ಬೆಂಗಳೂರು ಕಾಲೇಜಿನಲ್ಲಿ ಸೀನಿಯರ್ ಮೇಲೆ ಅ*ತ್ಯಾಚಾರ ಎಸಗಿ ಮಾತ್ರೆ ಬೇಕಾ? ಎಂದ ಜ್ಯೂನಿಯರ್
ಬೆಂಗಳೂರಿನ ಪ್ರತಿಷ್ಠಿತ ಕಾಲೇಜ್ ಕ್ಯಾಂಪಸ್ನಲ್ಲೇ ಘೋರ ದುರಂತ ನಡೆದಿದೆ. ವಿದ್ಯಾರ್ಥಿಯೊಬ್ಬ ಸೀನಿಯರ್ ವಿದ್ಯಾರ್ಥಿನಿ ಮೇಲೆ ಕಾಲೇಜು ಆವರಣದಲ್ಲೇ ಅತ್ಯಾ*ಚಾರ ಎಸಗಿರುವ ಕೃತ್ಯ ವರದಿಯಾಗಿದೆ. ಜೂನಿಯರ್ ವಿದ್ಯಾರ್ಥಿಯೊಬ್ಬ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತನ್ನ ಸೀನಿಯರ್ ವಿದ್ಯಾರ್ಥಿನಿಯ ಮೇಲೆ ಅ*ತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಈ ಘಟನೆ ಕಂಡು ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಈ ಕೃತ್ಯ ನಡೆದಿದೆ. ತನ್ನದೇ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯ ಮೇಲೆ ಅ*ತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿ ಜೀವನ್ ಗೌಡ ಎಂಬ ವಿದ್ಯಾರ್ಥಿಯನ್ನ ಹನುಮಂತನಗರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಿ.ಟೆಕ್ ವಿದ್ಯಾರ್ಥಿನಿ ಮೇಲೆ ಈ ದೌರ್ಜನ್ಯ ನಡೆದಿದ್ದು, ಮೂರು ತಿಂಗಳಿನಿಂದ ಆರೋಪಿ ಜೊತೆ ಪರಿಚಯವಿತ್ತು ಎನ್ನಲಾಗಿದೆ. ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಒಂದೇ ವಿಭಾಗಕ್ಕೆ ಸೇರಿದವರಾಗಿದ್ದು, ಕ್ಯಾಂಪಸ್ ಆವರಣದಲ್ಲೇ ಈ ಘಟನೆ ನಡೆದಿದೆ.

ಟಾಯ್ಲೆಟ್ಗೆ ಎಳೆದೊಯ್ದು ಕೃತ್ಯ!
ಇತ್ತೀಚೆಗೆ ಕಾಲೇಜಿನಲ್ಲಿ ಊಟದ ಬ್ರೇಕ್ ವೇಳೆ ಆರೋಪಿ ಈ ವಿದ್ಯಾರ್ಥಿನಿಗೆ ಹಲವು ಬಾರಿ ಫೋನ್ ಮಾಡಿದ್ದ. ಆರ್ಕಿಟೆಕ್ಚರ್ ಬ್ಲಾಕ್ ಬಳಿ ಭೇಟಿಯಾಗೋಣ ಬಾ ಎಂದು ಕರೆದಿದ್ದ. ಅದರಂತೆ ವಿದ್ಯಾರ್ಥಿನಿ ಅಲ್ಲಿಗೆ ಬಂದಾಗ ಬಲವಂತವಾಗಿ ಮುತ್ತು ಕೊಟ್ಟಿದ್ದ, ನಂತರ ಪುರುಷರ ಶೌಚಾಲಯಕ್ಕೆ ಎಳೆದುಕೊಂಡು ಹೋಗಿ ಬಾಗಿಲು ಲಾಕ್ ಮಾಡಿಕೊಂಡು, ಮಧ್ಯಾಹ್ನ 1.30ರ ಸಮಯದಲ್ಲಿ ಅ*ತ್ಯಾಚಾರ ಎಸಗಿದ್ದಾನೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಅತ್ಯಾ*ಚಾರದ ನಂತರ ವಿದ್ಯಾರ್ಥಿನಿಗೆ ಫೋನ್ ಮಾಡಿ "ಮಾತ್ರೆ ಬೇಕಾ" ಎಂದು ಕೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬಳಿಕ ಯುವತಿ ತನ್ನ ಸ್ನೇಹಿತರಿಗೆ ವಿಚಾರ ತಿಳಿಸಿದ್ದು, ಈ ಘಟನೆ ನಡೆದ ಐದು ದಿನಗಳ ಬಳಿಕ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಅಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇಲ್ಲದಿರುವ ಕಾರಣ ತನಿಖೆಗೆ ಸಮಸ್ಯೆಯಾಗಿದೆ. ಪೊಲೀಸರು ವಿಧಿವಿಜ್ಞಾನ ಪರೀಕ್ಷೆಗಳನ್ನು ಪ್ರಾರಂಭಿಸಿದ್ದಾರೆ.
ಮಹಿಳಾ ಆಯೋಗಕ್ಕೆ ಅಶೋಕ್ ಪತ್ರ
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಕೇವಲ 4 ತಿಂಗಳಲ್ಲಿ ಹುಡುಗಿಯರ ಮೇಲೆ 979 ಲೈಂಗಿಕ ದೌರ್ಜನ್ಯಗಳು. ಬೆಂಗಳೂರಿನಲ್ಲೇ 114ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಕಾಂಗ್ರೆಸ್ ಸರ್ಕಾರದಿಂದಾಗಿ ನಮ್ಮ ಮಹಿಳೆಯರು ಮತ್ತು ಮಕ್ಕಳು ಭಯದಲ್ಲಿ ಬದುಕುತ್ತಿದ್ದಾರೆ. ನಾನು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ತುರ್ತು ಪತ್ರ ಬರೆದಿದ್ದಾರೆ. ಕರ್ನಾಟಕದಲ್ಲಿ ನಮಗೆ ಈಗ ಸತ್ಯಶೋಧನಾ ತಂಡ ಬೇಕು ಎಂದು ಆಗ್ರಹಿಸಿದ್ದಾರೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications