ಬೆಂಗಳೂರು ನೀರು ಸರಬರಾಜು ಮಂಡಳಿ ಅಗೆದಿದ್ದ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು
ಬೆಂಗಳೂರು ಏಪ್ರಿಲ್ 18: ಬೆಂಗಳೂರು ನೀರು ಸರಬರಾಜು ಮಂಡಳಿ ಅಗೆದಿದ್ದ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ದಾರುಣ ಘಟನೆ ಮಾಗಡಿ ಸಮೀಪದ ದೊಡ್ಡಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಎರಡೂವರೆ ವರ್ಷ ವಯಸ್ಸಿನ ಮಗುವಿನ ಹೆಸರು ಕಾರ್ತಿಕ್. ನೀರಿನ ಪೈಪ್ಲೈನ್ ಅಳವಡಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಹೊಂಡವನ್ನು ಅಗೆದಿತ್ತು. ಇಂದು ಬೆಳಗ್ಗೆ 10.30ರ ಸುಮಾರಿಗೆ ಕಾರ್ತಿಕ್ ಬಿಡಬ್ಲ್ಯುಎಸ್ಎಸ್ಬಿ ಪೈಪ್ಲೈನ್ ಕಾಮಗಾರಿಗಾಗಿ ಅಗೆದ ಹೊಂಡಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮಗುವಿನ ತಂದೆ ಉತ್ತರ ಪ್ರದೇಶದಿಂದ ವಲಸೆ ಬಂದಿರುವ ಹನುಮಂತ ವೃತ್ತಿಯಲ್ಲಿ ಪೇಂಟರ್ ಆಗಿದ್ದಾರೆ. ಮಗು ಮಾಗಡಿ ರಸ್ತೆಯ ದೊಡ್ಡಗೊಲ್ಲರಹಟ್ಟಿಯಲ್ಲಿ ಬೆಳಗ್ಗೆ 9.30ರ ಸುಮಾರಿಗೆ ಮನೆಯ ಹೊರಗೆ ಆಟವಾಡಲು ಹೋಗಿದೆ. ಹನುಮಂತ ಹೊರಗೆ ಕೆಲಸಕ್ಕೆ ಹೋಗಿದ್ದರು. ಬೆಳಿಗ್ಗೆ 10.30 ರ ಸುಮಾರಿಗೆ ಮಗು ಕಾರ್ತಿಕ್ ಅಗೆದ ಹೊಂಡದಲ್ಲಿ ಬಿದ್ದಿದೆ ಎಂದು ಹೆಂಡತಿಯಿಂದ ಕರೆ ಬಂದಿತು ಕೂಡಲೇ ಮನೆಗೆ ಬರುವಂತೆ ಹನುಮಂತಗೆ ಹೇಳಿದ್ದಾಳೆ. ಸ್ಥಳಕ್ಕಾಗಮಿಸಿ ಸುತ್ತಮುತ್ತಲಿನವರ ಸಹಾಯದಿಂದ ಮಗುವನ್ನು ಹೊರತೆಗೆದಾಗ ಪ್ರಜ್ಞೆ ಕಳೆದುಕೊಂಡಿತ್ತು.
ಹೊಂಡದ ಸುತ್ತಲೂ ಯಾವುದೇ ಎಚ್ಚರಿಕೆ ಫಲಕಗಳು ಅಥವಾ ಬ್ಯಾರಿಕೇಡ್ಗಳು ಇಲ್ಲದಿರುವುದು ಅಹಿತಕರ ಘಟನೆಗೆ ಕಾರಣವಾಯಿತು. ಈ ವಿಚಾರದಲ್ಲಿ ಬಿಡಬ್ಲ್ಯುಎಸ್ಎಸ್ಬಿಯ ಎಂಜಿನಿಯರ್ ಮತ್ತು ಗುತ್ತಿಗೆದಾರರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಲಾಗಿದೆ.
ತನ್ನ ಮಗುವಿನ ಸಾವಿಗೆ ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಕಾರಣ ಎಂದು ಹನುಮಂತನು BWSSB ಇಂಜಿನಿಯರ್ ಮತ್ತು ಗುತ್ತಿಗೆದಾರನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿರುವ BWSSB ನಂತಹ ನಾಗರಿಕ ಏಜೆನ್ಸಿಗಳು ಈ ಹಿಂದೆ ಇದೇ ರೀತಿಯ ಘಟನೆಗಳಿಗಾಗಿ ಟೀಕೆಗೆ ಒಳಗಾಗಿದ್ದವು. ಅವುಗಳು ಮಾಡುತ್ತಿರುವ ಕಳಪೆ ಕೆಲಸ ಮತ್ತು ನಿರ್ಲಕ್ಷ್ಯದಿಂದ ಹಲವರ ಪ್ರಾಣಕ್ಕೆ ಕುತ್ತು ಬಂದಿದೆ ಎಂಬ ಆರೋಪಗಳು ಕೇಳಿ ಬಂದಿವೆ.
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications