ಚರ್ಚ್ ಸ್ಟ್ರೀಟ್ ಸ್ಫೋಟ, ಚಾರ್ಜ್ಶೀಟ್ ಸಲ್ಲಿಸಿದ ಎನ್ಐಎ
ಬೆಂಗಳೂರು, ಜುಲೈ 26 : ಬೆಂಗಳೂರಿನಲ್ಲಿ ಚರ್ಚ್ ಸ್ಟ್ರೀಟ್ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ ಚಾರ್ಜ್ಶೀಟ್ ಸಲ್ಲಿಸಿದೆ. ಈಗಾಗಲೇ ಪೊಲೀಸರ ವಶದಲ್ಲಿರುವ ಅಲಮ್ ಜೆಬ್ ಅಫ್ರಿದಿ ಸ್ಫೋಟದಲ್ಲಿ ಪಾಲ್ಗೊಂಡಿದ್ದ ಎಂದು ದೋಷಾರೋಷ ಪಟ್ಟಿಯಲ್ಲಿ ಹೇಳಲಾಗಿದೆ.
ಜನವರಿಯಲ್ಲಿ ಎನ್ಐಎ ಬೆಂಗಳೂರು, ಮಂಗಳೂರುನಲ್ಲಿ ಐಎಸ್ಐಎಸ್ ಬೆಂಲಿಸುತ್ತಿದ್ದ ಉಗ್ರನ್ನು ಬಂಧಿಸಿತ್ತು. ಆಗ
ಅಲಮ್ ಜೆಬ್ ಅಫ್ರಿದಿ ಅಲಿಯಾಸ್ ಮೊಹಮ್ಮದ್ ರಫೀಕ್ ಅಲಿಯಾಸ್ ಜಾವೀದ್ನನ್ನು ಬಂಧಿಸಿತ್ತು. ಈತನೇ ಚರ್ಚ್ ಸ್ಟ್ರೀಟ್ ಸ್ಫೋಟ ಪ್ರಕರಣದಲ್ಲಿ ಪಾಲ್ಗೊಂಡಿದ್ದ ಎಂದು ಎನ್ಐಎ ಚಾರ್ಜ್ಶೀಟ್ನಲ್ಲಿ ಹೇಳಿದೆ.[ಸ್ಫೋಟಕ್ಕೆ ಸಿಕ್ಕಿತು 12 ಪುಟದ ದಾಖಲೆ]
2014ರ ಡಿಸೆಂಬರ್ 28ರಂದು ಬೆಂಗಳೂರಿನ ಚರ್ಚ್ಸ್ಟ್ರೀಟ್ನಲ್ಲಿನ ಕೋಕೋನಟ್ ಗ್ರೋವ್ ಹೋಟೆಲ್ ಬಳಿ ರಾತ್ರಿ 8.30ರ ಸುಮಾರಿಗೆ ಬಾಂಬ್ ಸ್ಫೋಟಗೊಂಡಿತ್ತು. ಒಬ್ಬ ಮಹಿಳೆ ಈ ಸ್ಫೋಟದಿಂದಾಗಿ ಸಾವನ್ನಪ್ಪಿದ್ದರು.[ಬೆಂಗಳೂರು ಬಾಂಬ್ ಸ್ಫೋಟಕ್ಕೆ ಒಂದು ವರ್ಷ]
ಬೆಂಗಳೂರು ಪೊಲೀಸರು ಮೊದಲು ಸ್ಫೋಟದ ತನಿಖೆ ನಡೆಸುತ್ತಿದ್ದರು. ಕೆಲವು ದಿನಗಳ ನಂತರ ಹೈದರಾಬಾದ್ನ ಎನ್ಐಎ ವಿಭಾಗಕ್ಕೆ ತನಿಖೆಯನ್ನು ಹಸ್ತಾಂತರ ಮಾಡಲಾಗಿತ್ತು. ತನಿಖೆ ಪೂರ್ಣಗೊಳಿಸಿರುವ ಎನ್ಐಎ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.....

ಯಾವುದೇ ಸುಳಿವು ಸಿಕ್ಕಿರಲಿಲ್ಲ
ಮೊದಲು ಚರ್ಚ್ ಸ್ಟ್ರೀಟ್ ಸ್ಫೋಟದ ತನಿಖೆಯನ್ನು ಆರಂಭಿಸಿದ ಬೆಂಗಳೂರು ನಡೆಸಿದರು. 25 ತಂಡಗಳನ್ನು ರಚನೆ ಮಾಡಿ, ತನಿಖೆ ಆರಂಭಿಸಿದರು. ಈ ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಮತ್ತು ಹೊರ ರಾಜ್ಯಗಳಿಗೂ ಭೇಟಿ ನೀಡಿ ಸ್ಫೋಟದ ಕುರಿತು ಮಾಹಿತಿ ಸಂಗ್ರಹಿಸಲು ಪ್ರಯತ್ನ ನಡೆಸಿತು. ಆದರೆ, ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.

ತನಿಖೆ ಕೈಗೆತ್ತಿಕೊಂಡ ಎನ್ಐಎ
ಕೇಂದ್ರ ಸರ್ಕಾರದ ಸೂಚನೆಯಂತೆ ಎನ್ಐಎ ಚರ್ಚ್ಸ್ಟ್ರೀಟ್ನಲ್ಲಿ ನಡೆದ ಸ್ಫೋಟದ ತನಿಖೆ ಆರಂಭಿಸಿತು. ಸುಮಾರು 3000 ಗಂಟೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, 2 ಕೋಟಿಗೂ ಅಧಿಕ ಪೋನ್ ಕರೆಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಿ ಎನ್ಐಎ ತನಿಖೆ ನಡೆಸಿತು.

ಸಿಕ್ಕಿಬಿದ್ದ ಆರೋಪಿ
2016ರ ಜನವರಿಯಲ್ಲಿ ಎನ್ಐಎ ಬೆಂಗಳೂರು, ಮಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಐಎಸ್ಐಎಸ್ ಬೆಂಬಲಿಸುತ್ತಿದ್ದ ಶಂಕಿತ ಉಗ್ರರನ್ನು ಬಂಧಿಸಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಬಳಿ ರಫೀಕ್ ಅಲಿಯಾಸ್ ಅಫ್ರಿದಿಯನ್ನು ಬಂಧಿಸಲಾಗಿತ್ತು.

ತಪ್ಪೊಪ್ಪಿಕೊಂಡ ರಫೀಕ್
ಎನ್ಐಎ ಅಧಿಕಾರಿಗಳು ರಫೀಕ್ ವಿಚಾರಣೆ ನಡೆಸಿದಾಗ ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟದಲ್ಲಿ ತಾನು ಭಾಗಿಯಾದ ಬಗ್ಗೆ ಆತ ಹೇಳಿಕೊಂಡಿದ್ದ. ಕೋಕೋನಟ್ ಗ್ರೋವ್ ಹೋಟೆಲ್ವೊಳಗೆ ಬಾಂಬ್ ಇಡಲು ರಫೀಕ್ ಪ್ರಯತ್ನ ನಡೆಸಿದ್ದ. ಆದರೆ, ಹೋಟೆಲ್ ಸಿಬ್ಬಂದಿಗಳಿಂದಾಗಿ ಅದು ಸಾಧ್ಯವಾಗಿರಲಿಲ್ಲ. ಆದ್ದರಿಂದ ಹೋಟೆಲ್ ಗೇಟ್ ಬಳಿ ಇಟ್ಟಿದ್ದ.

5 ವರ್ಷದಿಂದ ನಾಪತ್ತೆಯಾಗಿದ್ದ
ಎನ್ಐಎ ರಫೀಕ್ಗಾಗಿ ಸುಮಾರು 5 ವರ್ಷಗಳಿಂದ ಹುಡುಕಾಟ ನಡೆಸುತ್ತಿತ್ತು. ರಫೀಕ್ ಬಗ್ಗೆ ಮಾಹಿತಿ ನೀಡಿದವರಿಗೆ 3 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿತ್ತು. ಮೂರು ವರ್ಷಗಳಿಂದ ಬೆಂಗಳೂರು ನಗರದ ಹೊರವಲಯದಲ್ಲಿ ವಾಸವಾಗಿದ್ದ ರಫೀಕ್ ಎಸಿ ರಿಪೇರಿ ಮಾಡಿಕೊಂಡು ಜೀವನ ನಡೆಸುತ್ತಿದ್ದ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications