ಬೆಂಗಳೂರು: ಕಳಪೆ ಕಾಮಗಾರಿಗೆ ಬ್ರೇಕ್, ಗುಣಮಟ್ಟ ಸಹಿತ ಕಾಮಗಾರಿ ಪೂರ್ಣಗೊಳಿಸಲು ಖಡಕ್ ಸೂಚನೆ
ಬೆಂಗಳೂರು: ಬೆಂಗಳೂರಿನಲ್ಲಿ ನಿತ್ಯ ಒಂದಲ್ಲಾ ಒಂದು ಕಡೆಗಳಲ್ಲಿ ಕಾಮಗಾರಿ ನಡೆಯುತ್ತಿರುತ್ತವೆ. ಆದರೆ ಯೋಜನೆ ಪೂರ್ಣಗೊಂಡರೂ ಸಹಿತ ಅದರಲ್ಲಿ ಗುಣಮಟ್ಟ ಕಾಯ್ದುಕೊಳ್ಳದೇ ಹಿನ್ನೆಲೆಯಲ್ಲಿ ಕೆಲವೇ ವಾರಗಳಲ್ಲಿ ರಸ್ತೆ, ರಸ್ತೆಗುಂಡಿಗಳು ಸುಧಾರಿಸದೇ ಮತ್ತದೇ ಹಳೆ ಸ್ಥಿತಿಗೆ ಮರಳುತ್ತಿವೆ. ಹೀಗಾಗಿದಂತೆ ತಡೆಯಲು ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಸೋಮವಾರ ಇಂಜಿನಿಯರಿಂಗ್ ಇಲಾಖೆಗೆ ಸಂಬಂಧಿಸಿದಂತೆ ಸರ್ಕಾರದ ವಿವಿಧ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಈ ವೇಳೆ ಅವರು ಕರ್ನಾಟಕ ಸರ್ಕಾರದ ಅನುದಾನದಡಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ದಿ ಕಾರ್ಯಕ್ರಮದಡಿ ಅನುಮೋದನೆಗೊಂಡಿರುವ ಎಲ್ಲಾ ಪ್ಯಾಕೇಜ್ ಕಾಮಗಾರಿಗಳನ್ನು ಕೂಡಲೇ ಆರಂಭಿಸಬೇಕು.

ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಬೇಡ
ಸಿವಿಲ್ ಕಾಮಗಾರಿ ಪೂರ್ಣಗೊಳಿಸಿದ ನಂತರವೇ ಡಾಂಬರೀಕರಣ ಕಾಮಗಾರಿ ಕೈಗೊಳ್ಳಬೇಕು. ಆದರೆ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೇ ಕಾಮಗಾರಿಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿರುವ ಎಲ್ಲಾ ಪರಿತ್ಯಾಜಿತ ಸ್ವತ್ತುಗಳನ್ನು ಈ ಕೂಡಲೇ ನಗರ ಪಾಲಿಕೆ ವಶಕ್ಕೆ ಪಡೆಯಲು ಅವರು ಆದೇಶಿಸಿದರು.
ಇನ್ನೂ ಹೂಡಿ ಜಂಕ್ಷನ್ ಬಳಿ ಪಾದಚಾರಿ ಒತ್ತುವರಿಯಾಗಿದ್ದು, ಗಮನಿಸಿ ಕೂಡಲೇ ತೆರವುಗೊಳಿಸಬೇಕು. ಸಾದರಮಂಗಲ ಗ್ರಾಮದ ಬಳಿ ಒಣ ಕಸ ಸಂಗ್ರಹಣ ಕೇಂದ್ರಕ್ಕೆ ಜಾಗ ಅಂತಿಮಗೊಳಿಸಲು ಸೂಚಿಸಿದರು. ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಹೊರ ವರ್ತುಲ ರಸ್ತೆಗಳಲ್ಲಿನ ಪ್ರವೇಶ ಮತ್ತು ನಿರ್ಗಮ ದ್ವಾರಗಳ ಸ್ಥಳಾಂತರವನ್ನು ಸಂಚಾರಿ ಪೊಪ್ರಮುಖ ರಸ್ತೆಗಳಲ್ಲಿ ಸ್ಕೈವಾಕ್
ಸಂಚಾರ ದಟ್ಟಣೆ ತಗ್ಗಿಸಲು ಬಸ್ ಶಲ್ಟರ್ ಗಳ ಸ್ಥಳಾಂತರಿಸುವ ಅಗತ್ಯವಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ ರಸ್ತೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಸ್ಕೈವಾಕ್ ನಿರ್ಮಿಸಬೇಕು. ಇದರಿಂದ ಸಾರ್ವಜನಿಕ ಸಂಚಾರ ಸುಗಮವಾಗುತ್ತದೆ. ಸ್ವಚ್ಚ ಸರ್ವೇಕ್ಷಣ ಅಭಿಯಾನದಡಿ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿ ಸೌಂದರ್ಯೀಕರಣ ಗೊಳಿಸಲು ಸ್ವಯಂ ಸೇವಕರುಗಳು, ಎನ್ ಜಿ ಓ, ವಿದ್ಯಾರ್ಥಿಗಳು, ಸ್ವಚ್ಚತಾ ಕಾರ್ಮಿಕರನ್ನೊಳಗೊಂಡ ತಂಡ ರಚಿಸುವಂತೆ ತಿಳಿಸಿದರು. ಒಟ್ಟಾರೆ ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ನಿರ್ದೇಶಿಸಿದರು.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications