"ಬೆಂಗಳೂರು ಸಿಟಿ ದಿಶಾಂಕ್" – ನಿಮ್ಮ ನಗರ ಪಾಲಿಕೆ, ವಲಯ, ವಾರ್ಡ್, ವಿಧಾನಸಭಾ ಕ್ಷೇತ್ರದ ಸಂಪೂರ್ಣ ವಿವರ!
ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಾಗಿ, ಇದೀಗ ಗ್ರೇಟರ್ ಬೆಂಗಳೂರು ಆಡಳಿತ ಪ್ರಾರಂಭವಾದ ಮೇಲೆ ಸಾರ್ವಜನಿಕರಲ್ಲಿ ಕೆಲವೊಂದು ಗೊಂದಲಗಳು ಇವೆ. ಇದೀಗ ಈ ಗೊಂದಲಗಳನ್ನು ಕಡಿಮೆ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಆಡಳಿತ ಮುಂದಾಗಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ ಪ್ರದೇಶ ಹಾಗೂ ವಾರ್ಡ್ಗಳ ವಿವರ ಸೇರಿದಂತೆ ಹಲವು ಪ್ರಮುಖ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.
"ಬೆಂಗಳೂರು ಸಿಟಿ ದಿಶಾಂಕ್" - ನಿಮ್ಮ ನಗರ ಪಾಲಿಕೆ, ವಲಯ, ವಾರ್ಡ್, ವಿಧಾನಸಭಾ ಕ್ಷೇತ್ರ ಮತ್ತು ನಗರದ ಎಲ್ಲಾ ಜಿ.ಐ.ಎಸ್ ಮಾಹಿತಿಯನ್ನು ಪಡೆದುಕೊಳ್ಳುವ ವಿನೂತನ ವ್ಯವಸ್ಥೆಯನ್ನು ಗ್ರೇಟರ್ ಬೆಂಗಳೂರು ಆಡಳಿತವು ಮಾಡಿದೆ. ಇದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಾದ ಮೇಲೆ ಮೂಡಿದ್ದ ಗೊಂದಲಗಳಿಗೆ ತೆರೆ ಬಿದ್ದಂತೆ ಆಗಿದೆ. ಜನ ತಮ್ಮ ಮೊಬೈಲ್ ಅಪ್ಲಿಕೇಷನ್ಗಳ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳು ಸೇರಿದಂತೆ "ಬೆಂಗಳೂರು ಸಿಟಿ ದಿಶಾಂಕ್" ಮೊಬೈಲ್ ತಂತ್ರಾಂಶವನ್ನು ಬಿಡುಗಡೆ ಮಾಡಲಾಗಿದೆ.
ಇದು ಜಿ.ಐ.ಎಸ್ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಜಿಬಿಎ, 05 ನಗರ ಪಾಲಿಕೆಗಳು, ವಲಯ, ವಿಧಾನಸಭಾ ಕ್ಷೇತ್ರ ಹಾಗೂ ವಾರ್ಡ್(ಹಳೆಯ 198 ವಾರ್ಡ್ ಗಳು)ಗಳ ಅಧಿಕೃತ ಗಡಿಗಳನ್ನು ವೀಕ್ಷಿಸುವುದಕ್ಕೆ ಸಹಾಯವನ್ನು ಮಾಡಲಿದೆ ಎಂದು ಗ್ರೇಟರ್ ಬೆಂಗಳೂರು ಆಡಳಿತದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಮತ್ತಷ್ಟು ವಿವರಗಳುಳ್ಳ ಜಿ.ಐ.ಎಸ್ ಮಾಹಿತಿಯನ್ನು ಸೇರಿಸಲಾಗುವುದು ಎಂದೂ ಗ್ರೇಟರ್ ಬೆಂಗಳೂರು ಆಡಳಿತದ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
Google Play Store ಲಿಂಕ್:
https://play.google.com/store/apps/details?id=com.dishaank
Apple App Store ಲಿಂಕ್:
https://apps.apple.com/in/app/bengaluru-city-dishaank/id6752650304
ಈ ವಿಷಯವನ್ನು ಗ್ರೇಟರ್ ಬೆಂಗಳೂರು ಆಡಳಿತದ ಮಾಹಿತಿ ತಂತ್ರಜ್ಞಾನ(IT) ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು ತಿಳಿಸಿದ್ದಾರೆ.
400 ರಿಂದ 450 ವಾರ್ಡ್ ರಚನೆ: ಇನ್ನು ಬೆಂಗಳೂರಿನಲ್ಲಿ ಗ್ರೇಟರ್ ಆಡಳಿತ ಆಗುವುದಕ್ಕೂ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಒಟ್ಟು 198 ವಾರ್ಡ್ಗಳು ಹಾಗೂ 8 ವಲಯಗಳು ಇದ್ದವು. ಅಲ್ಲದೇ ಬೆಂಗಳೂರಿನಲ್ಲಿ ಇದೀಗ ಗ್ರೇಟರ್ ಬೆಂಗಳೂರು ಆಡಳಿತದ ಭಾಗವಾಗಿ ಐದು ಹೊಸ ನಗರ ಪಾಲಿಕೆಗಳನ್ನು ರಚನೆ ಮಾಡಲಾಗಿದ್ದು. ಇದೀಗ ಬೆಂಗಳೂರಿನಲ್ಲಿ 400 ರಿಂದ 450 ವಾರ್ಡ್ಗಳ ರಚನೆ ಆಗಲಿದೆ ಎಂದು ರಾಜ್ಯ ಸರ್ಕಾರವು ಹೇಳಿದೆ. ಈ ವಾರ್ಡ್ಗಳಿಗೆ ಹೊಸ ಪ್ರದೇಶಗಳು ಸೇರ್ಪಡೆ ಆಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications