ಚರ್ಚ್ಸ್ಟ್ರೀಟ್ ಸ್ಫೋಟಕ್ಕೆ ಸಿಕ್ಕಿತು 12 ಪುಟದ ದಾಖಲೆ
ಬೆಂಗಳೂರು, ಏಪ್ರಿಲ್ 25 : ಬೆಂಗಳೂರಿನ ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯೊಂದನ್ನು ಎನ್ಐಎ ಕಲೆ ಹಾಕಿದೆ. ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಅಫ್ರಿದಿ ಅಲಿಯಾಸ್ ಜಾವೇದ್ ರಫೀಕ್ನಿಂದ ಈ ಸಾಕ್ಷಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) 'ಸುಲಭವಾಗಿ ಬಾಂಬ್ ತಯಾರಿಸುವುದು ಹೇಗೆ?' ಎಂಬ 12 ಪುಟಗಳ ದಾಖಲೆಯನ್ನು ವಶಕ್ಕೆ ಪಡೆದುಕೊಂಡಿದೆ. ಇದನ್ನು ಮುಂದಿಟ್ಟುಕೊಂಡೇ ಅಫ್ರಿದಿ ಬಾಂಬ್ ತಯಾರಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. [ಕೋಕೋನಟ್ ಗ್ರೋವ್ ಹೋಟೆಲ್ ನಲ್ಲಿ ಬಾಂಬ್ ಇಡಬೇಕಿತ್ತು]

2016ರ ಜನವರಿ ಕೊನೆಯ ವಾರದಲ್ಲಿ ರಾಷ್ಟ್ರೀಯ ತನಿಖಾ ದಳ ಬೆಂಗಳೂರು, ಮಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಐಎಸ್ಐಎಸ್ ಬೆಂಬಲಿಸುತ್ತಿದ್ದ ಶಂಕಿತ ಉಗ್ರರನ್ನು ಬಂಧಿಸಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಬಳಿ ರಫೀಕ್ ಅಲಿಯಾಸ್ ಅಫ್ರಿದಿಯನ್ನು ಬಂಧಿಸಲಾಗಿತ್ತು. [ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ತನಿಖೆ ಆರಂಭಿಸಿದ ಎನ್ ಐಎ]
ಈ ಎಲ್ಲಾ ಬಂಧಿತ ಉಗ್ರರ ಬಳಿ ಸುಲಭವಾಗಿ ಬಾಂಬ್ ತಯಾರಿಸುವುದು ಹೇಗೆ? ಎಂಬ 12 ಪುಟಗಳ ದಾಖಲೆ ಸಿಕ್ಕಿದೆ.
12 ಪುಟಗಳ ದಾಖಲೆಯಲ್ಲಿ ಬಾಂಬ್ ಜೋಡಣೆ, ಮನೆಯಲ್ಲೇ ಸಿಗುವ ವಸ್ತುಗಳ ಮೂಲಕ ಬಾಂಬ್ ತಯಾರಿ ಮಾಡುವುದು ಮುಂತಾದ ಮಾಹಿತಿಗಳನ್ನು ನೀಡಲಾಗಿದೆ. [Church Street ಸ್ಫೋಟಕ್ಕೆ ಒಂದು ವರ್ಷ]
ಇಂತಹ ದಾಖಲೆಗಳನ್ನೇ ವಿಶ್ವದ ವಿವಿಧ ಭಯೋತ್ಪಾದಕ ಸಂಘಟನೆಗಳು ಬಳಸುತ್ತವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮೊದಲು ಯುವಕರನ್ನು ಸೆಳೆಯುತ್ತಿದ್ದ ಉಗ್ರ ಸಂಘಟನೆಗಳು ಅವರಿಗೆ ಬಾಂಬ್ ತಯಾರಿ ಮಾಡುವ ಬಗ್ಗೆ ತರಬೇತಿ ನೀಡುತ್ತಿದ್ದವು. ಈಗ ಎಲ್ಲಾ ಸಂಘಟನೆಗಳು ಇಂತಹ ದಾಖಲೆಗಳನ್ನು ಬಳಸುತ್ತಿವೆ.
ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟದಲ್ಲಿ ಪೋಟಾಷಿಯಂ ಮತ್ತು ಸಲ್ಫರ್ ಬಳಕೆ ಮಾಡಲಾಗಿತ್ತು ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಹೇಳಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಇದನ್ನು ಸಾಕ್ಷಿ ಎಂದು ಪರಿಗಣಿಸಿದ್ದಾರೆ.
ಅಂದಹಾಗೆ 2014ರ ಡಿಸೆಂಬರ್ 28ರಂದು ಚರ್ಚ್ಸ್ಟ್ರೀಟ್ನಲ್ಲಿನ ಕೋಕೋನಟ್ ಗ್ರೋವ್ ಹೋಟೆಲ್ ಬಳಿ ರಾತ್ರಿ 8.30ರ ಸುಮಾರಿಗೆ ಬಾಂಬ್ ಸ್ಫೋಟಗೊಂಡಿತ್ತು. ಒಬ್ಬ ಮಹಿಳೆ ಈ ಸ್ಫೋಟದಿಂದಾಗಿ ಸಾವನ್ನಪ್ಪಿದ್ದರು. ಬೆಂಗಳೂರು ಪೊಲೀಸರು ಮೊದಲು ಸ್ಫೋಟದ ತನಿಖೆ ಕೈಗೊಂಡರು. ನಂತರ ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಎನ್ಐಎಗೆ ತನಿಖೆಯನ್ನು ಕೈಗೆತ್ತಿಕೊಂಡಿದೆ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications