ಉದ್ದದ 18 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ನೆಹರೂನಲ್ಲಿ 296.92 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

Bengaluru-Chennai Expressway: Important information by Nitin Gadkari on Expressway work

ಗುರುವಾರ ಇಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದು, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆ ಪೂರ್ಣಗೊಂಡರೆ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಎರಡು ಗಂಟೆಗಳಿಗೆ ಇಳಿಸಲಾಗುವುದು. ಇದರೊಂದಿಗೆ, ದೇಶದ ಎರಡು ಐಟಿ ಹಬ್‌ಗಳು ಸಂಪರ್ಕಗೊಳ್ಳುತ್ತವೆ ಮತ್ತು ಇದು ಅನೇಕ ಬಹುರಾಷ್ಟ್ರೀಯ ಕಂಪನಿಗಳು ಮತ್ತು ಕೈಗಾರಿಕೆಗಳಿಗೆ ದಾರಿ ಮಾಡಿಕೊಡಲಿದೆ.

ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂಪಾಯಿ ವೆಚ್ಚದ ಹೆದ್ದಾರಿಗಳ ಕಾಮಗಾರಿ ಪ್ರಗತಿಯಲ್ಲಿದೆ. 1.5 ಲಕ್ಷ ಕೋಟಿ ರೂಪಾಯಿ ಮೊತ್ತದ ಹೊಸ ಯೋಜನೆಗಳ ಕಾಮಗಾರಿಗಳು ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ. ಇನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಲೋಕೋಪಯೋಗಿ ಇಲಾಖೆ ಸಚಿವ ಸೈತೇಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ ಅವರು, ಭೂಸ್ವಾಧೀನ, ಅರಣ್ಯ ಇಲಾಖೆ ಅಡೆತಡೆಗಳು ಸೇರಿದಂತೆ ಸಮಸ್ಯೆಗಳನ್ನು ನಿವಾರಿಸಿ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.

ರಾಷ್ಟ್ರೀಯ ಹೆದ್ದಾರಿ-206ರ ತುಮಕೂರು-ಶಿವಮೊಗ್ಗ ಮಾರ್ಗದ ವಿಸ್ತರಣೆಯು ಜನವರಿ 2025ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳನ್ನು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯನ್ನು ಪರಿಶೀಲಿಸಿ ಕಾರ್ಯಸಾಧ್ಯವಾದ ವರದಿಯನ್ನು ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

Bengaluru-Chennai Expressway: Important information by Nitin Gadkari on Expressway work

ಮೈಸೂರು-ವಯನಾಡ್ ಎನ್‌ಎಚ್ಎಐ 212 ಅನ್ನು ಉಲ್ಲೇಖಿಸಿದ ಅವರು, ಬಂಡೀಪುರ ರಾಷ್ಟ್ರೀಯ ಉದ್ಯಾನವನ ಇರುವುದರಿಂದ ಮತ್ತು ಕಾಡು ಪ್ರಾಣಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾತ್ರಿ 9:00ರಿಂದ ಬೆಳಗ್ಗೆ 6ರವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹೀಗಾಗಿ ಜನರ ಅನುಕೂಲಕ್ಕಾಗಿ 2,500 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರು-ಮಲಪ್ಪುರಂ ಸಂಪರ್ಕ ಕಲ್ಪಿಸುವ ಪರ್ಯಾಯ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಕರ್ನಾಟಕದಲ್ಲಿ 17 ರೋಪ್‌ವೇಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರು ಮತ್ತು ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿ ನಡುವೆ ಮತ್ತು ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ರೋಪ್ ವೇಗೆ ಹಣ ಮಂಜೂರು ಮಾಡಲಾಗಿದೆ. ಬೈಂದೂರು-ರಾಣೆಬೆನ್ನೂರು ಮತ್ತು ಸಾಗರ-ಮರಕುಟುಕ ಅಗಲೀಕರಣಕ್ಕೂ ಅನುಮೋದನೆ ನೀಡಲಾಗುತ್ತದೆ ಎಂದರು.

ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೋಲಿಸಿದರೆ ಎಥೆನಾಲ್ ಬೆಲೆ ಕಡಿಮೆಯಾಗಿದೆ. ಹಸಿರು ಹೈಡ್ರೋಜನ್ ಮತ್ತು ಎಲೆಕ್ಟ್ರಿಕ್ ವಾಹನಗಳು ದೇಶದ ಭವಿಷ್ಯ. ಜಿಲ್ಲೆಯಲ್ಲಿ ಎಥೆನಾಲ್ ಉತ್ಪಾದನೆಗೆ ಸಾಕಷ್ಟು ಅವಕಾಶವಿದೆ. ಸಕ್ಕರೆ ಕಾರ್ಖಾನೆಗಳೂ ಇದನ್ನು ಉತ್ಪಾದಿಸಬಹುದು. ರಾಜ್ಯ ಸರ್ಕಾರವು ಎಥೆನಾಲ್ ಉತ್ಪಾದನೆಗೆ ಉತ್ತೇಜನ ನೀಡಬೇಕು ಮತ್ತು ಕರ್ನಾಟಕವನ್ನು ಜೈವಿಕ ಇಂಧನದ ಕೇಂದ್ರವಾಗಿ ಪರಿವರ್ತಿಸಬೇಕು ಎಂದು ಹೇಳಿದರು.

ರೈತರನ್ನು ಇಂಧನ ಉತ್ಪಾದಕರು ಎಂದು ಕರೆದ ಅವರು, ಅವರು ಎಥೆನಾಲ್ ಮತ್ತು ವಿಮಾನ ಇಂಧನದ ಉತ್ಪಾದಕರು ಎಂದು ಹೇಳಿದರು. ಹಾಗಾಗಿ ಇನ್ನು ಮುಂದೆ ಅವರು ಆಹಾರ ಮತ್ತು ಉದ್ಯೋಗದ ಉತ್ಪಾದಕರು ಮಾತ್ರವಲ್ಲದೆ ಶಕ್ತಿಯೂ ಹೌದು ಎಂದು ಅವರು ಹೇಳಿದರು.

ಕರ್ನಾಟಕದಿಂದ ಕಳುಹಿಸಲಾದ 17 ಪ್ರಮುಖ ಯೋಜನೆಗಳ ಪ್ರಸ್ತಾವನೆಗಳನ್ನು ಸಚಿವಾಲಯವು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಅನುಮೋದನೆ ನೀಡಲಾಗುವುದು ಎಂದು ಅವರು ಹೇಳಿದರು. ಕಾಶ್ಮೀರವನ್ನು ಕನ್ಯಾಕುಮಾರಿಯೊಂದಿಗೆ ಸಂಪರ್ಕಿಸುವ ಯೋಜನೆ ಇದೆ ಮತ್ತು ಇದರಿಂದಾಗಿ ಪ್ರಯಾಣದ ಸಮಯವನ್ನು ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಮಾಡುತ್ತದೆ.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬಳ್ಳಾರಿ ಸಂಸದ ದೇವೇಂದ್ರಪ್ಪ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ ಲೋಖಂಡೆ, ಪೊಲೀಸ್ ವರಿಷ್ಠಾಧಿಕಾ...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+