ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ ಸಂಪೂರ್ಣ ಸೋತ ಬೆಂಗಳೂರು
ಬೆಂಗಳೂರು, ಫೆಬ್ರವರಿ 01 : ಹೇಳಿಕೊಳ್ಳೋಕೆ ಮಾತ್ರ ಐಟಿ ಹಬ್! ಆದರೆ ಬೆಂಗಳೂರಿಗೆ ಸ್ಮಾರ್ಟ್ ಸಿಟಿ ಅನ್ನಿಸಿಕೊಳ್ಳಲು ಯಾವುದೇ ಅರ್ಹತೆಯಿಲ್ಲ. ಏಕಂದ್ರೆ, ಇಲ್ಲಿಯ ನಾಗರಿಕರು ನಿಯತ್ತಾಗಿ ಆಸ್ತಿ ತೆರಿಗೆ ಕಟ್ಟುವುದಿಲ್ಲ, ಸರಕಾರ ಕೂಡ ಅಷ್ಟೇ ಮುತುವರ್ಜಿಯಿಂದ ತೆರಿಗೆ ಸಂಗ್ರಹಿಸಿಲ್ಲ!
ಸರಕಾರ ಮಾಡಿರುವ ಆರ್ಥಿಕ ಸಮೀಕ್ಷೆಯ ಪ್ರಕಾರ, ಬೆಂಗಳೂರಿನಲ್ಲಿ ಶೇ.5ರಿಂದ ಶೇ.20ರವರೆಗೆ ಮಾತ್ರ ಆಸ್ತಿ ತೆರಿಗೆ ಸಂಗ್ರಹವಾಗುತ್ತಿದೆ. ಇನ್ನು ಮೂಲಸೌಕರ್ಯಗಳೆಲ್ಲ ಸಿಗಬೇಕು, ಎಲ್ಲ ಸವಲತ್ತುಗಳೂ ಬೇಕು. ಆದರೆ, ಆಸ್ತಿ ತೆರಿಗೆ ಕಟ್ಟುವುದಂದ್ರೆ ಬೇಡ! ಈ ಸಮೀಕ್ಷೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು.

ಇನ್ನು ಬುಧವಾರ ಮಂಡಿಸಿರುವ ಬಜೆಟ್ಟಿನಲ್ಲಿ ಅರುಣ್ ಜೇಟ್ಲಿ ಅವರು ಒಂದು ಮುತ್ತಿನಂಥ ಮಾತು ಹೇಳಿದ್ದಾರೆ. ಅದೇನೆಂದರೆ, "ನಮ್ಮದು ತೆರಿಗೆಗಳ್ಳರ ಸಮಾಜ. ಹೆಚ್ಚು ಜನರು ತೆರಿಗೆ ಕಟ್ಟದಿದ್ದರೆ ಏನಾಗುತ್ತದೆಂದರೆ, ಇದರ ಭಾರ ಪ್ರಾಮಾಣಿಕವಾಗಿ ತೆರಿಗೆ ಕಟ್ಟುವ ಜನರ ಮೇಲೆ ಬೀಳುತ್ತದೆ."
ಇದು ಬೆಂಗಳೂರೊಂದರ ಹಣಬರಹ ಮಾತ್ರವಲ್ಲ, ಪಿಂಕ್ ಸಿಟಿ ಜೈಪುರದ್ದೂ ಇದೇ ಕಥೆ. ಎರಡೂ ನಗರಗಳಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ, ಜನರು ತೆರಿಗೆ ಕಟ್ಟುವಂತೆ ಮಾಡುವಲ್ಲಿ ಪಾಲಿಕೆಗಳು ಸಂಪೂರ್ಣ ವಿಫಲವಾಗಿವೆ. ಇದರರ್ಥ, ಶೇ.80ರಷ್ಟು ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ ವಿಫಲವಾಗಿವೆ.
ಸೆಟಲೈಟ್ ಮೂಲಕ ಫೋಟೋ ತೆಗೆದುಕೊಳ್ಳುವ ಮೂಲಕ ಈ ಅಂಕಿಅಂಶಗಳಿಗೆ ಬರಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಸಾಂದ್ರತೆ, ಕಟ್ಟಿರುವ ಕಟ್ಟಡದ ಅಳತೆ, ಸಂಗ್ರಹಿಸಲಾಗಿರುವ ತೆರಿಗೆಯನ್ನು ಅಧ್ಯಯನ ಮಾಡಿದ ಮೇಲೆ ಆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಬಿಬಿಎಂಪಿ ಮತ್ತು ಜನರು ಮನಸ್ಸು ಮಾಡಿದರೆ ಈಗ ಸಂಗ್ರವಾಗುತ್ತಿರುವ ಹಣಕ್ಕಿಂತ ನಾಲ್ಕೈದು ಪಟ್ಟು ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸುವ ಸಾಧ್ಯತೆಯಿದೆ ಎಂದು ಆರ್ಥಿಕ ಸಮೀಕ್ಷೆ ತಿಳಿಸಿದೆ. ಅಕ್ರಮ ಸಕ್ರಮ ಕಟ್ಟುನಿಟ್ಟಾಗಿ ಜಾರಿಯಾದರೆ ಈ ಸಮಸ್ಯೆಗೆ ಪರಿಹಾರ ಸಿಕ್ಕೀತು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications