ಬೆಂಗಳೂರಿನ ಈ ಭಾಗದ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿ ಸರ್ವೇ, ಏಕಕಾಲಕ್ಕೆ 100ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿ
ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಆಸ್ತಿ ಹಾಗೂ ವಾಣಿಜ್ಯ ಸ್ವತ್ತುಗಳಿಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಿದೆ. ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾಗಿರುವ ಇಂದಿರಾನಗರ 100 ಅಡಿ ರಸ್ತೆಯ ಹಾಗೂ ಅಕ್ಕಪಕ್ಕದಲ್ಲಿನ ರಸ್ತೆಯಲ್ಲಿನ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆ ಸರ್ವೇ ಕಾರ್ಯಕ್ಕೆ ಮುಂದಾಗಿದೆ.
ಇಂದಿರಾನಗರ 100 ಅಡಿ ರಸ್ತೆಯ ಹಾಗೂ ಅಕ್ಕಪಕ್ಕದಲ್ಲಿನ ರಸ್ತೆಯಲ್ಲಿನ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆ ಸರ್ವೇ ಇಂದಿನಿಂದ ಪ್ರಾರಂಭವಾಗುತ್ತಿದೆ. ಕೇಂದ್ರ ನಗರ ಪಾಲಿಕೆಯ ಎಲ್ಲಾ ಕಂದಾಯ ವಿಭಾಗಗಳ 9 ಕಂದಾಯ ಅಧಿಕಾರಿಗಳ ನೇತೃತ್ವದ ತಂಡದಿಂದ 100 ಕ್ಕೂ ಹೆಚ್ಚು ಸಿಬ್ಬಂದಿಯಿಂದ ಏಕಕಾಲಕ್ಕೆ ಪರಿಶೀಲನೆ ಕಾರ್ಯ ನಡೆಯಲಿದೆ ಎಂದು ಹೇಳಲಾಗಿದೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಂದಾಯ ಅಧಿಕಾರಿ, ಸಿ.ವಿ.ರಾಮನ್ ನಗರ ಹಾಗೂ ಕಂದಾಯ ಅಧಿಕಾರಿ, ಶಾಂತಿನಗರ ವಿಭಾಗ ವ್ಯಾಪ್ತಿಯಲ್ಲಿರುವ ಇಂದಿರಾನಗರ, 100 ಅಡಿ ರಸ್ತೆಯ ಹಾಗೂ ಅಕ್ಕಪಕ್ಕದಲ್ಲಿನ ರಸ್ತೆಗೆ ಹೊಂದಿಕೊಂಡಿರುವ ಎಲ್ಲಾ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆಗೆ ಸಂಬಂಧಿಸಿದಂತೆ ನವೆಂಬರ್ 14ರಂದು ಬೆಳಿಗ್ಗೆ 10ಗಂಟೆಗೆ ಸರ್ವೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ಕಂದಾಯ ಅಧಿಕಾರಿಗಳ ನೇತೃತ್ವದ 9 ತಂಡಗಳ ಸುಮಾರು 100 ಕ್ಕೂ ಹೆಚ್ಚು ಅಧಿಕಾರಿ / ಸಿಬ್ಬಂದಿಯಿಂದ ಇಂದಿರಾನಗರ, 100 ಅಡಿ ರಸ್ತೆ, ದೊಮ್ಮಲೂರು ಬ್ರಿಡ್ಜ್ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆ ಕಾರ್ಯ ನಡೆಸಲಾಗುತ್ತದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ.
ಏಕಕಾಲಕ್ಕೆ ಸರ್ವೇ ಕಾರ್ಯಾಚರಣೆ
ಇನ್ನು ಈ ಪರಿಶೀಲನೆಯು ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು, ಮೌಲ್ಯಮಾಪಕರು, ಕಂದಾಯ ಪರಿವೀಕ್ಷಕರು, ಕಂದಾಯ ವಸೂಲಿಗಾರರು, ವಾಣಿಜ್ಯ ಸ್ವತ್ತುಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ಸ್ಥಳದಲ್ಲಿ ಹಾಜರಿದ್ದು, ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆ ಸರ್ವೇ ಕಾರ್ಯ ನಡೆಸಲಿದ್ದಾರೆ.
ಅಲ್ಲದೇ ಈ ಸರ್ವೇ ಕಾರ್ಯಕ್ಕೆ ನೆರವಾಗಲು ನಗರ ಯೋಜನೆ, ಆರೋಗ್ಯ ವೈದ್ಯಾಧಿಕಾರಿ, ಕಾರ್ಯಪಾಲಕ ಎಂಜಿನಿಯರರು, ವಾರ್ಡ್ಗಳ ಮಾರ್ಷಲ್ಸ್ ಗಳ ಸಮನ್ವಯದೊಂದಿಗೆ ನಡೆಯಲಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications