ಬೆಂಗಳೂರಿನ ಈ ಭಾಗದ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿ ಸರ್ವೇ, ಏಕಕಾಲಕ್ಕೆ 100ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿ
ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಆಸ್ತಿ ಹಾಗೂ ವಾಣಿಜ್ಯ ಸ್ವತ್ತುಗಳಿಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಿದೆ. ಬೆಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾಗಿರುವ ಇಂದಿರಾನಗರ 100 ಅಡಿ ರಸ್ತೆಯ ಹಾಗೂ ಅಕ್ಕಪಕ್ಕದಲ್ಲಿನ ರಸ್ತೆಯಲ್ಲಿನ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆ ಸರ್ವೇ ಕಾರ್ಯಕ್ಕೆ ಮುಂದಾಗಿದೆ.
ಇಂದಿರಾನಗರ 100 ಅಡಿ ರಸ್ತೆಯ ಹಾಗೂ ಅಕ್ಕಪಕ್ಕದಲ್ಲಿನ ರಸ್ತೆಯಲ್ಲಿನ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆ ಸರ್ವೇ ಇಂದಿನಿಂದ ಪ್ರಾರಂಭವಾಗುತ್ತಿದೆ. ಕೇಂದ್ರ ನಗರ ಪಾಲಿಕೆಯ ಎಲ್ಲಾ ಕಂದಾಯ ವಿಭಾಗಗಳ 9 ಕಂದಾಯ ಅಧಿಕಾರಿಗಳ ನೇತೃತ್ವದ ತಂಡದಿಂದ 100 ಕ್ಕೂ ಹೆಚ್ಚು ಸಿಬ್ಬಂದಿಯಿಂದ ಏಕಕಾಲಕ್ಕೆ ಪರಿಶೀಲನೆ ಕಾರ್ಯ ನಡೆಯಲಿದೆ ಎಂದು ಹೇಳಲಾಗಿದೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಂದಾಯ ಅಧಿಕಾರಿ, ಸಿ.ವಿ.ರಾಮನ್ ನಗರ ಹಾಗೂ ಕಂದಾಯ ಅಧಿಕಾರಿ, ಶಾಂತಿನಗರ ವಿಭಾಗ ವ್ಯಾಪ್ತಿಯಲ್ಲಿರುವ ಇಂದಿರಾನಗರ, 100 ಅಡಿ ರಸ್ತೆಯ ಹಾಗೂ ಅಕ್ಕಪಕ್ಕದಲ್ಲಿನ ರಸ್ತೆಗೆ ಹೊಂದಿಕೊಂಡಿರುವ ಎಲ್ಲಾ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆಗೆ ಸಂಬಂಧಿಸಿದಂತೆ ನವೆಂಬರ್ 14ರಂದು ಬೆಳಿಗ್ಗೆ 10ಗಂಟೆಗೆ ಸರ್ವೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ಕಂದಾಯ ಅಧಿಕಾರಿಗಳ ನೇತೃತ್ವದ 9 ತಂಡಗಳ ಸುಮಾರು 100 ಕ್ಕೂ ಹೆಚ್ಚು ಅಧಿಕಾರಿ / ಸಿಬ್ಬಂದಿಯಿಂದ ಇಂದಿರಾನಗರ, 100 ಅಡಿ ರಸ್ತೆ, ದೊಮ್ಮಲೂರು ಬ್ರಿಡ್ಜ್ ವಾಣಿಜ್ಯ ಸ್ವತ್ತುಗಳ ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆ ಕಾರ್ಯ ನಡೆಸಲಾಗುತ್ತದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ.
ಏಕಕಾಲಕ್ಕೆ ಸರ್ವೇ ಕಾರ್ಯಾಚರಣೆ
ಇನ್ನು ಈ ಪರಿಶೀಲನೆಯು ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು, ಮೌಲ್ಯಮಾಪಕರು, ಕಂದಾಯ ಪರಿವೀಕ್ಷಕರು, ಕಂದಾಯ ವಸೂಲಿಗಾರರು, ವಾಣಿಜ್ಯ ಸ್ವತ್ತುಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳೊಂದಿಗೆ ಸ್ಥಳದಲ್ಲಿ ಹಾಜರಿದ್ದು, ಕಂದಾಯ ಪಾವತಿಯ ಮರುಪರಿಶೀಲನೆ ಹಾಗೂ ಪರಿಷ್ಕರಣೆ ಸರ್ವೇ ಕಾರ್ಯ ನಡೆಸಲಿದ್ದಾರೆ.
ಅಲ್ಲದೇ ಈ ಸರ್ವೇ ಕಾರ್ಯಕ್ಕೆ ನೆರವಾಗಲು ನಗರ ಯೋಜನೆ, ಆರೋಗ್ಯ ವೈದ್ಯಾಧಿಕಾರಿ, ಕಾರ್ಯಪಾಲಕ ಎಂಜಿನಿಯರರು, ವಾರ್ಡ್ಗಳ ಮಾರ್ಷಲ್ಸ್ ಗಳ ಸಮನ್ವಯದೊಂದಿಗೆ ನಡೆಯಲಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications