ಸಚಿವರು ಬಂದರು, ಆಡಳಿತ ಬದಲಾತು: ಕಸ ಹಾಗೇ ಉಳಿತು
ಬೆಂಗಳೂರು, ನವೆಂಬರ್. 20: ಬೆಂಗಳೂರು ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಮತ್ತೆ ಉಲ್ಬಣಿಸುತ್ತಿದೆ. ಬಿಬಿಎಂಪಿ ಆಡಳಿತ ಬದಲಾದರೂ, ಬೆಂಗಳೂರು ಅಭಿವೃದ್ಧಿಗೆ ಹೊಸ ಸಚಿವರು ಬಂದರೂ ಪರಿಸ್ಥಿತಿಲ್ಲಿ ಯಾವ ಬದಲಾವಣೆ ಕಂಡುಬರುತ್ತಿಲ್ಲ.
ನಾಲ್ಕೈದು ದಿನಗಳಿಂದ ರಸ್ತೆ ಪಕ್ಕದಲ್ಲಿ ಕೊಳೆಯುತ್ತಿರುವ ತ್ಯಾಜ್ಯ, ಮಳೆಗೆ ಗಾಳಿಗೆ ರಸ್ತೆಗೆ ಬರುವ ಪ್ಲಾಸ್ಟಿಕ್ ಕವರ್ ಗಳು, ಸಹಿಸಲಾರದ ವಾಸನೆ, ಜಾರುಬಂಡಿಯಂತಾದ ರಸ್ತೆಗಳು ಸದ್ಯದ ಬೆಂಗಳೂರು ನಗರದ ಚಿತ್ರಣ.[ಬೆಂಗಳೂರಿನ ರಸ್ತೆಗಳ ತುಂಬಾ ರಾಶಿ-ರಾಶಿ ಕಸ]
ಜಯನಗರ, ವಿದ್ಯಾಪೀಠ, ಎನ್ ಆರ್ ಕಾಲೋನಿ, ಶ್ರೀನಿವಾಸ ನಗರ, ಗಿರಿನಗರ, ಹನುಮಂತನಗರ ಎಲ್ಲ ಕಡೆಯೂ ತ್ಯಾಜ್ಯಗಳದ್ದೇ ಕಾರುಬಾರು. ಪೌರ ಕಾರ್ಮಿಕರು ಶ್ರಮವಹಿಸಿ ಕಸ ವಿಲೇವಾರಿ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಲೋಡ್ ಆದ ಕಸ ತುಂಬಿದ ಲಾರಿಗಳು ತೆರವಿಗೆ ಬೇರೆಡೆಗೆ ತೆರಳದೇ ಇರುವುದು ಸಮಸ್ಯೆಯಾಗಿ ಮಾಪರ್ಟ್ಟಿದೆ. ಸದ್ಯದ ಕಸದ ಬೆಂಗಳೂರಿನಲ್ಲಿ ಒಂದು ರೌಂಡ್ ಹಾಕಿಕೊಂಡು ಬನ್ನಿ...

ಜಯನಗರ 3ನೇ ಬ್ಲಾಕ್
ಜಯನಗರದ 3ನೇ ಬ್ಲಾಕ್ ನಲ್ಲೂ ಕಸ ಸಂಗ್ರಹಣೆಯಾಗಿದೆ. ಕಾಲೇಜು ವಿದ್ಯಾರ್ಥಿಗಳು ಕಸದ ಸಮೀಪವೇ ತೆರಳುತ್ತಿದ್ದ ದೃಶ್ಯ ಕಣ್ಣಿಗೆ ಬಿದ್ದಿದ್ದು ಹೀಗೆ.

ಭುವನೇಶ್ವರಿ ನಗರ
ಕತ್ತರಿಗುಪ್ಪೆ ಸಮೀಪದ ಭುವನೇಶ್ವರಿ ನಗರದಲ್ಲೂ ಕಸ ಸಂಗ್ರಹಣೆಯಾಗಿದ್ದು ಪೌರ ಕಾರ್ಮಿಕರು ವಿಲೇವಾರಿಗೆ ಹರಸಾಹಸ ಪಡುತ್ತಿದ್ದಾರೆ.

ರಸ್ತೆಯಲ್ಲೇ ಕಸ
ಮನೆ ಮನೆಗೆ ಬರುತ್ತಿದ್ದ ಕಸದ ಗಾಡಿಗಳು ತಿರುಗಾಟ ನಿಲ್ಲಿಸಿವೆ. ಪರಿಣಾಮ ಪ್ರತಿ ಮನೆಯ ಮುಂದೆ, ಖಾಲಿ ಸೈಟ್ ಗಳಲ್ಲಿ ಕಸ ಸಂಗ್ರಹವಾಗಿದೆ. ಜನರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಹೆಚ್ಚಿದ ಸಾಂಕ್ರಾಮಿಕ ರೋಗ ಭೀತಿ
ನಗರದಲ್ಲಿ ಜಡಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು ಮಲೇರಿಯಾ, ಕಾಲರಾ, ಟೈಫಾಯ್ಡ್, ವೈರಾಣು ಜ್ವರ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಭೀತಿ ವ್ಯಕ್ತವಾಗಿದೆ. ಆರೋಗ್ಯ ಇಲಾಖೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವೂ ಹೆಚ್ಚಿದೆ.

ಬೀದಿನಾಯಿ ಕಾಟ
ಕಸದ ಪರಿಣಾಮ ಬೀದಿ ನಾಯಿಗಳ ಕಾಟವೂ ಹೆಚ್ಚಿದೆ. ಕೆಲ ರಸ್ತೆಗಳಲ್ಲಿ ರಾತ್ರಿ ಓಡಾಡುವುದು ಮತ್ತಷ್ಟು ದುರ್ಗಮವಾಗಿ ಪರಿಣಮಿಸಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications